AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayanand: ಬೆಳ್ಳಿತೆರೆಯಲ್ಲಿ ಸಾಧಕ ಉದ್ಯಮಿಯ ಕಥೆ: ವಿಜಯ ಸಂಕೇಶ್ವರರ ಬಯೋಪಿಕ್ ‘ವಿಜಯಾನಂದ’ ಭರ್ಜರಿ ಪ್ರದರ್ಶನ

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ವಿಜಯಸಂಕೇಶ್ವರ ಅವರ ಜೀವನ ಆಧಾರಿತ ‘ವಿಜಯಾನಂದ’ ಚಿತ್ರವು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ.

Vijayanand: ಬೆಳ್ಳಿತೆರೆಯಲ್ಲಿ ಸಾಧಕ ಉದ್ಯಮಿಯ ಕಥೆ: ವಿಜಯ ಸಂಕೇಶ್ವರರ ಬಯೋಪಿಕ್ ‘ವಿಜಯಾನಂದ’ ಭರ್ಜರಿ ಪ್ರದರ್ಶನ
Vijayanand
TV9 Web
| Updated By: Digi Tech Desk|

Updated on:Dec 09, 2022 | 6:02 PM

Share

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ವಿಜಯಸಂಕೇಶ್ವರ ಅವರ ಜೀವನ ಆಧಾರಿತ ‘ವಿಜಯಾನಂದ’ ಚಿತ್ರವು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ 1200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಸಂತೋಷ್ ಥಿಯೇಟರ್ ನಲ್ಲಿ ತಲೆ ಎತ್ತಿದ ದೊಡ್ಡ ಕಟೌಟ್ ತಲೆ ಎತ್ತಿದೆ. ಯಶಸ್ವಿ ಉಧ್ಯಮಿಯ ಜೀವನ ಹೋರಾಟದ ಕಥೆ ಇದಾಗಿದ್ದು, ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್ ಗಳಲ್ಲಿ ಪ್ರೀಮಿಯರ್ ಶೋ ಮಾಡಿದೆ.

ಸಂತೋಷ್ ಚಿತ್ರಂಮದಿರ ಸೇರಿದಂತೆ ರಾಜ್ಯದ ಹಲವು ಥಿಯೇಟರ್ ಗಳಲ್ಲಿ ರಿಲೀಸ್ ಆಗಿದೆ, ಓವರ್‌ಸೀಸ್‌ನಲ್ಲಿ 350 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಜಯಾನಂದ ಆರ್ಭಟ ಶುರುವಾಗಿದೆ.

ಈ ಮೊದಲು ‘ಟ್ರಂಕ್’ ಎಂಬ ಚಿತ್ರದ ನಿರ್ದೇಶನ ಮಾಡಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ವಿಆರ್​ಎಲ್ ಪ್ರೊಡಕ್ಷನ್ಸ್ ಅಡಿಯಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸಿರುವ ವಿಜಯಾನಂದ ಚಿತ್ರಕ್ಕೆ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ನಿಹಾಲ್ ರಜಪೂತ್, ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಅಭಿನಯಿಸಿದ್ದು, ಮೂರು ವಯೋಮಾನ ಮತ್ತು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕರುನಾಡಿನ ಯಶಸ್ವಿ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನದ ವಿವರಗಳನ್ನು ಇಟ್ಟುಕೊಂಡು ‘ವಿಜಯಾನಂದ’ ಸಿನಿಮಾ ಮೂಡಿಬಂದಿದೆ. ನಿಹಾಲ್​, ಸಿರಿ ಪ್ರಹ್ಲಾದ್​ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಿಶಿಕಾ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ.

‘ನಾನೇ ನರರಾಕ್ಷಸ’, ‘ಸುನಾಮಿ 143’, ‘ಪ್ರಾಯಶಃ’, ‘ಪಂಖುರಿ’, ‘ಮೈಸೂರು ಡೈರೀಸ್​’, ‘ಕ್ಷೇಮಗಿರಿಯಲ್ಲಿ ಕರ್ನಾಟಕ’, ‘ದ್ವಿಪಾತ್ರ’, ‘ಡಾ. 56’ ಸಿನಿಮಾಗಳು ಕೂಡ ಈ ವಾರ ತೆರೆಕಾಣುತ್ತಿವೆ. ಯಾವುದನ್ನು ನೋಡೋದು, ಯಾವುದನ್ನು ಬಿಡೋದು ಎಂಬ ಗೊಂದಲದಲ್ಲಿ ಪ್ರೇಕ್ಷಕರಿದ್ದಾರೆ.

ಚಿತ್ರದಲ್ಲಿ ಪ್ರತಿಭಾವಂತ ಕಲಾವಿದರುಗಳಾದ ಅನಂತ್ ನಾಗ್, , ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ರಮೇಶ್ ಭಟ್ , ಶೈನ್ ಶೆಟ್ಟಿ, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್ ದಯಾಳ್ ಪದ್ಮನಾಭನ್, ಮುಂತಾದವರು ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Fri, 9 December 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!