AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monk The Young: ಭರವಸೆ ಹುಟ್ಟುಹಾಕಿದ ‘ಮಾಂಕ್​ ದಿ ಯಂಗ್​’ ಸಿನಿಮಾ ಟೀಸರ್​; ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ

Monk The Young Teaser: ‘ಮಾಂಕ್​ ದಿ ಯಂಗ್​’ ಸಿನಿಮಾಗೆ ಶೂಟಿಂಗ್​ ಮುಕ್ತಾಯ ಆಗಿದೆ. ಈಗ ಟೀಸರ್​ ಬಿಡುಗಡೆ ಮಾಡುವ ಮೂಲಕ ಗಮನ ಸೆಳೆಯಲಾಗಿದೆ.

Monk The Young: ಭರವಸೆ ಹುಟ್ಟುಹಾಕಿದ ‘ಮಾಂಕ್​ ದಿ ಯಂಗ್​’ ಸಿನಿಮಾ ಟೀಸರ್​; ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ
‘ಮಾಂಕ್​ ದಿ ಯಂಗ್​’ ಟೀಸರ್​ ಬಿಡುಗಡೆ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Jun 28, 2023 | 2:44 PM

Share

ಸ್ಟಾರ್​ ನಟರ ಸಿನಿಮಾಗಳು ಬಹುಭಾಷೆಯಲ್ಲಿ ಬಿಡುಗಡೆ ಆಗುವುದು ಸಹಜ. ಪ್ಯಾನ್​ ಇಂಡಿಯಾ (Pan India) ಮಟ್ಟದಲ್ಲಿ ಚಿತ್ರ ರಿಲೀಸ್​ ಮಾಡಲು ದೊಡ್ಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳು ಧೈರ್ಯ ತೋರಿಸುವುದು ಸಾಮಾನ್ಯ ಸಂಗತಿ ಎಂಬಂತೆ ಆಗಿದೆ. ಅಂಥ ಪ್ರಯತ್ನಗಳ ನಡುವೆ ಹೊಸಬರ ಒಂದು ಟೀಮ್​ ಕೂಡ ದೇಶವ್ಯಾಪಿ ಸದ್ದು ಮಾಡಲು ಸಜ್ಜಾಗಿದೆ. ಈ ಸಿನಿಮಾ ಹೆಸರು ‘ಮಾಂಕ್ ದಿ ಯಂಗ್​’ (Monk The Young). ಈ ರೀತಿ ಡಿಫರೆಂಟ್​ ಆದ ಶೀರ್ಷಿಕೆ ಇಟ್ಟುಕೊಂಡು ಜನರ ಎದುರು ಬರುತ್ತಿರುವ ಸಿನಿಮಾ ತಂಡದಲ್ಲಿ ಬಹುತೇಕ ಹೊಸಬರೇ ಕೆಲಸ ಮಾಡಿದ್ದಾರೆ. ಈ ಸಿನಿಮಾ ಕೂಡ ಪ್ಯಾನ್​ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಇತ್ತೀಚೆಗೆ ‘ಮಾಂಕ್ ದಿ ಯಂಗ್​’ ಸಿನಿಮಾದ ಟೀಸರ್​ (Monk The Young Teaser) ಬಿಡುಗಡೆ ಮಾಡಲಾಯಿತು. ಭರವಸೆ ಮೂಡಿಸುವ ರೀತಿಯಲ್ಲಿ ಮೂಡಿಬಂದಿರುವ ಈ ಟೀಸರ್​ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಹೊಸಬರ ಹೊಸ ಪ್ರಯತ್ನಗಳಿಗೆ ಚಂದನವನದಲ್ಲಿ ಬೆಂಬಲ ಸಿಗುತ್ತದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್ ಅವರು ‘ಮಾಂಕ್ ದಿ ಯಂಗ್​’ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಟ ‘ಒಳ್ಳೆ ಹುಡುಗ’ ಪ್ರಥಮ್ ಅವರು ಟೀಸರ್​ ರಿಲೀಸ್​ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು‌. ಕನ್ನಡ ಮಾತ್ರವಲ್ಲದೇ ಒಟ್ಟು 6 ಭಾಷೆಗಳಲ್ಲಿ ‘ಮಾಂಕ್ ದಿ ಯಂಗ್​’ ಬಿಡುಗಡೆ ಆಗಲಿದೆ ಎಂಬುದು ವಿಶೇಷ.

Kiccha 46: ‘ಕಿಚ್ಚ 46’ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​ ನೀಡಿದ ಚಿತ್ರತಂಡ; ಜುಲೈ 2ರಂದು ಟೀಸರ್​ ಬಿಡುಗಡೆ

ಈ ಸಿನಿಮಾಗೆ ಶೂಟಿಂಗ್​ ಮುಕ್ತಾಯ ಆಗಿದೆ. ವಿಂಟೇಜ್ ಫ್ಯಾಮಿಲಿ ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿ ನಡೆಯುತ್ತಿವೆ. ಮುಂಬರುವ ಮೂರು ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಂಡು ‘ಮಾಂಕ್ ದಿ ಯಂಗ್​’ ತಂಡ ಕಾರ್ಯನಿರತವಾಗಿದೆ. ಈ ಚಿತ್ರಕ್ಕೆ ಮಾಸ್ಚಿತ್ ಸೂರ್ಯ ನಿರ್ದೇಶನ ಮಾಡಿದ್ದಾರೆ.

‘ನಿರ್ದೇಶಕ ಮಾಸ್ಚಿತ್ ಸೂರ್ಯ ಅವರು ಕಥೆ ಹೇಳುವುದಕ್ಕೆ ನನ್ನನ್ನು ಕರೆದಿದ್ದರು. ನಟನೆಗಾಗಿ ಹೋಗಿದ್ದ ನಾನು ನಿರ್ಮಾಪಕನಾದೆ. ನನ್ನ ಜೊತೆ ಇತರೆ ಸ್ನೇಹಿತರು ಕೂಡ ನಿರ್ಮಾಣದಲ್ಲಿ ಜೊತೆಯಾದರು. ಸೆಪ್ಟೆಂಬರ್ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಪ್ಲ್ಯಾನ್​ ಇದೆ. ಈ ಚಿತ್ರಕ್ಕೆ ಒಟ್ಟು ಐವರು ನಿರ್ಮಾಪಕರು’ ಎಂದು ನಿರ್ಮಾಪಕರಲ್ಲಿ ಒಬ್ಬರಾದ ರಾಜೇಂದ್ರನ್ ಹೇಳಿದ್ದಾರೆ. ಒಂದು ಪಾತ್ರಕ್ಕೂ ಅವರು ಬಣ್ಣ ಹಚ್ಚಿದ್ದಾರೆ. ಧನುಷ್ ಎಲ್ ಬೇದ್ರೆ ಅವರ ಸಂಕಲನ, ಸ್ವಾಮಿನಾಥನ್ ಅವರ ಹಿನ್ನೆಲೆ ಸಂಗೀತ, ಜಯೇಂದ್ರ ವಾಕ್ವಾಡಿ ಅವರ ವಿ.ಎಫ್.ಎಕ್ಸ್. ಕೈ ಚಳಕ ಈ ಚಿತ್ರದಲ್ಲಿ ಇರಲಿದೆ. ನಿರ್ಮಾಪಕರಾದ ವಿನಯ್ ಬಾಬು ರೆಡ್ಡಿ, ಗೋಪಿಚಂದ್, ಲಾಲ್ ಚಂದ್ ಟೀಸರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

CBFC: ‘72 ಹೂರೇ’ಚಿತ್ರದ ಟ್ರೇಲರ್​ಗೆ ಪ್ರಮಾಣಪತ್ರ ನೀಡಲು ಸೆನ್ಸಾರ್​ ಮಂಡಳಿ ನಕಾರ; ವಿವಾದಿತ ಚಿತ್ರದಲ್ಲಿ ಅಂಥದ್ದೇನಿದೆ?

ಈ ಚಿತ್ರದ ಥೀಮ್​ ಏನು ಎಂಬುದನ್ನು ನಾಯಕ ನಟ ಸರೋವರ್​ ವಿವರಿಸಿದ್ದಾರೆ. ‘ನಾವು ಸೀಮಿತವಾದ ಒಂದು ಬದುಕನ್ನು ನಡೆಸುತ್ತಿರುತ್ತೇವೆ. ಆದರೆ ಅದರಾಚೆಗೆ ಬಂದು ನೋಡಿದರೆ ಬೇರೆಯದೇ ಜೀವನ ಇರುತ್ತದೆ. ಅದೇ ರೀತಿ ನಮ್ಮ ಸಿನಿಮಾ ಕೂಡ. ಮಾಮೂಲಿ ಶೈಲಿಗಿಂತಲೂ ಭಿನ್ನವಾದ ಚಿತ್ರವಿದು. ಸಣ್ಣದಾಗಿ ಶುರು ಮಾಡಿದ ಈ ಸಿನಿಮಾ ಈಗ ಈ ಹಂತಕ್ಕೆ ಬಂದಿದೆ’ ಎಂದು ಸರೋವರ್ ಹೇಳಿದ್ದಾರೆ. ‘ಮಾಂಕ್ ದಿ ಯಂಗ್​’ ಚಿತ್ರದಲ್ಲಿ ನಾಯಕಿ ಸೌಂದರ್ಯಾ ಗೌಡ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ