AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milana Krishna Marriage: ಪ್ರೇಮಿಗಳ ದಿನ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾದ ಕೃಷ್ಣ – ಮಿಲನಾ ಜೋಡಿ

Milana Nagaraj - Darling Krishna Wedding: ಬಹುಕಾಲದಿಂದ ಪ್ರೀತಿಯಲ್ಲಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಫೆಬ್ರವರಿ 14ರಂದು ಹಸೆಮಣೆ ಏರಲಿದ್ದು, ಈಗಾಗಲೇ ವಿವಾಹ ಪೂರ್ವ ಪೂಜಾ ಕಾರ್ಯಕ್ರಮಗಳ ಕುರಿತಾದ ಕೆಲ ಫೋಟೋ, ವಿಡಿಯೋಗಳನ್ನು ಇಬ್ಬರೂ ಹಂಚಿಕೊಂಡಿದ್ದರು.

Milana Krishna Marriage: ಪ್ರೇಮಿಗಳ ದಿನ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾದ ಕೃಷ್ಣ - ಮಿಲನಾ ಜೋಡಿ
ಡಾರ್ಲಿಂಗ್​ ಕೃಷ್ಣ, ಮಿಲನಾ ನಾಗರಾಜ್​
Follow us
Skanda
|

Updated on: Feb 13, 2021 | 12:59 PM

ಈ ಬಾರಿ ಪ್ರೇಮಿಗಳ ದಿನಕ್ಕೆ ಚಂದನವನದ (Sandalwood) ಹೊಸ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದೆ. ಬಹುಕಾಲದಿಂದ ಪ್ರೀತಿಯಲ್ಲಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ (Darling Krishna and Milana Nagaraj) ಫೆಬ್ರವರಿ 14ರಂದು ಹಸೆಮಣೆ ಏರಲಿದ್ದು, ಈಗಾಗಲೇ ವಿವಾಹ ಪೂರ್ವ ಪೂಜಾ ಕಾರ್ಯಕ್ರಮಗಳ ಕುರಿತಾದ ಕೆಲ ಫೋಟೋ, ವಿಡಿಯೋಗಳನ್ನು ಇಬ್ಬರೂ ಹಂಚಿಕೊಂಡಿದ್ದರು. ಲವ್​ ಮಾಕ್ಟೇಲ್ (Love Mocktail) ಚಿತ್ರದ ಮೂಲಕ ಮೋಡಿ ಮಾಡಿದ್ದ ಈ ಇಬ್ಬರೂ ನಿಜ ಜೀವನದಲ್ಲಿ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

ಪ್ರೇಮಿಗಳ ದಿನಾಚರಣೆಯಂದೇ ಮದುವೆಯಾಗುವುದಾಗಿ ಇವರಿಬ್ಬರೂ ಕಳೆದ ವರ್ಷವೇ ಸುಳಿವು ನೀಡಿದ್ದರು. ನಂತರ ಅದು ಅಧಿಕೃತವಾಗಿ ಇದೀಗ ಅವರಿಬ್ಬರೂ ಒಂದಾಗುವ ಕಾಲ ಸನ್ನಿಹಿತವಾಗಿದೆ. ವಿವಾಹ ಕಾರ್ಯಕ್ರಮಕ್ಕೆ ಇವರಿಬ್ಬರೂ ಚಂದನವನದ ಅನೇಕ ನಟ, ನಟಿಯರನ್ನು ಆಹ್ವಾನಿಸಿದ್ದು, ಬಹುತೇಕರು ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಬೆಳಗ್ಗೆ 9.30 ರಿಂದ 10.30ರ ಕಾಲದಲ್ಲಿ ಧಾರೆ ಮುಹೂರ್ತ ಇದೆ ಎಂದು ತಿಳಿದುಬಂದಿದೆ. ಅಂತೆಯೇ, ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಪ್ರೇಮಿಗಳ ದಿನದಂದೇ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ಮದುವೆ

MILANA-NAGARAJ-DARLING-KRISHNA

ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

 

ವಿವಾಹ ಪೂರ್ವ ಶಾಸ್ತ್ರಕ್ಕೆ ಸಂಬಂಧಿಸಿದಂತೆ ಡಾರ್ಲಿಂಗ್ ಕೃಷ್ಣ ಫೇಸ್​ಬುಕ್​ನಲ್ಲಿ ಅರಶಿನ ನೀರಿನಲ್ಲಿ ಸ್ನಾನ ಮಾಡುತ್ತಿರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇನ್ನು ಮಿಲನಾ ನಾಗರಾಜ್​ ಒಂದು ವಾರದ ಹಿಂದೆಯೇ ದೇಗುಲಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡು, ನಮ್ಮ ವಿವಾಹಕ್ಕೆ ಸಂಬಂಧಿಸಿದ ಪೂಜಾ ಕಾರ್ಯಕ್ರಮ ಶುರುವಾಗಿದೆ ಎಂದು ಹೇಳಿಕೊಂಡಿದ್ದರು. ಸದ್ಯ ಮದುವೆಗೆ ಸಿದ್ಧವಾಗಿರುವ ಈ ಜೋಡಿ ಶೀಘ್ರದಲ್ಲೇ ಲವ್​ ಮಾಕ್ಟೇಲ್ 2 ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ