AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು

Bigg Boss Kannada 12 Winner Gilli Nata: ಬಿಗ್​​ಬಾಸ್ ಗೆಲುವು ಗಿಲ್ಲಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ನೀಡಿದೆ ಅದರ ಜೊತೆಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ ಒಂದರ ನಿರ್ಮಾಪಕರು ಗಿಲ್ಲಿ ನಟ ವಿರುದ್ಧ ದೂರು ನೀಡಿದ್ದಾರೆ.

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು
Gilli Nata
ಮಂಜುನಾಥ ಸಿ.
|

Updated on: Feb 06, 2026 | 5:21 PM

Share

ಗಿಲ್ಲಿ ನಟ (Gilli Nata), ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್​​ಬಾಸ್​​ನಲ್ಲಿ ಗಿಲ್ಲಿ ತೋರಿದ ಪ್ರತಿಭೆಯ ಪ್ರದರ್ಶನ ಅವರಿಗೆ ದೊಡ್ಡ ಮಟ್ಟದ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ. ಬಿಗ್​​ಬಾಸ್ ಗೆಲುವು ಗಿಲ್ಲಿಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ ಒಂದರ ನಿರ್ಮಾಪಕರು ಗಿಲ್ಲಿ ನಟ ವಿರುದ್ಧ ದೂರು ನೀಡಿದ್ದಾರೆ.

ಗಿಲ್ಲಿ, ಬಿಗ್​​ಬಾಸ್​​ಗೆ ಹೋಗುವ ಮುಂಚೆ ‘ಸರ್ಕಾರಿ ಶಾಲೆ ಎಚ್​​8’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಇದೀಗ ಸಿನಿಮಾ ಬಿಡುಗಡೆ ಇಂದು (ಫೆಬ್ರವರಿ 6) ಆಗಿದೆ. ಈ ಹಂತದಲ್ಲಿ ಗಿಲ್ಲಿಯ ವಿರುದ್ಧ ಸಿನಿಮಾದ ನಿರ್ಮಾಪಕ ತೇಜಸ್ವಿ ಎಸ್ ಅವರು ಫಿಲಂ ಚೇಂಬರ್​​ಗೆ ದೂರು ನೀಡಿದ್ದಾರೆ. ಗಿಲ್ಲಿ, ಸಂಭಾವನೆ ಪಡೆದು ಸಿನಿಮಾನಲ್ಲಿ ನಟಿಸಿದ್ದಾರೆ ಆದರೆ ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ ಎಂದು ನಿರ್ಮಾಪಕರು ಆರೋಪಿಸಿದ್ದಾರೆ.

ಸಿನಿಮಾನಲ್ಲಿ ನಾವು ಗಿಲ್ಲಿಗೆ ಪ್ರಮುಖ ಪಾತ್ರ ನೀಡಿದ್ದೀವಿ, ಬಿಗ್​​ಬಾಸ್​​ಗೆ ಹೋಗುವ ಮುಂಚೆಯೇ ಅವರು ಕೇಳಿದಷ್ಟು ಸಂಭಾವನೆಯನ್ನು ಸಹ ಕೊಟ್ಟಿದ್ದೀವಿ. ಆದರೆ ಅವರು ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ. ಎಷ್ಟು ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲ, ಕನಿಷ್ಟ ನಮ್ಮ ಸಿನಿಮಾದ ಬಗ್ಗೆ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಹ ಹಂಚಿಕೊಂಡಿಲ್ಲ ಎಂದು ನಿರ್ಮಾಪಕ ಆರೋಪ ಮಾಡಿದ್ದಾರೆ. ದೂರು ಸ್ವೀಕಾರ ಮಾಡಿರುವ ಚೇಂಬರ್, ಗಿಲ್ಲಿಯನ್ನು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ:ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ

‘ಸರ್ಕಾರಿ ಶಾಲೆ ಎಚ್​​8’ ಸಿನಿಮಾವು ಸಸ್ಪೆನ್ಸ್ ಥ್ರಿಲ್ಲರ್ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಗಿಲ್ಲಿ ಮುಖ್ಯವಾದ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಕತೆ, ಚಿತ್ರಕತೆ ಮತ್ತು ನಿರ್ದೇಶನ ಮಾಡಿರುವುದು ಗುಣ ಹರಿಯಬ್ಬೆ. ಗುಣ ಹರಿಯಬ್ಬೆ, ಮೇಘಶ್ರೀ ಮತ್ತು ಜನಪದ ಕಲಾವಿದ ಮೋಹನ್ ಮುಖ್ಯ ಪಾತ್ರಗಳಲ್ಲಿದ್ದಾರೆ. ಜೊತೆಗೆ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್, ಸುಚೇಂದ್ರ ಪ್ರಸಾದ್, ಜಗಪ್ಪ, ನವಾಜ್, ಸುಶ್ಮಿತ ಜಗಪ್ಪ, ಕಡ್ಡಿ ವಿಶ್ವ, ಜೋತಿರಾಜ್ ಮತ್ತು ನಮ್ರತಾ ಈ ಸಿನಿಮಾನಲ್ಲಿ ನಟಿಸಿದ್ದಾರೆ. ‘ಸರ್ಕಾರಿ ಶಾಲೆ ಎಚ್​​8’ ಸಿನಿಮಾ ಇಂದು (ಫೆಬ್ರವರಿ 6) ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ
ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ
ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ
ತಂತ್ರಜ್ಞಾನ ಶಾಪ ಎಂದು ಭಾವಿಸುವ ಬದಲು "ವರದಾನ" ಎಂದು ಸ್ವೀಕರಿಸಿ
ತಂತ್ರಜ್ಞಾನ ಶಾಪ ಎಂದು ಭಾವಿಸುವ ಬದಲು