‘ಸೌಂದರ್ಯಾ ಸಾವು ಆಕಸ್ಮಿಕವಲ್ಲ, ಕೊಲೆ ಮಾಡಿದ್ದು ಮೋಹನ್ ಬಾಬು’; 21 ವರ್ಷಗಳ ಬಳಿಕ ದಾಖಲಾಯ್ತು ದೂರು

|

Updated on: Mar 12, 2025 | 9:44 AM

ನಟಿ ಸೌಂದರ್ಯಾ ಅವರ 2004ರ ವಿಮಾನ ಅಪಘಾತದಲ್ಲಿ ಮೃತಪಟ್ಟರು. ಈ ಸಾವಿನಲ್ಲಿ 21 ವರ್ಷಗಳ ಬಳಿಕ ಮೋಹನ್ ಬಾಬು ಅವರ ಪಾತ್ರದ ಬಗ್ಗೆ ಆರೋಪಗಳು ಕೇಳಿಬಂದಿವೆ. ಚಿಟ್ಟಿಮಲ್ಲು ಎಂಬುವವರು ದೂರು ದಾಖಲಿಸಿದ್ದು, ಜಾಗದ ವಿವಾದದ ಕಾರಣ ಸೌಂದರ್ಯಾ ಮತ್ತು ಅವರ ಸಹೋದರ ಅಮರನಾಥ್ ಅವರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.

‘ಸೌಂದರ್ಯಾ ಸಾವು ಆಕಸ್ಮಿಕವಲ್ಲ, ಕೊಲೆ ಮಾಡಿದ್ದು ಮೋಹನ್ ಬಾಬು’; 21 ವರ್ಷಗಳ ಬಳಿಕ ದಾಖಲಾಯ್ತು ದೂರು
ಸೌಂದರ್ಯಾ-ಮೋಹನ್ ಬಾಬು
Follow us on

ನಟಿ ಸೌಂದರ್ಯಾ (Soundarya) ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈಗ ಟಾಲಿವುಡ್​ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.

ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರ ಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.

‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್​ನಲ್ಲಿರುವ ಆರು ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ನಟ
ಚಂದನ್ ಶೆಟ್ಟಿ ಜೊತೆ ಮತ್ತೆ ಬಾಳುತ್ತೀರಾ? ನೇರವಾಗಿ ಉತ್ತರ ನೀಡಿದ ನಿವೇದಿತಾ
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

ಇದನ್ನೂ ಓದಿ: ನಟಿ ಸೌಂದರ್ಯಾ ಇನ್ನಿಲ್ಲ ಅನ್ನೋದು ನಂಬಲಾಗದೇ ರಮೇಶ್ ಅರವಿಂದ್ ಏನು ಮಾಡಿದ್ರು ಗೊತ್ತಾ?

ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:47 am, Wed, 12 March 25