AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸಿನಿಮಾ ನಿರ್ದೇಶಕ ಬಂಧನ

ಇಲ್ಲೊಬ್ಬ ಸಿನಿಮಾ ನಿರ್ದೇಶಕನ ಜೀವನವೇ ಸಿನಿಮಾದಂತಾಗಿದೆ. ಕೊಲೆ ಆರೋಪಿಯಾಗಿದ್ದ ಸಿನಿಮಾ ನಿರ್ದೇಶಕ ಗಜೇಂದ್ರ ಬರೋಬ್ಬರಿ 20 ವರ್ಷಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದ, ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಸೇರಿದ್ದಾನೆ.

20 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸಿನಿಮಾ ನಿರ್ದೇಶಕ ಬಂಧನ
Follow us
ಮಂಜುನಾಥ ಸಿ.
|

Updated on: Jul 17, 2024 | 5:48 PM

ಇಲ್ಲೊಬ್ಬ ಸಿನಿಮಾ ನಿರ್ದೇಶಕನ ಕತೆಯೇ ಸಿನಿಮಾದಂತಾಗಿದೆ. ಕೊಲೆ ಆರೋಪಿಯಾಗಿದ್ದ ಸಿನಿಮಾ ನಿರ್ದೇಶಕನೊಬ್ಬ ಬರೋಬ್ಬರಿ 20 ವರ್ಷಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆದರೆ ಇತ್ತೀಚೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಈಗ ಮತ್ತೆ ಜೈಲು ಪಾಲಾಗಿದ್ದಾನೆ. ಸಿನಿಮಾ ನಿರ್ದೇಶಕನ ಹೆಸರು ಗಜ ಅಲಿಯಾಸ್ ಗಜೇಂದ್ರ.

2004ರಲ್ಲಿ ರೌಡಿ ಶೀಟರ್ ಕೊತ್ತ ರವಿ ಎಂಬಾತನನ್ನು ವಿಲ್ಸನ್ ಗಾರ್ಡನ್​ನಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ಚಂದ್ರಪ್ಪ, ಅಲ್ಯುಮೀನಿಯಮ್ ಬಾಬು ಸೇರಿದಂತೆ ಸಿನಿಮಾ ನಿರ್ದೇಶಕ ಗಜ ಹೆಸರೂ ಸಹ ಇತ್ತು. ಗಜ ಅಲಿಯಾಸ್ ಗಜೇಂದ್ರ ಈ ಕೊತ್ತ ರವಿ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿ ಆಗಿದ್ದ. ಪ್ರಕರಣ ನಡೆದಾಗ ಗಜೇಂದ್ರನನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದ ಗಜೇಂದ್ರ ಆ ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ. ಆದರೆ ಆ ಬಳಿಕ ಪೊಲೀಸರಿಂದ ಕಣ್ಮರೆಯಾಗಿದ್ದ.

ಇದನ್ನೂ ಓದಿ:ಸೆಟ್​ನಲ್ಲೂ ಶೋಕಿ; ಸ್ಟಾರ್ ನಟನ ಸಿನಿಮಾ ಮಾಡಲು ಹೋದ ನಿರ್ಮಾಪಕನೇ ಸುಸ್ತು

ಜಾಮೀನು ಪಡೆದ ಬಳಿಕ ಜಾಮೀನಿನ ನಿಯಮಗಳನ್ನು ಪಾಲಿಸಿರಲಿಲ್ಲ. ಹಲವು ವರ್ಷಗಳಿಂದ ಕೋರ್ಟ್​ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೂ ಗಜೇಂದ್ರ ಸಿಕ್ಕಿರಲಿಲ್ಲ. ಇದೀಗ ಸಿಸಿಬಿ ಪೊಲೀಸರ ಕೈಗೆ ಗಜೇಂದ್ರ ಸಿಕ್ಕಿದ್ದು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಜೈಲಿಗೆ ಕಳಿಸಲಾಗಿದೆ. ಅರಸಯ್ಯನ ಶಿಷ್ಯನಾಗಿದ್ದ ಗಜೇಂದ್ರ ಅಲಿಯಾಸ್​ ಗಜ, ಈ ಹಿಂದೆ ‘ಪುಟಾಣಿ ಪವರ್’ ಹಾಗೂ ‘ರುದ್ರ’ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ