AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಶೋಕ ಬ್ಲೇಡ್’ ಸಿನಿಮಾ ನಿರ್ದೇಶಕ ನಿರ್ದೇಶಕ ವಿನೋದ್ ದೋಂಡಾಲೆ ಸಾವು

ಸತೀಶ್ ನೀನಾಸಂ ನಟಿಸುತ್ತಿರುವ ‘ಅಶೋಕಾ ಬ್ಲೇಡ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದ ವಿನೋದ್ ದೊಂಡಾಲೆ ನಿಧನ ಹೊಂದಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ವಿನೋದ್, ‘ಕರಿಮಣಿ’ ಧಾರಾವಾಹಿಯ ನಿರ್ದೇಶಕರೂ ಹೌದು.

‘ಅಶೋಕ ಬ್ಲೇಡ್’ ಸಿನಿಮಾ ನಿರ್ದೇಶಕ ನಿರ್ದೇಶಕ ವಿನೋದ್ ದೋಂಡಾಲೆ ಸಾವು
ಮಂಜುನಾಥ ಸಿ.
|

Updated on: Jul 20, 2024 | 4:48 PM

Share

ಸಿನಿಮಾ ಹಾಗೂ ಕಿರುತೆರೆ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಲೆ ನಿಧನ ಹೊಂದಿದ್ದಾರೆ. ಅವರ ಶವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಿನೋದ್ ದೊಂಡಾಲೆ ಅವರು ಹಣಕಾಸಿನ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ವಿನೋದ್ ದೊಂಡಾಲೆಗೆ ಮೂವರು ಮಕ್ಕಳು ಹಾಗೂ ಪತ್ನಿ ಇದ್ದರು. ವಿನೋದ್ ನಿಧನಕ್ಕೆ ಚಿತ್ರರಂಗದ ಕೆಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿನೋದ್ ದೊಂಡಾಲಿ ಅವರ ನಾಗರಬಾವಿಯ ಮನೆಯಲ್ಲಿ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಕೆಲ ಮೂಲಗಳ ಪ್ರಕಾರ, ವಿನೋದ್ ಅವರು ಸಿನಿಮಾ ಹಾಗೂ ವೈಯಕ್ತಿಕ ಜೀವನ ನಿರ್ವಹಣೆಗೆ ಹಲವರಿಂದ ಸಾಲಗಳನ್ನು ಮಾಡಿಕೊಂಡಿದ್ದರಂತೆ. ಈಗ ಸಾಲ ತೀರಿಸಲು ಆಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ನೀನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಸಿನಿಮಾವನ್ನು ವಿನೋದ್ ನಿರ್ದೇಶನ ಮಾಡುತ್ತಿದ್ದರು. ‘ಅಶೋಕ್ ಬ್ಲೇಡ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಬಾಕಿಯಿದೆ. ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಹಾಗೂ ‘ಅಶೋಕ ಬ್ಲೇಡ್’ ಸಿನಿಮಾದ ನಿರ್ಮಾಪಕರ ಜೊತೆ ಶೂಟಿಂಗ್ ಬಗ್ಗೆ ಚರ್ಚಿಸಿದ್ದರಂತೆ ವಿನೋದ್. ಆದರೆ ಆ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಖ್ಯಾತ ನಟನ ಮಗಳು ನಿಧನ; ಕ್ಯಾನ್ಸರ್​ಗೆ ಬಲಿ

ವಿನೋದ್, ಖ್ಯಾತ ನಿರ್ದೇಶಕ ಪಿ ಶೇಷಾದ್ರಿ ಹಾಗೂ ಟಿಎನ್ ಸೀತಾರಾಮ್ ಗರಡಿಯಲ್ಲಿ ಪಳಗಿದ್ದ ನಿರ್ದೇಶಕ. ಈ ಇಬ್ಬರಿಗೂ ಸಹ ಸಹಾಯಕ ನಿರ್ದೇಶಕನಾಗಿ ವಿನೋದ್ ಕೆಲಸ ಮಾಡಿದ್ದರು. ಸಿನಿಮಾ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ವಿನೋದ್ ಕೆಲಸ ಮಾಡಿದ್ದು ‘ಕರಿಮಣಿ’ ಧಾರಾವಾಹಿ ನಿರ್ದೇಶನ ಮಾಡುತ್ತಿದ್ದರು. ವಿನೋದ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ನಿರ್ದೇಶಕ ಪಿ ಶೇಷಾದ್ರಿ, ‘ಒಂದು ಮಾತಾದರೂ ಹೇಳಬಾರದಿತ್ತೆ? ನಿನಗೆ ನನ್ನ ನೆನಪಾದರೂ ಬರಲಿಲ್ಲ ಏಕೆ?, ಹೆಂಡತಿ, ಮಕ್ಕಳ ಮುಖವೂ ಕಣ್ಣ ಮುಂದೆ ಬರಲಿಲ್ಲವೇ, ತಪ್ಪು ಮಾಡಿಬಿಟ್ಟೆ ನೀನು ಅಲ್ಲಾದರೂ ನೆಮ್ಮದಿಯಾಗಿರು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ