AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಕನ್ನಡದಲ್ಲಿ 9 ಸಿನಿಮಾಗಳು ರಿಲೀಸ್; ಇಲ್ಲಿದೆ ವಿವರ

ಒಂದು ರೀ-ರಿಲೀಸ್ ಸೇರಿ ಕನ್ನಡದಲ್ಲೇ 9 ಚಿತ್ರಗಳು ಬಿಡುಗಡೆ ಆಗುತ್ತಿವೆ. ಆ ಸಿನಿಮಾಗಳ ವಿವರ ಇಲ್ಲಿದೆ. ಇನ್ನೂ ಕೆಲವು ಸಿನಿಮಾಗಳು ಸ್ಪರ್ಧೆಗೆ ಇಳಿಯಬೇಕಿತ್ತು. ಆದರೆ, ಅವುಗಳು ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿವೆ.

ಈ ವಾರ ಕನ್ನಡದಲ್ಲಿ 9 ಸಿನಿಮಾಗಳು ರಿಲೀಸ್; ಇಲ್ಲಿದೆ ವಿವರ
ಚಿತ್ರಮಂದಿರದ ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 09, 2023 | 11:41 AM

Share

ಚಿತ್ರರಂಗದಲ್ಲಿ (Cinema Industry) ಸ್ಪರ್ಧೆ ಜೋರಾಗಿದೆ. ಒಂದೇ ವಾರ ಎರಡು ಮೂರು ಸಿನಿಮಾಗಳು ಒಟ್ಟೊಟ್ಟಿಗೆ ಬರೋದು ಕಾಮನ್ ಎಂಬಂತಾಗಿದೆ. ಈ ಪೈಕಿ ಒಳ್ಳೆಯ ಸಿನಿಮಾಗಳು ಗೆದ್ದರೆ, ಜನರಿಗೆ ರುಚಿಸದ ಚಿತ್ರಗಳು ಚಿತ್ರಮಂದಿರದಿಂದ ಕಾಲ್ಕೀಳುತ್ತವೆ. ವಿಶೇಷ ಎಂದರೆ ಈ ವಾರ (ಫೆಬ್ರವರಿ 10) ಕನ್ನಡದಲ್ಲಿ 9 ಸಿನಿಮಾಗಳು ರಿಲೀಸ್ ಆಗುತ್ತಿವೆ! ಹೌದು, ಒಂದು ರೀ-ರಿಲೀಸ್ ಸೇರಿ ಕನ್ನಡದಲ್ಲೇ 9 ಚಿತ್ರಗಳು ಬಿಡುಗಡೆ ಆಗುತ್ತಿವೆ. ಆ ಸಿನಿಮಾಗಳ ವಿವರ ಇಲ್ಲಿದೆ. ಇನ್ನೂ ಕೆಲವು ಸಿನಿಮಾಗಳು ಸ್ಪರ್ಧೆಗೆ ಇಳಿಯಬೇಕಿತ್ತು. ಆದರೆ, ಅವುಗಳು ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿವೆ.

ಹೊಂದಿಸಿ ಬರೆಯಿರಿ

ಪ್ರವೀಣ್ ತೇಜ್, ಸಂಯುಕ್ತಾ ಹೊರನಾಡು, ಭಾವನಾ ರಾವ್​, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್ ಮೊದಲಾದವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಶುಕ್ರವಾರ ತೆರೆಗೆ ಬರುತ್ತಿದೆ. ರಾಮೇನಹಳ್ಳಿ ಜಗನ್ನಾಥ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜೋ ಕೋಸ್ಟಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ರೂಪಾಯಿ

ವಿಜಯ್ ಜಗದಲ್, ಕೃಷಿ ತಾಪಂಡ, ಚಂದನಾ ರಾಘವೇಂದ್ರ ಮೊದಲಾದವರ ನಟನೆಯ ‘ರೂಪಾಯಿ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ವಿಜಯ್ ಜಗದಲ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಡಿಸೆಂಬರ್ 24

ಅಪ್ಪು ಬಡಿಗೇರ್, ರವಿ ಕೆಆರ್​ ಪೇಟೆ, ರಘು ಶೆಟ್ಟಿ ಮೊದಲಾದವರು ನಟಿಸಿರುವ, ನಾಗರಾಜ್ ಗೌಡ ನಿರ್ದೇಶನದ ‘ಡಿಸೆಂಬರ್ 24’ ಈ ವಾರ ರಿಲೀಸ್ ಆಗುತ್ತಿದೆ. ರಘು ಶೆಟ್ಟಿ ಅವರೇ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ರಂಗಿನ ರಾಟೆ

ರಾಜೀವ್ ರಾಥೋಡ್​, ಭವ್ಯಾ ಆರ್​ಆರ್​, ದುನಿಯಾ ರಶ್ಮಿ ಅಭಿನಯದ ‘ರಂಗಿನ ರಾಟೆ’ ಈ ವಾರ ಸ್ಪರ್ಧೆಗೆ ಇಳಿದಿದೆ. ಆರುಮುಗಂ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

‘ಲಾಂಗ್ ಡ್ರೈವ್’

‘ಲಾಂಗ್ ಡ್ರೈವ್​’ ಸಿನಿಮಾ ಶುಕ್ರವಾರ ರಿಲೀಸ್ ಆಗುತ್ತಿದೆ. ಸುಪ್ರಿತಾ ಸತ್ಯನಾರಾಯಣ್, ಅರ್ಜುನ್ ಯೋಗಿಶ್ ರಾಜ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಾಜು ಜಿ. ಅವರು ನಿರ್ದೇಶನ ಮಾಡಿದ್ದಾರೆ.

ಬೆಂಗಳೂರು 69

‘ಬೆಂಗಳೂರು 69’ ಸಿನಿಮಾದಲ್ಲಿ ಅನಿತಾ ಭಟ್, ಶಫಿ ಮೊದಲಾದವರು ನಟಿಸಿದ್ದಾರೆ. ಕ್ರಾಂತಿ ಚೈತನ್ಯ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಉತ್ತಮರು

ಪ್ರತಾಪ್ ನಾರಾಯಣ್, ರಂಗಾಯಣ ರಘು, ಬಾಲಾ ರಾಜ್ವಾಡಿ, ಕಡ್ಡಿಪುಡಿ ಚಂದ್ರು ಮೊದಲಾದವರು ‘ಉತ್ತಮರು’ ಸಿನಿಮಾದಲ್ಲಿ ನಟಿಸಿದ್ದಾರೆ. ರೋಹಿತ್ ಶ್ರೀನಿವಾಸ್ ನಿರ್ದೇಶನ ಚಿತ್ರಕ್ಕಿದೆ.

ಒಂದಾನೊಂದು ಕಾಲದಲ್ಲಿ

ಶೋಭ್​ರಾಜ್, ಸಂಗೀತಾ ಅನಿಲ್ ಹಾಗೂ ಮೊದಲಾದವರು ‘ಒಂದಾನೊಂದು ಕಾಲದಲ್ಲಿ’ ಚಿತ್ರದಲ್ಲಿ ನಟಿಸಿದ್ದಾರೆ.

‘ಲೈಫು ಇಷ್ಟೇನೆ’

ಪವನ್ ಕುಮಾರ್ ನಿರ್ದೇಶನದ ದಿಗಂತ್ ನಟನೆಯ ಹಿಟ್ ಚಿತ್ರ ‘ಲೈಫು ಇಷ್ಟೇನೆ’ ರೀ ರಿಲೀಸ್ ಆಗುತ್ತಿದೆ.

ಪರಭಾಷೆಗಳಲ್ಲೂ ಹಲವು ಸಿನಿಮಾಗಳು ತೆರೆಗೆ ಬರುತ್ತಿವೆ. ತೆಲುಗಿನಲ್ಲಿ ‘ಅಮಿಗೋಸ್​’, ಮಲಯಾಂನಲ್ಲಿ ‘ಕ್ರಿಸ್ಟೋಫರ್​’ ಮುಂತಾದ ಚಿತ್ರಗಳು ತೆರೆಗೆ ಬರುತ್ತಿವೆ. ಹಿಂದಿಯ ‘ಪಠಾಣ್​’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿರುವುದರಿಂದ ಈ ಚಿತ್ರದ ಜತೆಯೂ ಸ್ಪರ್ಧೆ ಎದುರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:41 am, Thu, 9 February 23

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್