AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್​ಗೂ ಸಿಕ್ಕಿದಂತೆ: ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ

Ambareesh: ಇಂದು ಅಂಬರೀಶ್ ಮೂರನೇ ವರ್ಷದ ಪುಣ್ಯ ಸ್ಮರಣೆ. ಅವರ ಸಮಾಧಿಗೆ ಪೂಜೆ ಸಲ್ಲಿಸಿ ನಂತರ, ಸಂಸದೆ ಸುಮಲಾತಾ ಅಂಬರೀಶ್ ಮಾತನಾಡಿದ್ದಾರೆ.

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್​ಗೂ ಸಿಕ್ಕಿದಂತೆ: ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ
ಅಂಬರೀಶ್, ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Nov 24, 2021 | 12:17 PM

Share

ಬೆಂಗಳೂರು: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಸಿಕ್ಕಿದೆ ಎಂದರೆ ಅದು ಅಂಬರೀಶ್​ಗೆ ಸಿಕ್ಕಿದ ಹಾಗೆ ಎಂದು ಸಂಸದೆ ಸುಮಲತಾ ಅಂಬರೀಶ್ ನುಡಿದಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ಮೂರನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಅವರು ಪುತ್ರ ಅಭಿಷೇಕ್ ಅಂಬರೀಶ್ ಜತೆ ಕಂಠೀರವ ಸ್ಟುಡಿಯೋಗೆ ಆಗಮಿಸಿ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ‘‘ಅಂಬರೀಶ್​​ಗೆ ಪ್ರಶಸ್ತಿ ಸಿಕ್ಕೆ ಸಿಗುತ್ತದೆ. ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅದು ಅಂಬರೀಶ್​ಗೆ ಸಿಕ್ಕ ಹಾಗೆ’’ ಎಂದು ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, ‘‘ಇವತ್ತು ಅವರ ಮೂರನೇ ಪುಣ್ಯಸ್ಮರಣೆ. ಅವರಿಲ್ಲ ಎಂಬ ನೋವು ಶಾಶ್ವತ. ಅವ್ರ ಜೀವನದಲ್ಲಿ ನಡೆದುಕೊಂಡು ಬಂದಿರೋ ಹಾದಿಯೇ ನಮಗೆ ಶಕ್ತಿ. ಅಂಥವರನ್ನು ಕಳೆದುಕೊಂಡ ಮೇಲೆ ಧೈರ್ಯ ಬೇಕು. ಅವ್ರ ಜೊತೆ ಕಳೆದ ಸಮಯ ನೆನಪಿಸಿಕೊಂಡರೆ ಧೈರ್ಯ ಬರುತ್ತದೆ’’ ಎಂದಿದ್ದಾರೆ.

ಅಂಬರೀಶ್ ಸಮಾಜಮುಖಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವ ಕುರಿತಂತೆ ಮಾತನಾಡಿ ಅವರು, ‘‘ಅಂಬರೀಶ್​​ ಅವರು ಸಮಾಜಮುಖಿ ಕಾರ್ಯಗಳನ್ನು ತೋರಿಕೆಗಾಗಿ ಮಾಡಿಲ್ಲ. ಕಷ್ಟದಲ್ಲಿ ಇದ್ದವರಿಗೆ ಸ್ಪಂದಿಸಿದವರು. ಅವರ ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ಡಾ.ಅಂಬರೀಷ್ ಚಾರಿಟೇಬಲ್ ಟ್ರಸ್ಟ್ ಮಾಡಿದ್ದೇವೆ. ಅವರ ಕನಸುಗಳನ್ನು ಈ ಟ್ರಸ್ಟ್ ಮೂಲಕ ಮುಂದುವರೆಸುತ್ತಿದ್ದೇವೆ’’ ಎಂದು ಹೇಳಿದ್ದಾರೆ.

ಕೆಆರ್​ಎಸ್ ಮೈನಿಂಗ್ ವಿಚಾರದ ಹೋರಾಟ ನಿಲ್ಲಿಸುವುದಿಲ್ಲ: ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ವಿಧಾನಪರಿಷತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ‘‘ಯಾರ ಪರವಾಗಿ ಬೆಂಬಲ ಅಂತಾ ಹೇಳುವುದಿಲ್ಲ. ಮಂಡ್ಯ ಜಿಲ್ಲೆಗೆ ಯಾರು ಒಳ್ಳೆ ಅಭ್ಯರ್ಥಿಯಾಗಿರುತ್ತಾರೆ, ಅವರಿಗೆ ಸರ್ಪೋಟ್ ಮಾಡುತ್ತೇವೆ. ಕೆಆರ್​ಎಸ್ ಮೈನಿಂಗ್ ವಿಚಾರದಲ್ಲಿ ನನ್ನ ಹೋರಾಟ ನಿಲ್ಲಿಸಲ್ಲ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಪವರ್​​ಸ್ಟಾರ್ ಪುನೀತ್ ರಾಜ್​​ಕುಮಾರ್​ಗೆ ಸಾವಿಲ್ಲ ಎಂದ ಸುಮಲತಾ ಅಂಬರೀಶ್​

ಇಂದು ಅಂಬರೀಷ್​ ಪುಣ್ಯತಿಥಿ; ಅಂಬಿ ಇಲ್ಲದೆ ಕಳೆಯಿತು ಮೂರು ವರ್ಷ

Published On - 12:15 pm, Wed, 24 November 21

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ