AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮೊದಲೇ ಮಾರಾಟ ಆಯ್ತು ‘ಫಾರ್ ರಿಜಿಸ್ಟ್ರೇಷನ್’ ಡಬ್ಬಿಂಗ್ ಹಕ್ಕು

ಶಿವರಾಜ್​ಕುಮಾರ್ ನಟನೆಯ 125ನೇ ಸಿನಿಮಾ ‘ವೇದ’ ತೆಲುಗಿಗೂ ಡಬ್ ಆಯಿತು. ಈ ಚಿತ್ರವನ್ನು ತೆಲುಗಿನಲ್ಲಿ ಎಂವಿಆರ್ ಕೃಷ್ಣ ಅವರು ರಿಲೀಸ್ ಮಾಡಿದ್ದರು. ಈಗ ಅವರು. ‘ಫಾರ್ ರಿಜಿಸ್ಟ್ರೇಷನ್’ ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನವೇ ಡಬ್ಬಿಂಗ್ ರೈಟ್ಸ್ ಸೇಲ್ ಆಗಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ರಿಲೀಸ್​ಗೂ ಮೊದಲೇ ಮಾರಾಟ ಆಯ್ತು ‘ಫಾರ್ ರಿಜಿಸ್ಟ್ರೇಷನ್’ ಡಬ್ಬಿಂಗ್ ಹಕ್ಕು
ಮಿಲನಾ-ಪೃಥ್ವಿ
ರಾಜೇಶ್ ದುಗ್ಗುಮನೆ
|

Updated on: Feb 22, 2024 | 7:30 PM

Share

ಕನ್ನಡ ಸಿನಿಮಾರಂಗದ ಚಿತ್ರಗಳ ಬಗ್ಗೆ ಪರಭಾಷೆಯವರೂ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಈ ಕಾರಣಕ್ಕೆ ಕನ್ನಡದ ಅನೇಕ ಸಿನಿಮಾಗಳು ಪರಭಾಷೆಗೆ ಡಬ್ ಆಗಿ ರಿಲೀಸ್ ಆಗುತ್ತವೆ. ಕೇವಲ ಸ್ಟಾರ್ ಹೀರೋಗಳ ಸಿನಿಮಾಗಳು ಮಾತ್ರವಲ್ಲದೆ ಹೊಸಬರ ಸಿನಿಮಾಗಳು ಕೂಡ ಪರಭಾಷೆಗೆ ಡಬ್ ಆಗುತ್ತಿವೆ. ಇದಕ್ಕೆ ಹೊಸ ಉದಾಹರಣೆ ‘ಫಾರ್ ರಿಜಿಸ್ಟ್ರೇಷನ್’ (For Registration) ಸಿನಿಮಾ. ಫೆಬ್ರವರಿ 23ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ಸಿನಿಮಾದ ಡಬ್ಬಿಂಗ್ ಹಕ್ಕು ಮಾರಾಟ ಆಗಿದೆ.

ನವೀನ್ ದ್ವಾರಕಾನಾಥ್ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಇದು ಅವರಿಗೆ ಮೊದಲ ಅನುಭವ. ನವೀನ್ ರಾವ್ ನಿರ್ಮಾಣ ಮಾಡಿದ್ದಾರೆ. ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಈ ಚಿತ್ರದಲ್ಲಿ ನಟಿಸಿದ್ದಾರೆ. ‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಡಬ್ಬಿಂಗ್ ಹಕ್ಕನ್ನು ತೆಲುಗಿನ ಖ್ಯಾತ ನಿರ್ಮಾಪಕರೊಬ್ಬರು ಭಾರೀ ಮೊತ್ತಕ್ಕೆ ಖರೀದಿ ಮಾಡಿದ್ದಾರೆ. ಅವರು ಬೇರಾರೂ ಅಲ್ಲ ಎಂವಿಆರ್ ಕೃಷ್ಣ.

ಶಿವರಾಜ್​ಕುಮಾರ್ ನಟನೆಯ 125ನೇ ಸಿನಿಮಾ ‘ವೇದ’ ತೆಲುಗಿಗೂ ಡಬ್ ಆಯಿತು. ಈ ಚಿತ್ರವನ್ನು ತೆಲುಗಿನಲ್ಲಿ ಎಂವಿಆರ್ ಕೃಷ್ಣ ಅವರು ರಿಲೀಸ್ ಮಾಡಿದ್ದರು. ಈಗ ಅವರು. ‘ಫಾರ್ ರಿಜಿಸ್ಟ್ರೇಷನ್’ ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನವೇ ಡಬ್ಬಿಂಗ್ ರೈಟ್ಸ್ ಸೇಲ್ ಆಗಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ಟ್ರೇಲರ್ ಹಾಗೂ ಹಾಡಿನ ಮೂಲಕ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಗಮನ ಸೆಳೆದಿದೆ. ಪೃಥ್ವಿ ಅಂಬಾರ್ ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಸೃಷ್ಟಿ ಆಗುತ್ತಿದೆ. ಮಿಲನಾ ನಾಗರಾಜ್ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಇದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇಬ್ಬರ ಕಾಂಬಿನೇಷನ್ ಎನ್ನುವ ಕಾರಣಕ್ಕೆ ಬೇಡಿಕೆ ಸೃಷ್ಟಿ ಆಗಿದೆ.

ಇದನ್ನೂ ಓದಿ: ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ಗೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಇಷ್ಟ ಆಯ್ತಾ? ವಿಡಿಯೋ ನೋಡಿ..

ರವಿಶಂಕರ್, ಸುಧಾ ಬೆಳವಾಡಿ, ತಬಲಾ ನಾಣಿ, ಬಾಬು ಹಿರಣಯ್ಯ, ರಮೇಶ್ ಭಟ್, ಸ್ವಾತಿ, ಉಮೇಶ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ನವೀನ್ ದ್ವಾರಕನಾಥ್ ಅವರೇ ಚಿತ್ರಕಥೆ ಬರೆದಿದ್ದಾರೆ. ಆರ್.ಕೆ ಹರೀಶ್ ಸಂಗೀತ ಸಂಯೋಜನೆ, ಅಭಿಲಾಷ್ ಕಲಾತಿ, ಅಭಿಷೇಕ್ ಜಿ. ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಈ ಸಿನಿಮಾಗೆ ಇದೆ. ‘ನಿಶ್ಚಲ್ ಫಿಲ್ಮ್ಸ್​’ ಬ್ಯಾನರ್​​ ಮೂಲಕ ನವೀನ್ ರಾವ್ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ