AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​​; ಮಾಡೆಲ್​ ಸೋನಿಯಾ ಬಂಧನ

ಡಿ.ಜೆ. ಹಳ್ಳಿ ಠಾಣೆಯಲ್ಲಿ ಸೋನಿಯಾ ಅವರ ವಿಚಾರಣೆ ನಡೆಸಲಾಯಿತು. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿದರೆ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​​; ಮಾಡೆಲ್​ ಸೋನಿಯಾ ಬಂಧನ
ಮಾಡೆಲ್​ ಸೋನಿಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 30, 2021 | 6:45 PM

Share

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಟ್ಟಿದ್ದ ಮಾಡೆಲ್​ ಸೋನಿಯಾ ಅವರನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಸೋನಿಯಾ ನಿವಾಸದಲ್ಲಿ ಪೊಲೀಸರಿಗೆ 40 ಗ್ರಾಂ ಗಾಂಜಾ ಪತ್ತೆ ಆಯಿತು. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಇರಲಿಲ್ಲ. ನಾಪತ್ತೆ ಆಗಿದ್ದ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದರು. ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಪ್ರಯತ್ನ ಮಾಡಿದ ಸೋನಿಯಾ ಅವರು ಬಾಯ್​ಫ್ರೆಂಡ್​ ಜೊತೆ ಪರಾರಿ ಆಗಿದ್ದರು.

ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಸೋನಿಯಾ ಬೆಂಗಳೂರಿನ ಖಾಸಗಿ ಹೋಟೆಲ್​ಗೆ ತೆರಳಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರೆಚಲು ಅವರು ಪುರುಷರ ಶೌಚಾಲಯಕ್ಕೆ ತೆರಳಿ ಅಡಗಿಕೊಂಡಿದ್ದರು. ಅಂತಿಮವಾಗಿ ಮಹಿಳಾ ಕಾನ್ಸ್​ಟೇಬಲ್​ ಸಹಾಯದಿಂದ ಅವರನ್ನು ಹೊರಗೆ ಕರೆತರಲಾಯಿತು. ಮಾಧ್ಯಮದ ಮುಂದೆ ಬಂದರೆ ಮರ್ಯಾದೆ ಹೋಗುತ್ತದೆ ಎಂದು ಅವರು ಇಷ್ಟೆಲ್ಲ ಡ್ರಾಮಾ ಮಾಡಿದರು.

ಡಿ.ಜೆ. ಹಳ್ಳಿ ಠಾಣೆಯಲ್ಲಿ ಸೋನಿಯಾ ಅವರ ವಿಚಾರಣೆ ನಡೆಸಲಾಯಿತು. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿದರೆ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಮಾದಕ ವಸ್ತು ಜಾಲದಲ್ಲಿ ತೊಡಗಿಕೊಂಡಿರುವವರನ್ನು ಮಟ್ಟಹಾಕಲು ಬೆಂಗಳೂರು ಪೊಲೀಸರು ಕಾರ್ಯಚರಣೆ ಆರಂಭಿಸಿದ್ದಾರೆ. ಈಗಾಗಲೇ ಸಿಕ್ಕಿಬಿದ್ದಿರುವ ಡ್ರಗ್​ ಪೆಡ್ಲರ್​ಗಳು ನೀಡಿದ ಮಾಹಿತಿ ಆಧರಿಸಿ ಸೋಮವಾರ (ಆ.30) ಬೆಳಗ್ಗೆಯೇ ಕೆಲವರ ಮನೆ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದರು. ಮಾಡೆಲ್​ ಸೋನಿಯಾ, ಉದ್ಯಮಿ ಭರತ್​ ಹಾಗೂ ಡಿಜೆ ವಚನ್​ ಚಿನ್ನಪ್ಪ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಾದಕವಸ್ತುಗಳು ಪತ್ತೆ ಆಗಿತ್ತು.

ಪ್ರಕರಣದ ಬಗ್ಗೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಅವರು ಹೇಳಿಕೆ ನೀಡಿದ್ದಾರೆ. ‘ರಾಜಕೀಯ ಒತ್ತಡಕ್ಕೆ ಪೊಲೀಸರು ಮಣಿಯುವುದಿಲ್ಲ. ಯಾರನ್ನೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪುರುಷರ ಟಾಯ್ಲೆಟ್​ನಲ್ಲಿ ಅಡಗಿ ಕುಳಿತಿದ್ದ ಡ್ರಗ್ಸ್​ ಆರೋಪಿ ಸೋನಿಯಾ; ಕಡೆಗೂ​ ಪೊಲೀಸ್​ ಬಲೆಗೆ ಬಿದ್ದ ಮಾಡೆಲ್​

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ