AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ರಾಜ್ ಸಹೋದರ ವರದಪ್ಪನವರ ಮೊಮ್ಮಗನ ಮೊದಲ ಸಿನಿಮಾ ‘ಮಿಂಚುಹುಳು’ ಅ.4ಕ್ಕೆ ರಿಲೀಸ್

ಕನ್ನಡದ ‘ಮಿಂಚುಹುಳು’ ಸಿನಿಮಾ ಅಕ್ಟೋಬರ್​ 4ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಪೃಥ್ವಿರಾಜ್​, ಪ್ರೀತಂ ಕೊಪ್ಪದ ಮುಂತಾದವರು ನಟಿಸಿದ್ದಾರೆ. ಮಹೇಶ್ ಕುಮಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಹಂಸಲೇಖ, ಜಯಮಾಲಾ, ಪಿ. ಶೇಷಾದ್ರಿ ಮುಂತಾದ ಗಣ್ಯರು ಸಿನಿಮಾ ವೀಕ್ಷಿಸಿ ಭೇಷ್​ ಎಂದಿದ್ದಾರೆ.

ಡಾ. ರಾಜ್ ಸಹೋದರ ವರದಪ್ಪನವರ ಮೊಮ್ಮಗನ ಮೊದಲ ಸಿನಿಮಾ ‘ಮಿಂಚುಹುಳು’ ಅ.4ಕ್ಕೆ ರಿಲೀಸ್
‘ಮಿಂಚುಹುಳು’ ಸಿನಿಮಾ ಸ್ಟಿಲ್
ಮದನ್​ ಕುಮಾರ್​
|

Updated on: Sep 27, 2024 | 9:21 PM

Share

ಕನ್ನಡ ಚಿತ್ರರಂಗಕ್ಕೆ ಡಾ. ರಾಜ್​ಕುಮಾರ್​ ಅವರ ಕುಟುಂಬ ಸಾಕಷ್ಟು ಕೊಡುಗೆ ನೀಡಿದೆ. ಅವರ ಫ್ಯಾಮಿಲಿಯ ಹಲವರು ಸ್ಯಾಂಡಲ್​ವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಅದೇ ಕುಟುಂಬದ ಹೊಸ ತಲೆಮಾರಿನ ಪ್ರತಿಭೆಗಳು ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಡಾ. ರಾಜ್​ಕುಮಾರ್ ಅವರ ಹಿಂದೆ ಶಕ್ತಿಯಾಗಿ ನಿಂತಿದ್ದವರು ಸಹೋದರ ವರದಪ್ಪ. ಈಗ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್‌ ಕೂಡ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಮಿಂಚುಹುಳು’ ಅ.4ರಂದು ಬಿಡುಗಡೆ ಆಗಲಿದೆ.

‘ಮಿಂಚುಹುಳು’ ಸಿನಿಮಾಗೆ ಮಹೇಶ್ ಕುಮಾರ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಾಜಗೋಪಾಲ್ ದೊಡ್ಡಹುಲ್ಲೂರು ಅವರು ನಿರ್ಮಾಣ ಮಾಡಿದ್ದಾರೆ. ಅವರಿಗೆ ವಿಜಯ್ ಕುಮಾರ್, ಅಬ್ದುಲ್ ರಫೀಕ್ ಉಲ್ಲಾ ಕೂಡ ಸಾಥ್ ನೀಡಿದ್ದಾರೆ. ಅಣ್ಣಾವ್ರ ಆತ್ಮೀಯರಾದ ದೊಡ್ಡಹುಲ್ಲೂರು ರುಕ್ಕೋಜಿ ರಾವ್ ಅವರು ತಮ್ಮೂರಿನ ನಿರ್ಮಾಪಕರಿಗೆ ಬೆಂಬಲವಾಗಿ ನಿಂತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ಆಯಿತು. ಅದರಲ್ಲಿ ಹಂಸಲೇಖ, ಪಿ. ಶೇಷಾದ್ರಿ, ಜಯಮಾಲಾ, ಲಹರಿ ವೇಲು, ಪ್ರೊ. ರಾಜಪ್ಪ ದಳವಾಯಿ, ಶಾಸಕ ಶರತ್ ಬಚ್ಚೇಗೌಡ ಮುಂತಾದ ಗಣ್ಯರು ಭಾಗಿ ಆಗಿದ್ದರು.

‘ಮಿಂಚುಹುಳು’ ಸಿನಿಮಾ ತಂಡ

ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ, ಲಕ್ಷ್ಮಿ, ಪೂರ್ಣಿಮಾ ರಾಮ್ ಕುಮಾರ್, ದೊಡ್ಡಹುಲ್ಲೂರು ರುಕ್ಕೋಜಿರಾವ್ ಕೂಡ ಎಲ್ಲರ ಜತೆ ಸೇರಿ ಸಿನಿಮಾ ವೀಕ್ಷಿಸಿದರು. ಅಪ್ಪ-ಮಗನ ಕಥೆ ಈ ಸಿನಿಮಾದಲ್ಲಿ ಇದೆ. ಮನೆಗೆ ವಿದ್ಯುತ್ ಹಾಕಿಸಲು ಬಾಲಕ ಕೂಡಿಟ್ಟ ಹಣವನ್ನು ಇಲಿ ಕಚ್ಚಿ ಹಾಕುತ್ತದೆ. ಮಿಂಚು ಹುಳುವೊಂದನ್ನು ನೋಡಿದ ಬಳಿಕ ಆ ಹುಡುಗನಿಗೆ ಹೊಸ ಆಲೋಚನೆ ಬರುತ್ತದೆ. ಅದರಿಂದ ಆತನ ಜೀವನದಲ್ಲಿ ಹೊಸ ದಾರಿ ಕಾಣುತ್ತದೆ. ಈ ಕಥಾಹಂದರಕ್ಕೆ ಗಣ್ಯರು ಮೆಚ್ಚುಗೆ ಸೂಚಿಸಿದ್ದಾರೆ.

‘ಈ ಸಿನಿಮಾ ಆಗಲು ಪುನೀತ್ ರಾಜ್​ಕುಮಾರ್ ಅವರೇ ಕಾರಣ. ಕನ್ನಡಕ್ಕೆ ಉತ್ತಮ ಕಥಾವಸ್ತು ಇರುವ ಸಿನಿಮಾಗಳ ಅಗತ್ಯವಿದೆ’ ಎಂದು ನಿರ್ದೇಶಕ ಮಹೇಶ್ ಕುಮಾರ್ ಹೇಳಿದ್ದಾರೆ. ನಟ ಪೃಥ್ವಿರಾಜ್‌ ಮಾತನಾಡಿ, ‘ಈ ಸಿನಿಮಾದಲ್ಲಿ ಮುಖ್ಯ ಪಾತ್ರಕ್ಕೆ ಪೂರಕವಾಗಿ‌ ನಿಲ್ಲುವ ಪಾತ್ರ ನನಗೆ ಸಿಕ್ಕಿದೆ’ ಎಂದರು. ನಿರ್ಮಾಪಕ ರಾಜ್ ಗೋಪಾಲ್ ಮಾತನಾಡಿ, ‘ನಾನು ಸಿನಿಮಾ ಮಾಡಬೇಕೆಂದು ಎಂದುಕೊಂಡಿರಲಿಲ್ಲ. ಬಾಲ್ಯದ ಗೆಳೆಯ ರುಕ್ಕೋಜಿ ಅವರು ಈ ರೀತಿಯ ಕಥೆ ಇದೆ ಅಂತ ಹೇಳಿದ್ದಕ್ಕೆ ಎಲ್ಲರೂ ಸೇರಿ ಈ ಸಿನಿಮಾವನ್ನು ಮಾಡಿದ್ದೇವೆ‌’ ಎಂದರು.

ಇದನ್ನೂ ಓದಿ: ರಾಜ್​ಕುಮಾರ್ ಸಿನಿಮಾ ಸಹಿಹಾಕಿದ ಬಳಿಕ ಬದಲಾಯ್ತು ಸುಧೀರ್ ಬದುಕು

ಜಯಮಾಲಾ, ಹಂಸಲೇಖ ಅವರು ಸಿನಿಮಾದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದರು. ‘ವರದಪ್ಪ ಒಂದು ಭಾಷಣ ಮಾಡಿದ್ದು ನಾನು ಎಂದಿಗೂ ನೋಡಿಲ್ಲ. ಹಿಂದೆಯೇ ನಿಂತುಕೊಂಡು ನೋಡಿಕೊಳ್ಳುತ್ತಿದ್ದರು. ಅವರನ್ನು ಭೂಮಿತೂಕದ ವ್ಯಕ್ತಿ ಅಂತ ರಾಜಣ್ಣ ಕರೆಯುತ್ತಿದ್ದರು. ಈಗ ಅವರ ಮೊಮ್ಮಗ ಬೇರಿನೆಡೆಗೆ ಹೊರಟಿದ್ದಾನೆ’ ಎಂದರು ಹಂಸಲೇಖ. ‘ಈ ಸಿನಿಮಾವನ್ನು ಮಕ್ಕಳು ಮಾತ್ರವಲ್ಲದೇ ದೊಡ್ಡವರು ಕೂಡ ನೋಡಬೇಕು’ ಎಂದು ಪಿ. ಶೇಷಾದ್ರಿ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!