AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಗ’ ಬಳಿಕ ಪಿ.ಸಿ. ಶೇಖರ್ ಜತೆ ಮತ್ತೆ ಕೈ ಜೋಡಿಸಿದ ಮಿತ್ರ; ‘ಮಹಾನ್’ ಚಿತ್ರದಲ್ಲಿ ಪ್ರಮುಖ ಪಾತ್ರ

ವಿಜಯ್ ರಾಘವೇಂದ್ರ ನಟನೆಯ ‘ಮಹಾನ್’ ಚಿತ್ರಕ್ಕೆ ಪಿ.ಸಿ. ಶೇಖರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಟ ಮಿತ್ರ ಅವರಿಗೂ ಪ್ರಮುಖ ಪಾತ್ರ ನೀಡಲಾಗಿದೆ. ಆ ಬಗ್ಗೆ ಚಿತ್ರತಂಡದಿಂದ ಮಾಹಿತಿ ನೀಡಲಾಗಿದೆ. ಈ ಸಿನಿಮಾವನ್ನು ಪ್ರಕಾಶ್ ಬುದ್ದೂರು ಅವರು ನಿರ್ಮಾಣ ಮಾಡುತ್ತಿದ್ದಾರೆ.

‘ರಾಗ’ ಬಳಿಕ ಪಿ.ಸಿ. ಶೇಖರ್ ಜತೆ ಮತ್ತೆ ಕೈ ಜೋಡಿಸಿದ ಮಿತ್ರ; ‘ಮಹಾನ್’ ಚಿತ್ರದಲ್ಲಿ ಪ್ರಮುಖ ಪಾತ್ರ
Mithra
ಮದನ್​ ಕುಮಾರ್​
|

Updated on: Jul 01, 2025 | 10:30 PM

Share

2017ರಲ್ಲಿ ಕನ್ನಡದ ‘ರಾಗ’ ಸಿನಿಮಾ ಬಿಡುಗಡೆ ಆಗಿತ್ತು. ಪಿ.ಸಿ. ಶೇಖರ್ (PC Shekar) ನಿರ್ದೇಶನದ ಆ ಸಿನಿಮಾದಲ್ಲಿ ಮಿತ್ರ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದರು. ಈಗ ಮತ್ತೆ ಪಿ.ಸಿ. ಶೇಖರ್ ಮತ್ತು ಮಿತ್ರ ಅವರು ಕೈ ಜೋಡಿಸಿದ್ದಾರೆ. ಹೌದು, ಪಿ.ಸಿ. ಶೇಖರ್ ಆ್ಯಕ್ಷನ್-ಕಟ್ ಹೇಳುತ್ತಿರುವ ‘ಮಹಾನ್’ (Mahan) ಸಿನಿಮಾದಲ್ಲಿ ಮಿತ್ರ ಅವರಿಗೆ ಒಂದು ಪ್ರಮುಖವಾದ ಪಾತ್ರವನ್ನು ನೀಡಲಾಗಿದೆ. ಈ ಬಗ್ಗೆ ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಮಹಾನ್’ ಚಿತ್ರಕ್ಕೆ ವಿಜಯ್ ರಾಘವೇಂದ್ರ ಅವರು ಹೀರೋ ಆಗಿದ್ದು, ಅವರ ಜೊತೆ ಮಿತ್ರ (Mithra) ತೆರೆಹಂಚಿಕೊಳ್ಳುತ್ತಿದ್ದಾರೆ.

‘ಆಕಾಶ್ ಪಿಕ್ಚರ್ಸ್’ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ‘ಮಹಾನ್’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಮಿತ್ರ ಅವರು ತಮ್ಮ ಪಾತ್ರದ ಬಗ್ಗೆ ಮಾತಾಡಿದ್ದಾರೆ. ‘ನಾನು ರಾಗ ಸಿನಿಮಾದ ಬಳಿಕ ಪಿ.ಸಿ.ಶೇಖರ್ ಅವರ ಜೊತೆ ಮತ್ತೆ ಕೆಲಸ ಮಾಡುತ್ತಿರುವುದು ಖುಷಿ ನೀಡಿದೆ. ರಾಗ ಚಿತ್ರದ ನನ್ನ ಪಾತ್ರಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಮಹಾನ್ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ’ ಎಂದು ಮಿತ್ರ ಹೇಳಿದ್ದಾರೆ.

‘ವಿಜಯ್ ರಾಘವೇಂದ್ರ ಅವರು ಬಹಳ ಅದ್ಭುತವಾದ ಕಲಾವಿದ. ಅವರ ಜೊತೆ ನಟಿಸುತ್ತಿರುವುದಕ್ಕೆ ಸಂತಸ ಇದೆ. ಸಾಮಾಜಿಕ ಕಳಕಳಿಯ ಕಥಾಹಂದರ ಈ ಸಿನಿಮಾದಲ್ಲಿದೆ. ಈ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರವೂ ನಾಯಕನ ಪಾತ್ರದ ಜತೆಗೆ ಸಾಗುತ್ತದೆ. ಪ್ರೇಕ್ಷಕರಿಗೆ ನಮ್ಮ ಕಾಂಬಿನೇಶನ್ ಇಷ್ಟ ಆಗುತ್ತದೆ’ ಎಂದಿದ್ದಾರೆ ಮಿತ್ರ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಮಿತ್ರ ಬಗ್ಗೆ ಪಿ.ಸಿ. ಶೇಖರ್ ಮಾತನಾಡಿದ್ದಾರೆ. ‘ನನ್ನ ಮತ್ತು ಮಿತ್ರ ಕಾಂಬಿನೇಶನ್​ನಲ್ಲಿ ಬಂದ ರಾಗ ಸಿನಿಮಾ ಇಂದಿಗೂ ಜನಪ್ರಿಯವಾಗಿ ಉಳಿದುಕೊಂಡಿದೆ. ಆ ಬಳಿಕ ನನ್ನ ನಿರ್ದೇಶನದ ಸಿನಿಮಾಗಳಲ್ಲಿ ಮಿತ್ರ ಅವರು ಅಭಿನಯಿಸಿಲ್ಲ. ಯಾಕೆಂದರೆ ಮಿತ್ರ ಅವರು ಚಿಕ್ಕ-ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಸಿನಿಮಾದಲ್ಲಿ ನಟಿಸುವುದು ನನಗೆ ಇಷ್ಟವಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಡಿನಲ್ಲಿ ಸಿಕ್ಕಿಹಾಕಿಕೊಂಡ ಹುಡುಗ-ಹುಡುಗಿ ಕಥೆ; ‘ಜಂಗಲ್‌ ಮಂಗಲ್‌’ ಈ ವಾರ ರಿಲೀಸ್

‘ರಾಗ’ ಸಿನಿಮಾದಲ್ಲಿನ ನಟನೆಗೆ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ‘ಈಗ ಮಹಾನ್ ಸಿನಿಮಾದಲ್ಲಿ ಕೂಡ ಎಲ್ಲರ ನೆನಪಿನಲ್ಲಿ ಉಳಿಯುವಂತಹ ಪಾತ್ರ ಅವರಿಗೆ ಇದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೇ ಸೂಕ್ತ ಅಂತ ನನಗೆ ಅನಿಸಿತು. ಸಿನಿಮಾದ ಪೂರ್ತಿ ನಾಯಕನ ಪಾತ್ರದ ಜತೆಗೆ ಸಾಗುವ ಪಾತ್ರ ಇದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಇದ್ದಂತೆ. ಆ ಸ್ಫೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ’ ಎಂದಿದ್ದಾರೆ ಪಿ.ಸಿ. ಶೇಖರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ