AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milana Nagaraj: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಸರ್ಪ್ರೈಸ್​ ಎಂಟ್ರಿ ನೀಡಿದ ಮಿಲನಾ ನಾಗರಾಜ್​; ಹೆಚ್ಚಿತು ನಿರೀಕ್ಷೆ

Kausalya Supraja Rama: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಮತ್ತು ಬೃಂದಾ ಆಚಾರ್ಯ ಜೊತೆ ಮಿಲನಾ ನಾಗರಾಜ್​ ಅವರಿಗೂ ಒಂದು ಮುಖ್ಯವಾದ ಪಾತ್ರವಿದೆ. ಆ ಪಾತ್ರದ ಬಗ್ಗೆ ಕೌತುಕ ಮೂಡಿದೆ.

Milana Nagaraj: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಸರ್ಪ್ರೈಸ್​ ಎಂಟ್ರಿ ನೀಡಿದ ಮಿಲನಾ ನಾಗರಾಜ್​; ಹೆಚ್ಚಿತು ನಿರೀಕ್ಷೆ
ಮಿಲನಾ ನಾಗರಾಜ್​
ಮದನ್​ ಕುಮಾರ್​
|

Updated on:Jul 17, 2023 | 3:54 PM

Share

ನಟಿ ಮಿಲನಾ ನಾಗರಾಜ್​ (Milana Nagaraj) ಅವರು ಕನ್ನಡ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ಲವ್​ ಮಾಕ್ಟೇಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಅದೃಷ್ಟ ಖುಲಾಯಿಸಿತು. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ವಿಶೇಷ ಎಂದರೆ ಪತಿ ಡಾರ್ಲಿಂಗ್​ ಕೃಷ್ಣ (Darling Krishna) ಜೊತೆಗೂ ಅವರು ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅದಕ್ಕೆ ಹೊಸ ಸೇರ್ಪಡೆ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ. ಶಶಾಂಕ್​ (Director Shashank) ನಿರ್ದೇಶನದ ಈ ಸಿನಿಮಾದಲ್ಲಿ ಮಿಲನಾ ನಾಗರಾಜ್​ ನಟಿಸಿದ್ದಾರೆ ಎಂದು ಮೊದಲೇ ತಿಳಿಸಿರಲಿಲ್ಲ. ಆದರೆ ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್​ನಲ್ಲಿ ಈ ವಿಚಾರ ರಿವೀಲ್​ ಆಯಿತು. ಅದರಿಂದಾಗಿ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಶಿವಾನಿ..’ ಮತ್ತು ‘ಪ್ರೀತಿಸುವೆ..’ ಹಾಡುಗಳು ಗಮನ ಸೆಳೆದಿವೆ. ಈ ಚಿತ್ರದಲ್ಲಿ ಮಿಲನಾ ನಾಗರಾಜ್​ ಅವರಿಗೂ ಒಂದು ಮುಖ್ಯವಾದ ಪಾತ್ರವಿದೆ. ಆದರೆ ಆ ಪಾತ್ರದ ಬಗ್ಗೆ ಹೆಚ್ಚಿನ ವಿವರವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಟ್ರೇಲರ್​ನ ಕೊನೆಯಲ್ಲಿ ಮಿಲನಾ ನಾಗರಾಜ್​ ಅವರು ಸ್ಟೈಲಿಶ್​ ಆಗಿ ಎಂಟ್ರಿ ನೀಡಿದ್ದಾರೆ. ಇದು ತ್ರಿಕೋನ ಪ್ರೇಮಕಥೆಯ ಸಿನಿಮಾ ಇರಬಹುದೇ ಎಂಬ ಪ್ರಶ್ನೆ ಕೂಡ ಅಭಿಮಾನಿಗಳಲ್ಲಿ ಮೂಡಿದೆ. ಚಿತ್ರ ಬಿಡುಗಡೆ ಆದಾಗ ಅದಕ್ಕೆ ಉತ್ತರ ಸಿಗಲಿದೆ.

ಕೌಸಲ್ಯ ಸುಪ್ರಜಾ ರಾಮ; ಸಿನಿಮಾ ಬಗ್ಗೆ ನಿರ್ಮಾಪಕ ಬಿಸಿ ಪಾಟೀಲ್ ಮಾತು

ಓರ್ವ ಅನುಭವಿ ನಟಿಯೇ ಈ ಪಾತ್ರವನ್ನು ಮಾಡಬೇಕು ಎಂಬುದು ನಿರ್ದೇಶಕ ಶಶಾಂಕ್​ ಅವರ ಆಶಯ ಆಗಿತ್ತು. ಆ ಪಾತ್ರಕ್ಕೆ ಮಿಲನಾ ನಾಗರಾಜ್​ ಅವರು ಸೂಕ್ತವಾಗಿ ಹೊಂದಿಕೆ ಆಗಿದ್ದಾರೆ ಎಂದು ಶಶಾಂಕ್​ ಹೇಳಿದ್ದಾರೆ. ತುಂಬ ಸೂಕ್ಷ್ಮವಾದ ಈ ಪಾತ್ರದ ಬಗ್ಗೆ ಪ್ರೇಕ್ಷಕರಿಗೆ ನಿರೀಕ್ಷೆ ಮೂಡಿದೆ. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಪ್ರೊಮೋಷನಲ್​ ವಿಡಿಯೋಗಳಲ್ಲಿ ಮಿಲನಾ ಅವರು ಕಾಣಿಸಿಕೊಂಡಿದ್ದಾರೆ. ಅವುಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕೌಸಲ್ಯ ಸುಪ್ರಜಾ ರಾಮ; ಟ್ರೈಲರ್ ಬಿಡುಗಡೆ: ಪುರುಷ ಅಹಂಕಾರದ ಸುತ್ತ ಪ್ರೇಮಕತೆ

‘ಕೌರವ ಪ್ರೊಡಕ್ಷನ್ ಹೌಸ್​’ ಮತ್ತು ‘ಶಶಾಂಕ್​ ಸಿನಿಮಾಸ್​’ ಮೂಲಕ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ನಿರ್ಮಾಣ ಆಗಿದೆ. ಡಾರ್ಲಿಂಗ್​ ಕೃಷ್ಣ, ಮಿಲನಾ ನಾಗರಾಜ್​, ಬೃಂದಾ ಆಚಾರ್ಯ ಜೊತೆ ನಾಗಭೂಷಣ, ರಂಗಾಯಣ ರಘು, ಸುಧಾ ಬೆಳವಾಡಿ, ಅಚ್ಯುತ್​ ಕುಮಾರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ಈ ಚಿತ್ರ ಜುಲೈ 28ರಂದು ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:53 pm, Mon, 17 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್