AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಗ’ ಬಳಿಕ ಪಿ.ಸಿ. ಶೇಖರ್ ಜತೆ ಮತ್ತೆ ಕೈ ಜೋಡಿಸಿದ ಮಿತ್ರ; ‘ಮಹಾನ್’ ಚಿತ್ರದಲ್ಲಿ ಪ್ರಮುಖ ಪಾತ್ರ

ವಿಜಯ್ ರಾಘವೇಂದ್ರ ನಟನೆಯ ‘ಮಹಾನ್’ ಚಿತ್ರಕ್ಕೆ ಪಿ.ಸಿ. ಶೇಖರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಟ ಮಿತ್ರ ಅವರಿಗೂ ಪ್ರಮುಖ ಪಾತ್ರ ನೀಡಲಾಗಿದೆ. ಆ ಬಗ್ಗೆ ಚಿತ್ರತಂಡದಿಂದ ಮಾಹಿತಿ ನೀಡಲಾಗಿದೆ. ಈ ಸಿನಿಮಾವನ್ನು ಪ್ರಕಾಶ್ ಬುದ್ದೂರು ಅವರು ನಿರ್ಮಾಣ ಮಾಡುತ್ತಿದ್ದಾರೆ.

‘ರಾಗ’ ಬಳಿಕ ಪಿ.ಸಿ. ಶೇಖರ್ ಜತೆ ಮತ್ತೆ ಕೈ ಜೋಡಿಸಿದ ಮಿತ್ರ; ‘ಮಹಾನ್’ ಚಿತ್ರದಲ್ಲಿ ಪ್ರಮುಖ ಪಾತ್ರ
Mithra
ಮದನ್​ ಕುಮಾರ್​
|

Updated on: Jul 01, 2025 | 10:30 PM

Share

2017ರಲ್ಲಿ ಕನ್ನಡದ ‘ರಾಗ’ ಸಿನಿಮಾ ಬಿಡುಗಡೆ ಆಗಿತ್ತು. ಪಿ.ಸಿ. ಶೇಖರ್ (PC Shekar) ನಿರ್ದೇಶನದ ಆ ಸಿನಿಮಾದಲ್ಲಿ ಮಿತ್ರ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದರು. ಈಗ ಮತ್ತೆ ಪಿ.ಸಿ. ಶೇಖರ್ ಮತ್ತು ಮಿತ್ರ ಅವರು ಕೈ ಜೋಡಿಸಿದ್ದಾರೆ. ಹೌದು, ಪಿ.ಸಿ. ಶೇಖರ್ ಆ್ಯಕ್ಷನ್-ಕಟ್ ಹೇಳುತ್ತಿರುವ ‘ಮಹಾನ್’ (Mahan) ಸಿನಿಮಾದಲ್ಲಿ ಮಿತ್ರ ಅವರಿಗೆ ಒಂದು ಪ್ರಮುಖವಾದ ಪಾತ್ರವನ್ನು ನೀಡಲಾಗಿದೆ. ಈ ಬಗ್ಗೆ ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಮಹಾನ್’ ಚಿತ್ರಕ್ಕೆ ವಿಜಯ್ ರಾಘವೇಂದ್ರ ಅವರು ಹೀರೋ ಆಗಿದ್ದು, ಅವರ ಜೊತೆ ಮಿತ್ರ (Mithra) ತೆರೆಹಂಚಿಕೊಳ್ಳುತ್ತಿದ್ದಾರೆ.

‘ಆಕಾಶ್ ಪಿಕ್ಚರ್ಸ್’ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ‘ಮಹಾನ್’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಮಿತ್ರ ಅವರು ತಮ್ಮ ಪಾತ್ರದ ಬಗ್ಗೆ ಮಾತಾಡಿದ್ದಾರೆ. ‘ನಾನು ರಾಗ ಸಿನಿಮಾದ ಬಳಿಕ ಪಿ.ಸಿ.ಶೇಖರ್ ಅವರ ಜೊತೆ ಮತ್ತೆ ಕೆಲಸ ಮಾಡುತ್ತಿರುವುದು ಖುಷಿ ನೀಡಿದೆ. ರಾಗ ಚಿತ್ರದ ನನ್ನ ಪಾತ್ರಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಮಹಾನ್ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ’ ಎಂದು ಮಿತ್ರ ಹೇಳಿದ್ದಾರೆ.

‘ವಿಜಯ್ ರಾಘವೇಂದ್ರ ಅವರು ಬಹಳ ಅದ್ಭುತವಾದ ಕಲಾವಿದ. ಅವರ ಜೊತೆ ನಟಿಸುತ್ತಿರುವುದಕ್ಕೆ ಸಂತಸ ಇದೆ. ಸಾಮಾಜಿಕ ಕಳಕಳಿಯ ಕಥಾಹಂದರ ಈ ಸಿನಿಮಾದಲ್ಲಿದೆ. ಈ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರವೂ ನಾಯಕನ ಪಾತ್ರದ ಜತೆಗೆ ಸಾಗುತ್ತದೆ. ಪ್ರೇಕ್ಷಕರಿಗೆ ನಮ್ಮ ಕಾಂಬಿನೇಶನ್ ಇಷ್ಟ ಆಗುತ್ತದೆ’ ಎಂದಿದ್ದಾರೆ ಮಿತ್ರ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಮಿತ್ರ ಬಗ್ಗೆ ಪಿ.ಸಿ. ಶೇಖರ್ ಮಾತನಾಡಿದ್ದಾರೆ. ‘ನನ್ನ ಮತ್ತು ಮಿತ್ರ ಕಾಂಬಿನೇಶನ್​ನಲ್ಲಿ ಬಂದ ರಾಗ ಸಿನಿಮಾ ಇಂದಿಗೂ ಜನಪ್ರಿಯವಾಗಿ ಉಳಿದುಕೊಂಡಿದೆ. ಆ ಬಳಿಕ ನನ್ನ ನಿರ್ದೇಶನದ ಸಿನಿಮಾಗಳಲ್ಲಿ ಮಿತ್ರ ಅವರು ಅಭಿನಯಿಸಿಲ್ಲ. ಯಾಕೆಂದರೆ ಮಿತ್ರ ಅವರು ಚಿಕ್ಕ-ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಸಿನಿಮಾದಲ್ಲಿ ನಟಿಸುವುದು ನನಗೆ ಇಷ್ಟವಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಡಿನಲ್ಲಿ ಸಿಕ್ಕಿಹಾಕಿಕೊಂಡ ಹುಡುಗ-ಹುಡುಗಿ ಕಥೆ; ‘ಜಂಗಲ್‌ ಮಂಗಲ್‌’ ಈ ವಾರ ರಿಲೀಸ್

‘ರಾಗ’ ಸಿನಿಮಾದಲ್ಲಿನ ನಟನೆಗೆ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ‘ಈಗ ಮಹಾನ್ ಸಿನಿಮಾದಲ್ಲಿ ಕೂಡ ಎಲ್ಲರ ನೆನಪಿನಲ್ಲಿ ಉಳಿಯುವಂತಹ ಪಾತ್ರ ಅವರಿಗೆ ಇದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೇ ಸೂಕ್ತ ಅಂತ ನನಗೆ ಅನಿಸಿತು. ಸಿನಿಮಾದ ಪೂರ್ತಿ ನಾಯಕನ ಪಾತ್ರದ ಜತೆಗೆ ಸಾಗುವ ಪಾತ್ರ ಇದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಇದ್ದಂತೆ. ಆ ಸ್ಫೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ’ ಎಂದಿದ್ದಾರೆ ಪಿ.ಸಿ. ಶೇಖರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು