AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​​; ಮಾಡೆಲ್​ ಸೋನಿಯಾ ಬಂಧನ

ಡಿ.ಜೆ. ಹಳ್ಳಿ ಠಾಣೆಯಲ್ಲಿ ಸೋನಿಯಾ ಅವರ ವಿಚಾರಣೆ ನಡೆಸಲಾಯಿತು. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿದರೆ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​​; ಮಾಡೆಲ್​ ಸೋನಿಯಾ ಬಂಧನ
ಮಾಡೆಲ್​ ಸೋನಿಯಾ
TV9 Web
| Edited By: |

Updated on: Aug 30, 2021 | 6:45 PM

Share

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಟ್ಟಿದ್ದ ಮಾಡೆಲ್​ ಸೋನಿಯಾ ಅವರನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಸೋನಿಯಾ ನಿವಾಸದಲ್ಲಿ ಪೊಲೀಸರಿಗೆ 40 ಗ್ರಾಂ ಗಾಂಜಾ ಪತ್ತೆ ಆಯಿತು. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಇರಲಿಲ್ಲ. ನಾಪತ್ತೆ ಆಗಿದ್ದ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದರು. ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಪ್ರಯತ್ನ ಮಾಡಿದ ಸೋನಿಯಾ ಅವರು ಬಾಯ್​ಫ್ರೆಂಡ್​ ಜೊತೆ ಪರಾರಿ ಆಗಿದ್ದರು.

ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಸೋನಿಯಾ ಬೆಂಗಳೂರಿನ ಖಾಸಗಿ ಹೋಟೆಲ್​ಗೆ ತೆರಳಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರೆಚಲು ಅವರು ಪುರುಷರ ಶೌಚಾಲಯಕ್ಕೆ ತೆರಳಿ ಅಡಗಿಕೊಂಡಿದ್ದರು. ಅಂತಿಮವಾಗಿ ಮಹಿಳಾ ಕಾನ್ಸ್​ಟೇಬಲ್​ ಸಹಾಯದಿಂದ ಅವರನ್ನು ಹೊರಗೆ ಕರೆತರಲಾಯಿತು. ಮಾಧ್ಯಮದ ಮುಂದೆ ಬಂದರೆ ಮರ್ಯಾದೆ ಹೋಗುತ್ತದೆ ಎಂದು ಅವರು ಇಷ್ಟೆಲ್ಲ ಡ್ರಾಮಾ ಮಾಡಿದರು.

ಡಿ.ಜೆ. ಹಳ್ಳಿ ಠಾಣೆಯಲ್ಲಿ ಸೋನಿಯಾ ಅವರ ವಿಚಾರಣೆ ನಡೆಸಲಾಯಿತು. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿದರೆ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಮಾದಕ ವಸ್ತು ಜಾಲದಲ್ಲಿ ತೊಡಗಿಕೊಂಡಿರುವವರನ್ನು ಮಟ್ಟಹಾಕಲು ಬೆಂಗಳೂರು ಪೊಲೀಸರು ಕಾರ್ಯಚರಣೆ ಆರಂಭಿಸಿದ್ದಾರೆ. ಈಗಾಗಲೇ ಸಿಕ್ಕಿಬಿದ್ದಿರುವ ಡ್ರಗ್​ ಪೆಡ್ಲರ್​ಗಳು ನೀಡಿದ ಮಾಹಿತಿ ಆಧರಿಸಿ ಸೋಮವಾರ (ಆ.30) ಬೆಳಗ್ಗೆಯೇ ಕೆಲವರ ಮನೆ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದರು. ಮಾಡೆಲ್​ ಸೋನಿಯಾ, ಉದ್ಯಮಿ ಭರತ್​ ಹಾಗೂ ಡಿಜೆ ವಚನ್​ ಚಿನ್ನಪ್ಪ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಾದಕವಸ್ತುಗಳು ಪತ್ತೆ ಆಗಿತ್ತು.

ಪ್ರಕರಣದ ಬಗ್ಗೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಅವರು ಹೇಳಿಕೆ ನೀಡಿದ್ದಾರೆ. ‘ರಾಜಕೀಯ ಒತ್ತಡಕ್ಕೆ ಪೊಲೀಸರು ಮಣಿಯುವುದಿಲ್ಲ. ಯಾರನ್ನೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪುರುಷರ ಟಾಯ್ಲೆಟ್​ನಲ್ಲಿ ಅಡಗಿ ಕುಳಿತಿದ್ದ ಡ್ರಗ್ಸ್​ ಆರೋಪಿ ಸೋನಿಯಾ; ಕಡೆಗೂ​ ಪೊಲೀಸ್​ ಬಲೆಗೆ ಬಿದ್ದ ಮಾಡೆಲ್​

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?