AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ, ಸಮುದಾಯದ ಬಗ್ಗೆ ಕಿಚ್ಚ ಸುದೀಪ್​ಗೆ ಕಿವಿಮಾತು ಹೇಳಿದ್ದೇನೆ: ಸಚಿವ ಕೆ.ಎನ್.ರಾಜಣ್ಣ

Sudeep: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದ ಸುದೀಪ್​ಗೆ ರಾಜಕೀಯ ಹಾಗೂ ಸಮುದಾಯದ ಕುರಿತಾಗಿ ಕಿವಿಮಾತು ಹೇಳಿರುವುದಾಗಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ರಾಜಕೀಯ, ಸಮುದಾಯದ ಬಗ್ಗೆ ಕಿಚ್ಚ ಸುದೀಪ್​ಗೆ ಕಿವಿಮಾತು ಹೇಳಿದ್ದೇನೆ: ಸಚಿವ ಕೆ.ಎನ್.ರಾಜಣ್ಣ
ಸುದೀಪ್-ಕೆಎನ್ ರಾಜಣ್ಣ
ಮಂಜುನಾಥ ಸಿ.
|

Updated on: Jun 18, 2023 | 10:11 PM

Share

ನಟ ಕಿಚ್ಚ ಸುದೀಪ್ (Sudeep) ಈ ಬಾರಿ ಸಿನಿಮಾ ಹೊರತಾಗಿ ರಾಜಕಾರಣದ (Politics) ಕಾರಣಕ್ಕೆ ಅತಿಹೆಚ್ಚು ಸುದಿಯಲ್ಲಿದ್ದ ನಟ. ಈ ಬಾರಿ ಬಿಜೆಪಿಗೆ ಬಂಬಲ ಘೋಷಿಸಿದ್ದ ನಟ ಕಿಚ್ಚ ಸುದೀಪ್ ಹಲವಾರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು. ನರೇಂದ್ರ ಮೋದಿಯವರನ್ನು (Narendra Modi) ಕೊಂಡಾಡಿದ್ದರು. ಆದರೆ ಅವರ ಪ್ರಚಾರದಿಂದ ಬಿಜೆಪಿಗೆ ದೊಡ್ಡ ಲಾಭವೇನೂ ಆಗಲಿಲ್ಲ. ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿತು. ಇದೀಗ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ (KN Rajanna), ತಾವು ಸಮುದಾಯ ಹಾಗೂ ರಾಜಕೀಯದ ಬಗ್ಗೆ ಸುದೀಪ್​ಗೆ ಕಿವಿಮಾತು ಹೇಳಿರುವುದಾಗಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಸುದ್ದಿಗಾರರೊಟ್ಟಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ, ”ಕಿಚ್ಚ ಸುದೀಪ್‌ ನಮ್ಮ ಸಮುದಾಯದ ಮೇರುನಟ. ಡಾ.ರಾಜ್ ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು, ರಾಜಕೀಯದಿಂದ ದೂರ ಇದ್ದಿದ್ದಕ್ಕೆ ದೇವತಾಮನುಷ್ಯ ಎಂದು ಹೇಳುತ್ತಾರೆ. ದೇವತಾ ಮನುಷ್ಯ ಎಂದು ಎಲ್ಲಾ ಸಮುದಾಯದವರು ಗುರುತಿಸುತ್ತಾರೆ‌. ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ” ಎಂದರು.

”ಒಂದು ಸಮುದಾಯದ ಅಭ್ಯರ್ಥಿ ಪರ, ವಿರುದ್ಧ ಸಿನಿಮಾ ನಟರು ಪ್ರಚಾರ ಮಾಡಿದರೆ, ಆ ಸಮುದಾಯದವರು ಆ ನಟನ ಪರ ಅಥವಾ ವಿರುದ್ಧ ಆಗುತ್ತಾರೆ. ಸಿನಿಮಾ ನಟರಿಗೆ ಅದು ಒಳ್ಳೆಯದಲ್ಲ. ಅದಕ್ಕೆ ಅವಕಾಶ ಕೊಡಬೇಡಿ ಎಂದು ಕಿವಿಮಾತು ಹೇಳಿದ್ದೇನೆ” ಎಂದು ರಾಜಣ್ಣ ಹೇಳಿದ್ದಾರೆ.

ಇದನ್ನೂ ಓದಿ:ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

ಕಿಚ್ಚ ಸುದೀಪ್ ಅವರು ಈ ಬಾರಿ ತಾವು ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಿಸುತ್ತಿರುವುದಾಗಿ ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಕೊಂಡಾಡಿದ್ದರು. ಅಂತೆಯೇ ರಾಜ್ಯದಾದ್ಯಂತ ಸಂಚರಿಸಿ ಬಿಜೆಪಿ ಪಕ್ಷ ಹೇಳಿದ ಹಲವಾರು ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದರು. ಕರಾವಳಿ ಭಾಗ ಹಾಗೂ ಬೆಂಗಳೂರಿನ ಕೆಲವು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸುದೀಪ್ ಪ್ರಚಾರ ಮಾಡಿದ್ದರು. ಆದರೆ ಸುದೀಪ್ ಪ್ರಚಾರದಿಂದ ಬಿಜೆಪಿಗೆ ಯಾವುದೇ ಲಾಭವಾಗಲಿಲ್ಲ. ಚುನಾವಣೆ ಬಳಿಕ ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕೆ ಸುದೀಪ್ ಟೀಕೆಗಳನ್ನು ಸಹ ಎದುರಿಸಬೇಕಾಯ್ತು.

ಈ ಬಾರಿ ಚುನಾವಣೆಯಲ್ಲಿ ಸುದೀಪ್ ಮಾತ್ರವೇ ಅಲ್ಲದೆ ಇನ್ನೂ ಹಲವು ನಟರು ವಿವಿಧ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದರು. ಶಿವರಾಜ್ ಕುಮಾರ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ಧ್ರುವ ಸರ್ಜಾ, ಸಾಧುಕೋಕಿಲ, ನಟಿಯರಾದ ಹರ್ಷಿಕಾ ಪೂಣಚ್ಚ, ಶ್ರುತಿ, ರಮ್ಯಾ ಇನ್ನೂ ಕೆಲವರು ಪ್ರಚಾರ ಮಾಡಿದ್ದರು. ಆದರೆ ಹೆಚ್ಚು ಚರ್ಚೆಯಾಗಿದ್ದು ನಟ ಸುದೀಪ್ ವಿಚಾರ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ