AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸಿನಿಮಾ ನಿರ್ದೇಶಕ ಬಂಧನ

ಇಲ್ಲೊಬ್ಬ ಸಿನಿಮಾ ನಿರ್ದೇಶಕನ ಜೀವನವೇ ಸಿನಿಮಾದಂತಾಗಿದೆ. ಕೊಲೆ ಆರೋಪಿಯಾಗಿದ್ದ ಸಿನಿಮಾ ನಿರ್ದೇಶಕ ಗಜೇಂದ್ರ ಬರೋಬ್ಬರಿ 20 ವರ್ಷಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದ, ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಸೇರಿದ್ದಾನೆ.

20 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸಿನಿಮಾ ನಿರ್ದೇಶಕ ಬಂಧನ
ಮಂಜುನಾಥ ಸಿ.
|

Updated on: Jul 17, 2024 | 5:48 PM

Share

ಇಲ್ಲೊಬ್ಬ ಸಿನಿಮಾ ನಿರ್ದೇಶಕನ ಕತೆಯೇ ಸಿನಿಮಾದಂತಾಗಿದೆ. ಕೊಲೆ ಆರೋಪಿಯಾಗಿದ್ದ ಸಿನಿಮಾ ನಿರ್ದೇಶಕನೊಬ್ಬ ಬರೋಬ್ಬರಿ 20 ವರ್ಷಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆದರೆ ಇತ್ತೀಚೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಈಗ ಮತ್ತೆ ಜೈಲು ಪಾಲಾಗಿದ್ದಾನೆ. ಸಿನಿಮಾ ನಿರ್ದೇಶಕನ ಹೆಸರು ಗಜ ಅಲಿಯಾಸ್ ಗಜೇಂದ್ರ.

2004ರಲ್ಲಿ ರೌಡಿ ಶೀಟರ್ ಕೊತ್ತ ರವಿ ಎಂಬಾತನನ್ನು ವಿಲ್ಸನ್ ಗಾರ್ಡನ್​ನಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ಚಂದ್ರಪ್ಪ, ಅಲ್ಯುಮೀನಿಯಮ್ ಬಾಬು ಸೇರಿದಂತೆ ಸಿನಿಮಾ ನಿರ್ದೇಶಕ ಗಜ ಹೆಸರೂ ಸಹ ಇತ್ತು. ಗಜ ಅಲಿಯಾಸ್ ಗಜೇಂದ್ರ ಈ ಕೊತ್ತ ರವಿ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿ ಆಗಿದ್ದ. ಪ್ರಕರಣ ನಡೆದಾಗ ಗಜೇಂದ್ರನನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದ ಗಜೇಂದ್ರ ಆ ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ. ಆದರೆ ಆ ಬಳಿಕ ಪೊಲೀಸರಿಂದ ಕಣ್ಮರೆಯಾಗಿದ್ದ.

ಇದನ್ನೂ ಓದಿ:ಸೆಟ್​ನಲ್ಲೂ ಶೋಕಿ; ಸ್ಟಾರ್ ನಟನ ಸಿನಿಮಾ ಮಾಡಲು ಹೋದ ನಿರ್ಮಾಪಕನೇ ಸುಸ್ತು

ಜಾಮೀನು ಪಡೆದ ಬಳಿಕ ಜಾಮೀನಿನ ನಿಯಮಗಳನ್ನು ಪಾಲಿಸಿರಲಿಲ್ಲ. ಹಲವು ವರ್ಷಗಳಿಂದ ಕೋರ್ಟ್​ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೂ ಗಜೇಂದ್ರ ಸಿಕ್ಕಿರಲಿಲ್ಲ. ಇದೀಗ ಸಿಸಿಬಿ ಪೊಲೀಸರ ಕೈಗೆ ಗಜೇಂದ್ರ ಸಿಕ್ಕಿದ್ದು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಜೈಲಿಗೆ ಕಳಿಸಲಾಗಿದೆ. ಅರಸಯ್ಯನ ಶಿಷ್ಯನಾಗಿದ್ದ ಗಜೇಂದ್ರ ಅಲಿಯಾಸ್​ ಗಜ, ಈ ಹಿಂದೆ ‘ಪುಟಾಣಿ ಪವರ್’ ಹಾಗೂ ‘ರುದ್ರ’ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ