AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಶೋಕ ಬ್ಲೇಡ್’ ಸಿನಿಮಾ ನಿರ್ದೇಶಕ ನಿರ್ದೇಶಕ ವಿನೋದ್ ದೋಂಡಾಲೆ ಸಾವು

ಸತೀಶ್ ನೀನಾಸಂ ನಟಿಸುತ್ತಿರುವ ‘ಅಶೋಕಾ ಬ್ಲೇಡ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದ ವಿನೋದ್ ದೊಂಡಾಲೆ ನಿಧನ ಹೊಂದಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ವಿನೋದ್, ‘ಕರಿಮಣಿ’ ಧಾರಾವಾಹಿಯ ನಿರ್ದೇಶಕರೂ ಹೌದು.

‘ಅಶೋಕ ಬ್ಲೇಡ್’ ಸಿನಿಮಾ ನಿರ್ದೇಶಕ ನಿರ್ದೇಶಕ ವಿನೋದ್ ದೋಂಡಾಲೆ ಸಾವು
ಮಂಜುನಾಥ ಸಿ.
|

Updated on: Jul 20, 2024 | 4:48 PM

Share

ಸಿನಿಮಾ ಹಾಗೂ ಕಿರುತೆರೆ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಲೆ ನಿಧನ ಹೊಂದಿದ್ದಾರೆ. ಅವರ ಶವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಿನೋದ್ ದೊಂಡಾಲೆ ಅವರು ಹಣಕಾಸಿನ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ವಿನೋದ್ ದೊಂಡಾಲೆಗೆ ಮೂವರು ಮಕ್ಕಳು ಹಾಗೂ ಪತ್ನಿ ಇದ್ದರು. ವಿನೋದ್ ನಿಧನಕ್ಕೆ ಚಿತ್ರರಂಗದ ಕೆಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿನೋದ್ ದೊಂಡಾಲಿ ಅವರ ನಾಗರಬಾವಿಯ ಮನೆಯಲ್ಲಿ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಕೆಲ ಮೂಲಗಳ ಪ್ರಕಾರ, ವಿನೋದ್ ಅವರು ಸಿನಿಮಾ ಹಾಗೂ ವೈಯಕ್ತಿಕ ಜೀವನ ನಿರ್ವಹಣೆಗೆ ಹಲವರಿಂದ ಸಾಲಗಳನ್ನು ಮಾಡಿಕೊಂಡಿದ್ದರಂತೆ. ಈಗ ಸಾಲ ತೀರಿಸಲು ಆಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ನೀನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಸಿನಿಮಾವನ್ನು ವಿನೋದ್ ನಿರ್ದೇಶನ ಮಾಡುತ್ತಿದ್ದರು. ‘ಅಶೋಕ್ ಬ್ಲೇಡ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಬಾಕಿಯಿದೆ. ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಹಾಗೂ ‘ಅಶೋಕ ಬ್ಲೇಡ್’ ಸಿನಿಮಾದ ನಿರ್ಮಾಪಕರ ಜೊತೆ ಶೂಟಿಂಗ್ ಬಗ್ಗೆ ಚರ್ಚಿಸಿದ್ದರಂತೆ ವಿನೋದ್. ಆದರೆ ಆ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಖ್ಯಾತ ನಟನ ಮಗಳು ನಿಧನ; ಕ್ಯಾನ್ಸರ್​ಗೆ ಬಲಿ

ವಿನೋದ್, ಖ್ಯಾತ ನಿರ್ದೇಶಕ ಪಿ ಶೇಷಾದ್ರಿ ಹಾಗೂ ಟಿಎನ್ ಸೀತಾರಾಮ್ ಗರಡಿಯಲ್ಲಿ ಪಳಗಿದ್ದ ನಿರ್ದೇಶಕ. ಈ ಇಬ್ಬರಿಗೂ ಸಹ ಸಹಾಯಕ ನಿರ್ದೇಶಕನಾಗಿ ವಿನೋದ್ ಕೆಲಸ ಮಾಡಿದ್ದರು. ಸಿನಿಮಾ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ವಿನೋದ್ ಕೆಲಸ ಮಾಡಿದ್ದು ‘ಕರಿಮಣಿ’ ಧಾರಾವಾಹಿ ನಿರ್ದೇಶನ ಮಾಡುತ್ತಿದ್ದರು. ವಿನೋದ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ನಿರ್ದೇಶಕ ಪಿ ಶೇಷಾದ್ರಿ, ‘ಒಂದು ಮಾತಾದರೂ ಹೇಳಬಾರದಿತ್ತೆ? ನಿನಗೆ ನನ್ನ ನೆನಪಾದರೂ ಬರಲಿಲ್ಲ ಏಕೆ?, ಹೆಂಡತಿ, ಮಕ್ಕಳ ಮುಖವೂ ಕಣ್ಣ ಮುಂದೆ ಬರಲಿಲ್ಲವೇ, ತಪ್ಪು ಮಾಡಿಬಿಟ್ಟೆ ನೀನು ಅಲ್ಲಾದರೂ ನೆಮ್ಮದಿಯಾಗಿರು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!