AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ಬಳಿ ಅವಕಾಶಕ್ಕಾಗಿ ಬೇಡಿಕೆ ಇಟ್ಟ ಟಾಲಿವುಡ್ ಹಿರಿಯ ನಟ; ಹೀರೋ ಪ್ರತಿಕ್ರಿಯೆ ಏನು?

ಟಾಲಿವುಡ್ ನಟ ಮೋಹನ್ ಬಾಬು ಅವರು ಶಿವರಾಜ್ ಕುಮಾರ್ ಜೊತೆ ನಟಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ರಾಜ್ ಕುಮಾರ್ ಜೊತೆ ನಟಿಸುವ ಅವರ ಆಸೆ ಈಡೇರದ ಕಾರಣ, ಶಿವರಾಜ್ ಕುಮಾರ್ ಜೊತೆ ನಟಿಸುವ ಆಸೆ ಹೊಂದಿದ್ದಾರೆ. ಶಿವರಾಜ್ ಕುಮಾರ್ ಅವರು ಮೋಹನ್ ಬಾಬು ಅವರಿಗೆ ವಿಲನ್ ಪಾತ್ರವಲ್ಲದೆ ವಿಶೇಷ ಪಾತ್ರ ನೀಡುವುದಾಗಿ ತಿಳಿಸಿದ್ದಾರೆ.

ಶಿವಣ್ಣನ ಬಳಿ ಅವಕಾಶಕ್ಕಾಗಿ ಬೇಡಿಕೆ ಇಟ್ಟ ಟಾಲಿವುಡ್ ಹಿರಿಯ ನಟ; ಹೀರೋ ಪ್ರತಿಕ್ರಿಯೆ ಏನು?
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: May 31, 2025 | 3:11 PM

Share

ಶಿವರಾಜ್​ಕುಮಾರ್ (Shivarajkumar) ಜೊತೆ ನಟಿಸಬೇಕು ಎಂಬುದು ಅನೇಕರ ಕನಸು. ಆದರೆ, ಈ ಕನಸನ್ನು ಈಡೇರಿಸಿಕೊಳ್ಳಲು ಎಲ್ಲರಿಂದಲೂ ಸಾಧ್ಯವಾಗೋದಿಲ್ಲ. ಅವರ ಜೊತೆ ಪರಭಾಷಾ ಕಲಾವಿದರಿಗೂ ನಟಿಸಬೇಕು ಎಂದಿರುತ್ತದೆ. ಈಗ ಟಾಲಿವುಡ್​ನ ಹಿರಿಯ ನಟ ಮೋಹನ್ ಬಾಬು ಅವರು ಶಿವರಾಜ್​ಕುಮಾರ್ ಜೊತೆ ನಟಿಸುವ ಹಂಬಲ ಹೊರಹಾಕಿದ್ದಾರೆ. ವಿಶೇಷ ಎಂದರೆ ರಾಜ್​ಕುಮಾರ್ ಜೊತೆ ನಟಿಸಬೇಕು ಎಂಬುದು ಅವರ ಇಚ್ಛೆ ಆಗಿತ್ತು. ಆ ಆಸೆ ಈಡೇರಲಿಲ್ಲ. ಅವರ ಮಗನ ಜೊತೆಯಾದರೂ ನಟಿಸಬೇಕು ಎಂಬುದು ಅವರ ಕನಸು.

‘ಕಣ್ಣಪ್ಪ’ ಸಿನಿಮಾ ಜೂನ್ 27ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಈ ಕಾರ್ಯಕ್ರಮಕ್ಕೆ ಶಿವರಾಜ್​ಕುಮಾರ್ ಮುಖ್ಯ ಅತಿಥಿ ಆಗಿ ಆಗಮಿಸಿದ್ದರು. ‘ರಾಜ್​ಕುಮಾರ್ ದೊಡ್ಡ ಹೀರೋ. ಅವರ ಬಗ್ಗೆ ಮಾತನಾಡುವಷ್ಟು ಅರ್ಹತೆ ನನಗಿಲ್ಲ. ಅಂಬರೀಷ್, ವಿಷ್ಣುವರ್ಧನ್ ನನ್ನ ಜೊತೆ ಕ್ಲೋಸ್ ಆಗಿದ್ದರು. ಅವರು ಹೋದ ಬಳಿಕ ರಾಕ್​ಲೈನ್ ವೆಂಕಟೇಶ್ ಆಪ್ತರಾದರು’ ಎಂದು ಹಳೆಯ ಘಟನೆಯನ್ನು ಅವರು ನೆನಪಿಸಿಕೊಂಡರು.

‘ನನಗೆ ಕನ್ನಡದಲ್ಲಿ ಒಂದು ಸಿನಿಮಾ ಮಾಡಬೇಕು. ಅವಕಾಶ ಕೇಳಲು ರಾಜ್​ಕುಮಾರ್ ಮನೆಗೆ ತೆರಳಿದ್ದೆ. ಅಮ್ಮ (ಪಾರ್ವತಮ್ಮ) ಊಟ ಹಾಕಿದರು. ನಾನು ಊಟ ಮಾಡಿ ಹಾಗೆಯೇ ಬಂದೆ. ಅವಕಾಶ ಕೇಳುವ ಧೈರ್ಯ ಬರಲೇ ಇಲ್ಲ. ಹೀಗಾಗಿ, ಶಿವರಾಜ್​ಕುಮಾರ್ ಅವರೇ ನಿಮ್ಮ ಸಿನಿಮಾದಲ್ಲಿ ನಾನು ವಿಲನ್ ಆಗಿ ಮಾಡಬೇಕು. ನನಗೆ ಅವಕಾಶ ನೀಡಿ’ ಎಂದು ಶಿವರಾಜ್​ಕುಮಾರ್ ಬಳಿ ಕೇಳಿದರು.

ಇದನ್ನೂ ಓದಿ
Image
ಟಾಲಿವುಡ್​ನಲ್ಲಿ ರೀ-ಯೂನಿಯನ್ ಸಂಭ್ರಮ; ಸ್ಯಾಂಡಲ್​ವುಡ್​ನಲ್ಲಿ ಯಾವಾಗ?
Image
ಎಚ್​ಎಸ್​ ವೆಂಕಟೇಶ​ಮೂರ್ತಿ ನಿಧನ; ಖ್ಯಾತ ಸಾಹಿತಿ, ಕವಿ ಇನ್ನಿಲ್ಲ
Image
ಹೊಂಬಾಳೆ ನಿರ್ಮಾಣದ ಹೃತಿಕ್ ಚಿತ್ರಕ್ಕೆ ದಕ್ಷಿಣದ ಖ್ಯಾತ ಹೀರೋ ಡೈರೆಕ್ಷನ್
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?

ಶಿವರಾಜ್​ಕುಮರ್ ಅವರು ಇದಕ್ಕೆ ಒಪ್ಪಲೇ ಇಲ್ಲ. ಅವರು ಈ ವಿಚಾರದಲ್ಲಿ ಹೇಳಿದ್ದೇ ಬೇರೆ. ‘ಮೋಹನ್ ಬಾಬು ಅವರು ಸಿನಿಮಾದಲ್ಲಿ ನಟಿಸೋ ಅವಕಾಶ ಕೇಳಿದ್ದಾರೆ. ನನ್ನ ಸಿನಿಮಾದಲ್ಲಿ ವಿಲನ್ ಆಗಿ ಮಾಡೋದು ಬೇಡ. ಅವರಿಗೆ ಯಾವುದಾದರೂ ವಿಶೇಷ ಪಾತ್ರ ನೀಡುತ್ತೇನೆ. ಅವರು ನನ್ನ ಸಹೋದರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿ’ ಎಂದಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ವಿವಾದದ ಬಳಿಕ ಮೊದಲ ಬಾರಿಗೆ ವೇದಿಕೆ ಮೇಲೆ ಮಾತನಾಡಿದ ಶಿವಣ್ಣ

ಕಮಲ್ ಹಾಸನ್ ಅವರು ಇತ್ತೀಚೆಗೆ ವೇದಿಕೆ ಮೇಲೆ ಮಾತನಾಡುವಾಗ ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದಿದ್ದರು. ಈ ವೇಳೆ ಅಲ್ಲಿ ಶಿವರಾಜ್​ಕುಮಾರ್ ಕೂಡ ಇದ್ದರು. ಈ ಕಾರಣಕ್ಕೆ ಸಾಕಷ್ಟು ವಿವಾದ ಆಯಿತು. ಅವರು ಈ ವಿಚಾರದಲ್ಲಿ ಮೌನವಹಿಸಬಾರದಿತ್ತು ಎಂಬುದು ಅನೇಕರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್