AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ; ಸಂತಾಪ ಸೂಚಿಸಿದ ಕನ್ನಡ ಚಿತ್ರರಂಗ

Jolly Bastian: ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ‘ನಿನಗಾಗಿ ಕಾದಿರುವೆ’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು.

ಹೃದಯಾಘಾತದಿಂದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ; ಸಂತಾಪ ಸೂಚಿಸಿದ ಕನ್ನಡ ಚಿತ್ರರಂಗ
ಜಾಲಿ
Malatesh Jaggin
| Edited By: |

Updated on:Dec 27, 2023 | 8:09 AM

Share

ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದರ ಮೇಲೆ ಒಂದರಂತೆ ಶಾಕ್​ಗಳು ಎದುರಾಗುತ್ತಲೇ ಇವೆ. ಹೃದಯಾಘಾತದಿಂದ ಹಲವರು ಮೃತಪಟ್ಟಿದ್ದಾರೆ. ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿನ್ ಹಠಾತ್ ಹೃದಯಘಾತದಿಂದ ಮಂಗಳವಾರ (ಡಿಸೆಂಬರ್ 26) ನಿಧನ ಹೊಂದಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ‘ಪ್ರೇಮಲೋಕ’ (Premaloka Movie),ಮಾಸ್ಟರ್​ ಪೀಸ್’ ಸೇರಿ ನೂರಾರು ಸಿನಿಮಾಗಳಿಗೆ ಅವರು ಸ್ಟಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.

ಜಾಲಿ ಅವರು ಹುಟ್ಟಿದ್ದು 1966ರಲ್ಲಿ. ಕೇರಳದ ಅಲೆಪ್ಪೆಯಲ್ಲಿ ಅವರು ಜನನ ಆಯಿತು. ಆದರೆ, ಅವರು ಬೆಳೆದಿದ್ದು ಬೆಂಗಳೂರಿನಲ್ಲಿ. ಅವರು ಬೆಂಗಳೂರಿನಲ್ಲೇ ಶಿಕ್ಷಣ ಪಡೆದರು. ಬೈಕ್ ಮೆಕಾನಿಕ್ ಆಗಿ ಜಾಲಿ ಬಾಸ್ಟಿನ್ ವೃತ್ತಿ ಆರಂಭಿಸಿದರು. ಅವರನ್ನು ಗುರುತಿಸಿದ ಕೆಲವರು ಸ್ಟಂಟ್​ಮನ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿದರು. ‘ಪ್ರೇಮಲೋಕ’ ಚಿತ್ರದಲ್ಲಿ ರವಿಚಂದ್ರನ್ ಅವರಿಗೆ ಡ್ಯೂಪ್ ಹಾಕಿದರು. ಆಗ ಅವರಿಗೆ 17 ವರ್ಷ ವಯಸ್ಸು.

ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ‘ನಿನಗಾಗಿ ಕಾದಿರುವೆ’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆ ಅವರಿಗೆ ಇತ್ತು. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ಸಾಹಸ ನಿರ್ದೇಶಕನಾಗಿ ಜಾಲಿ ಬಾಸ್ಟಿನ್ ಹೆಸರು ಮಾಡಿದ್ದರು.

ಇದನ್ನೂ ಓದಿ: ತ್ರಿವಿಕ್ರಮ’ನ ಸಾಹಸಕ್ಕೆ ಫೈಟ್​ ಮಾಸ್ಟರ್ಸ್​ ಯಾರ್​ ಯಾರ್​ ಗೊತ್ತಾ..?

‘ಪ್ರೇಮಲೋಕ’, ‘ಪುಟ್ನಂಜ’, ‘ಅಣ್ಣಯ್ಯ’, ‘ಶಾಂತಿ ಕ್ರಾಂತಿ’ ಸೇರಿದಂತೆ ರವಿಚಂದ್ರನ್ ನಟನೆಯ ಹಲವಾರು ಸಿನಿಮಾಗಳಲ್ಲಿ ಜಾಲಿ ಕೆಲಸ ಮಾಡಿದ್ದಾರೆ. ರಿಸ್ಕಿ ಸ್ಟಂಟ್ ಮಾಡೋ ವೇಳೆ ಸಾಕಷ್ಟು ಬಾರಿ ಜಾಲಿ ಬಾಸ್ಟಿನ್ ಪೆಟ್ಟು ಮಾಡಿಕೊಂಡಿದ್ದರು. ‘ಭಲೇ ಚತುರ’ ಸಿನಿಮಾದ ಬಾಂಬ್ ಬ್ಲಾಸ್ಟ್ ದೃಶ್ಯದ ವೇಳೆ ಜಾಲಿ ದೇಹಕ್ಕೆ ಸಾಕಷ್ಟು ಹಾನಿ ಆಗಿತ್ತು. ‘ಪುಟ್ನಂಜ’ ಸಿನಿಮಾ ಶೂಟ್ ವೇಳೆ ಬೈಕ್​ನಿಂದ ಬಿದ್ದು ಅವರ ಮುಖ ಹಾಗೂ ಕಾಲಿಗೆ ಪೆಟ್ಟಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Wed, 27 December 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್