AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸಿನಿಮಾಕ್ಕಾಗಿ 13 ವರ್ಷಗಳ ಬಳಿಕ ಒಂದಾದ ಪ್ರೇಮ್-ಮೇಘನಾ

Nenapirali Prem movie: ಚಿತ್ರತಂಡವೊಂದು ಐತಿಹಾಸಿಕ ಕತೆಯುಳ್ಳ ಸಿನಿಮಾ ನಿರ್ಮಾಣ ಮಾಡುವ ಸಾಹಸಕ್ಕೆ ಕೈ ಹಾಕಿದ್ದು, ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಜೀವನವನ್ನು ತೆರೆಗೆ ತರಲಾಗುತ್ತಿದ್ದು, ಕೆಂಪೇಗೌಡರ ಜೀವನ, ಸಾಧನೆ ಆಧರಿಸಿದ ‘ಕೆಂಪಾಂಬುಧಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಲಾಗಿದೆ. ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಕೆಂಪೇಗೌಡರ ಜಯಂತಿಯಂದು ಬಿಡುಗಡೆ ಆಗಿದ್ದು, ಟೀಸರ್ ಗಮನ ಸೆಳೆಯುತ್ತಿದೆ.

ಐತಿಹಾಸಿಕ ಸಿನಿಮಾಕ್ಕಾಗಿ 13 ವರ್ಷಗಳ ಬಳಿಕ ಒಂದಾದ ಪ್ರೇಮ್-ಮೇಘನಾ
Kempe Gowda1
ಮಂಜುನಾಥ ಸಿ.
|

Updated on:Jul 01, 2026 | 9:53 AM

Share

ಕನ್ನಡ ಚಿತ್ರರಂಗದಲ್ಲಿ (Kempe Gowda) ಐತಿಹಾಸಿಕ ಕತೆಯುಳ್ಳ ಸಿನಿಮಾಗಳು ನಿರ್ಮಾಣ ಆಗುವುದು ಬಹಳ ಅಪರೂಪ. ನಮ್ಮಲ್ಲಿ ರೌಡಿಸಂ, ಅಂಡರ್ವಲ್ಡ್ ಸಿನಿಮಾಗಳೇ ಹೆಚ್ಚು. ಇದೀಗ ಚಿತ್ರತಂಡವೊಂದು ಐತಿಹಾಸಿಕ ಕತೆಯುಳ್ಳ ಸಿನಿಮಾ ನಿರ್ಮಾಣ ಮಾಡುವ ಸಾಹಸಕ್ಕೆ ಕೈ ಹಾಕಿದ್ದು, ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಜೀವನವನ್ನು ತೆರೆಗೆ ತರಲಾಗುತ್ತಿದ್ದು, ಕೆಂಪೇಗೌಡರ ಜೀವನ, ಸಾಧನೆ ಆಧರಿಸಿದ ‘ಕೆಂಪಾಂಬುಧಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಲಾಗಿದೆ. ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಕೆಂಪೇಗೌಡರ ಜಯಂತಿಯಂದು ಬಿಡುಗಡೆ ಆಗಿದ್ದು, ಟೀಸರ್ ಗಮನ ಸೆಳೆಯುತ್ತಿದೆ.

ಸಾಹಿತಿ ಜನಗೆರೆ ವೆಂಕಟರಾಮಯ್ಯನವರ ಅವರ ಕಾದಂಬರಿಯನ್ನು ಆಧರಿಸಿ ಈ ಸಿನಿಮಾದ ಚಿತ್ರಕತೆ ರಚಿಸಲಾಗಿದೆ. ರಮೇಶ್ ಬೇಗೂರ್ ಅವರು ಸಿನಿಮಾ ನಿರ್ದೇಶನ ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನೆನಪಿರಲಿ ಪ್ರೇಮ್ ನಟಿಸಿದ್ದು, ಸಿನಿಮಾನಲ್ಲಿ ಮೇಘನಾ ಗಾಂವ್ಕರ್ ಕೆಂಪೇಗೌಡರ ಪತ್ನಿ ಚೆನ್ನಾಂಬಾ ಪಾತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸುಧಾ ಬೆಳವಾಡಿ, ರಮೇಶ್ ನಟರಂಗ, ಸೇರಿದಂತೆ ಇನ್ನೂ ಕೆಲವು ಒಳ್ಳೆಯ ಕಲಾವಿದರುಗಳು ನಟಿಸಿದ್ದಾರೆ. ಹಳೆ ಬೆಂಗಳೂರಿನ ಹಿನ್ನೆಲೆಯಲ್ಲಿ ಸಾಗುವ ಈ ಕಥೆಯು ಇತಿಹಾಸ, ಜಾನಪದ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಕಟ್ಟಿಕೊಡಲಾಗಿದೆ.

ಇದನ್ನೂ ಓದಿ:ಶಾರುಖ್ ಖಾನ್ ಸಿನಿಮಾವನ್ನು ಹಿಂದಿಕ್ಕಿದ ಯಶ್ ಸಿನಿಮಾಗಳು

ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್ ಮತ್ತು ಹೊಂಬಾಳೆ ಮ್ಯೂಸಿಕ್ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಕೇವಲ ಮನರಂಜನೆಯಷ್ಟೇ ಅಲ್ಲದೆ, ಕೆಂಪೇಗೌಡರ ದೂರದೃಷ್ಟಿ ಮತ್ತು ಅವರು ಬೆಂಗಳೂರಿಗೆ ನೀಡಿದ ಕೊಡುಗೆಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವುದು ಈ ಚಿತ್ರದ ಮುಖ್ಯ ಉದ್ದೇಶವಾಗಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಹಸಿರು ವಾತಾವರಣ ಮತ್ತು ಪರಂಪರೆಯನ್ನು ಉಳಿಸಿಕೊಳ್ಳುವ ಸಂದೇಶವನ್ನು ಚಿತ್ರವು ಹೊತ್ತು ತರಲಿದೆ.

‘ಚಾರ್ಮಿನಾರ್’ ಚಿತ್ರದ ಬಳಿಕ ಪ್ರೇಮ್ ಮತ್ತು ಮೇಘನಾ ಗಾಂವ್ಕರ್ ಮತ್ತೆ ತೆರೆ ಹಂಚಿಕೊಳ್ಳುತ್ತಿರುವುದು ಈ ಚಿತ್ರದ ಮತ್ತೊಂದು ವಿಶೇಷತೆಯಾಗಿದೆ. 13 ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಬಗ್ಗೆ ಚಿತ್ರತಂಡ ಭಾರೀ ಭರವಸೆಯನ್ನು ಇಟ್ಟುಕೊಂಡಿದೆ. ಬೆಂಗಳೂರಿನ ಇತಿಹಾಸವನ್ನು ಭವ್ಯವಾಗಿ ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:51 am, Wed, 1 July 26

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ