AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಗಿದ್ದು ಆಗಿ ಹೋಯ್ತು, ಅದನ್ನು ಬಿಟ್ಟುಬಿಡು’; ಹಳೆಯ ಘಟನೆಯ ಬಗ್ಗೆ ಮೋಕ್ಷಿತಾಗೆ ಧೈರ್ಯ ತುಂಬಿದ ತಾಯಿ

ಮೋಕ್ಷಿತಾ ಪೈ ಅವರ ತಾಯಿ ಬಿಗ್ ಬಾಸ್ ಮನೆಗೆ ಭೇಟಿ ನೀಡಿದ್ದು, ಗೌತಮಿ ಜೊತೆಗಿನ ಹಳೆಯ ವಿವಾದದ ಬಗ್ಗೆ ಚರ್ಚೆ ನಡೆಯಿತು. ಮೋಕ್ಷಿತಾಗೆ ತಾಯಿ ಧೈರ್ಯ ಹೇಳಿ, ಹಳೆಯ ಘಟನೆಯನ್ನು ಮರೆತು ಪ್ರಾಮಾಣಿಕವಾಗಿ ಆಡಲು ಸಲಹೆ ನೀಡಿದರು. ಈ ಭಾವುಕ ಕ್ಷಣ ಬಿಗ್ ಬಾಸ್ ಮನೆಯಲ್ಲಿ ಹಲವು ಚರ್ಚೆಗಳಿಗೆ ಕಾರಣವಾಯಿತು.

‘ಆಗಿದ್ದು ಆಗಿ ಹೋಯ್ತು, ಅದನ್ನು ಬಿಟ್ಟುಬಿಡು’; ಹಳೆಯ ಘಟನೆಯ ಬಗ್ಗೆ ಮೋಕ್ಷಿತಾಗೆ ಧೈರ್ಯ ತುಂಬಿದ ತಾಯಿ
ಮೋಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Jan 02, 2025 | 7:01 AM

Share

ಮೋಕ್ಷಿತಾ ಪೈ ಅವರು ಪಾರು ಧಾರಾವಾಹಿ ಮೂಲಕ ಫೇಮಸ್ ಆದವರು. ಅವರು ಈಗ ಬಿಗ್ ಬಾಸ್ ಮನೆಗೆ ಬಂದು ಮಿಂಚುತ್ತಿದ್ದಾರೆ. ತಮ್ಮ ಆಟದ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಜನವರಿ 1ರ ಎಪಿಸೋಡ್​ನಲ್ಲಿ ಅವರ ತಾಯಿ ಬಿಗ್ ಬಾಸ್ ಮನೆಗೆ ಆಗಮಿಸಿದ್ದಾರೆ. ಈ ವೇಳೆ ಹಲವು ವಿಷಯಗಳ ಬಗ್ಗೆ ಅಮ್ಮ-ಮಗಳು ಚರ್ಚೆ ಮಾಡಿದ್ದಾರೆ. ಈ ವೇಳೆ ಹಳೆಯ ಘಟನೆಯೊಂದರ ಬಗ್ಗೆಯೂ ಚರ್ಚೆ ನಡೆದಿದೆ.

ಈ ಮೊದಲು ಸ್ಪರ್ಧಿಗಳ ತಪ್ಪನ್ನು ಹೇಳಿ ಸ್ವಿಮ್ಮಿಂಗ್​ಪೂಲ್​ಗೆ ತಳ್ಳುವ ಟಾಸ್ಕ್ ಇತ್ತು. ಈ ಟಾಸ್ಕ್​ ವೇಳೆ ಮೋಕ್ಷಿತಾ ಅವರು ಗೌತಮಿ ಅವರನ್ನು ತಳ್ಳಿದ್ದರು. ಅವರು ಕೊಟ್ಟ ಮಾತನ್ನು ನಿಭಾಯಿಸಿಲ್ಲ ಎನ್ನುವ ಕಾರಣವನ್ನು ಮೋಕ್ಷಿತಾ ನೀಡಿದ್ದರು. ಆ ಬಳಿಕ ಗೌತಮಿ ಈ ವಿಚಾರವಾಗಿ ಮೋಕ್ಷಿತಾ ಜೊತೆ ಚರ್ಚೆ ಮಾಡಿ ಎಲ್ಲವನ್ನೂ ಸರಿ ಮಾಡಿಕೊಂಡಿದ್ದರು. ಆದರೆ, ಗೌತಮಿ ನಾಮಿನೇಷನ್​ಗೆ ಇದೇ ಕಾರಣ ತೆಗೆದುಕೊಂಡಿದ್ದರು. ಇದು ಮೋಕ್ಷಿತಾ ಕೋಪಕ್ಕೆ ಕಾರಣ ಆಗಿದೆ. ಈ ಹಳೆಯ ಘಟನೆ ಬಗ್ಗೆ ತಾಯಿ ಬಳಿ ಮೋಕ್ಷಿತಾ ಚರ್ಚೆ ಮಾಡಿದ್ದಾರೆ.

‘ಎಲ್ಲರೂ ಹೇಗಿದ್ದಾರೆ’ ಎಂದು ಮೋಕ್ಷಿತಾ ತಾಯಿಗೆ ಕೇಳಿದರು. ‘ಎಲ್ಲರೂ ಚೆನ್ನಾಗಿದ್ದಾರೆ. ಬಾಟಮ್ 2ಗೆ ಬಂದೆ ಎಂದು ಅಳಬೇಡ. ಚೆನ್ನಾಗಿ ಆಡ್ತಾ ಇದೀಯಾ. ಹೀಗೆ ಸಿಂಗಲ್ ಆಗಿ ಆಡು’ ಎಂದರು ಮೋಕ್ಷಿತಾ ತಾಯಿ. ‘ನನಗೆ ನಾಟಕ ಮಾಡೋಕೆ ಬರಲ್ಲ. ಇರೋದನ್ನು ಹೇಳುತ್ತೇನೆ. ಗೌತಮಿ ಕೊಟ್ಟ ಮಾತನ್ನು ನಿಭಾಯಿಸುತ್ತಿಲ್ಲ ಎಂದು ನಾನು ಹೇಳಿದ್ದೆ. ಆ ಬಳಿಕ ಗೌತಮಿ ಅವರೇ ನನ್ನ ಕರೆದು ಮಾತುಕತೆ ನಡಿಸಿದರು. ಆ ಬಳಿಕ ನಾವು ಮೂರು ಜನ ಸರಿ ಹೋದೆವು. ಆದರೆ, ಇದೇ ವಿಚಾರ ಇಟ್ಟುಕೊಂಡು ನಾಮಿನೇಟ್ ಮಾಡಿದರು. ಹೀಗೆ ಮಾಡ್ತಾರೆ ಎಂದರೆ ಮಾತುಕತೆ ನಡೆಸಿ ಅದನ್ನು ಸರಿ ಮಾಡಿಕೊಳ್ಳಲೇ ಬಾರದು’ ಎಂದು ಅಭಿಪ್ರಾಯಪಟ್ಟರು ಮೋಕ್ಷಿತಾ.

ಇದನ್ನೂ ಓದಿ: ಮೂರು ತಿಂಗಳು ದೂರ ಇದ್ದ ಅಕ್ಕನ ಗುರುತಿಸಲೇ ಇಲ್ಲ ತಮ್ಮ; ಮೋಕ್ಷಿತಾ ಕಣ್ಣೀರಿಗೆ ಕರುಳು ಕಿವುಚುತ್ತೆ

ಆಗ ಮೋಕ್ಷಿತಾ ತಾಯಿ ಮಗಳಿಗೆ ಧೈರ್ಯ ಹೇಳುವ ಕೆಲಸ ಮಾಡಿದರು. ‘ಆಗಿದ್ದು ಆಗಿ ಹೋಯ್ತು, ಬಿಟ್ಟಾಕಿ ಬಿಡು. ನಿನ್ನ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ’ ಎಂದರು. ಆ ಬಳಿಕ ಇಬ್ಬರ ಮಾತುಕತೆ ಅಲ್ಲಿಗೆ ನಿಂತಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು