AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೈನ’ ಕನ್ನಡ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಸಂಸದ ತೇಜಸ್ವಿ ಸೂರ್ಯ

‘ಹೈನ’ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಈ ಸಿನಿಮಾದ ಟ್ರೇಲರ್​ ಅನಾವರಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ದೇಶಭಕ್ತಿಯ ಕಥಾಹಂದರ ಇದೆ. ವೆಂಕಟ್ ಭಾರದ್ವಾಜ್ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ ಬಿಡುಗಡೆ ಮಾಡಿದ ಬಳಿಕ ಚಿತ್ರತಂಡಕ್ಕೆ ತೇಜಸ್ವಿ ಸೂರ್ಯ ಶುಭ ಹಾರೈಸಿದರು.

‘ಹೈನ’ ಕನ್ನಡ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಸಂಸದ ತೇಜಸ್ವಿ ಸೂರ್ಯ
Tejasvi Surya With Hyena Movie Team
ಮದನ್​ ಕುಮಾರ್​
|

Updated on: Jan 17, 2025 | 9:05 PM

Share

ಬಿಡುಗಡೆಗೆ ಸಜ್ಜಾಗಿರುವ ‘ಹೈನ’ ಸಿನಿಮಾದಲ್ಲಿ ಹರ್ಷ ಅರ್ಜುನ್, ರಾಜ್ ಕಮಲ್, ದಿಗಂತ ಸ್ವರೂಪ, ಲಕ್ಷ್ಮಣ ಶಿವಶಂಕರ್, ನಂದಕಿಶೋರ್, ಲಾರೆನ್ಸ್ ಪ್ರೀತಂ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ದೇಶಪ್ರೇಮದ ಕಥೆ ಇದೆ ಎಂದು ಚಿತ್ರತಂಡ ಹೇಳಿದೆ. ವೆಂಕಟ್ ಭಾರದ್ವಾಜ್ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವೆಂಕಟ್ ಭಾರದ್ವಾಜ್ ಮತ್ತು ರಾಜ್ ಕಮಲ್ ನಿರ್ಮಾಣ ಮಾಡಿದ್ದಾರೆ. ತೇಜಸ್ವಿ ಸೂರ್ಯ ಅವರಿಂದ ‘ಹೈನ’ ಟ್ರೇಲರ್ ಅನಾವರಣ ಆಗಿದೆ.

ಜನವರಿ 31ರಂದು ‘ಹೈನ’ ಸಿನಿಮಾ ಬಿಡುಗಡೆ ಆಗಲಿದೆ. ‘ಸಮಾಜಕ್ಕೆ ಉತ್ತಮ ಸಂದೇಶ ಕೊಡಲು ಈ ಸಿನಿಮಾವನ್ನು ಮಾಡಿದ್ದಾರೆ‌. ಪ್ರಚಲಿತ ವಿಷಯಗಳನ್ನು ಇಟ್ಟುಕೊಂಡು ಪ್ರೇಕ್ಷಕರಲ್ಲಿ ಅರಿವು ಮೂಡಿಸುವ ಪ್ರಯತ್ನವನ್ನು ಈ ಸಿನಿಮಾದ ಮೂಲಕ ಮಾಡುತ್ತಿರುವುದು ಶ್ಲಾಘನೀಯ. ಇದರಿಂದ ಸಮಾಜದಲ್ಲಿ ಜಾಗೃತಿ ಉಂಟಾಗಲಿ. ವೆಂಕಟ್ ಭಾರಧ್ವಜ್ ಅವರ ಪ್ರಯತ್ನಕ್ಕೆ ಶುಭವಾಗಲಿ. ಮತ್ತಷ್ಟು ಸಿನಿಮಾಗಳು ಅವರಿಂದ ಬರಲಿ’ ಎಂದು ತೇಜಸ್ವಿ ಸೂರ್ಯ ಅವರು ಹೇಳಿದರು.

‘ಹೈನ’ ಸಿನಿಮಾ ಟ್ರೇಲರ್:

ಇದೇ ವೇಳೆ ನಿರ್ದೇಶಕ ವೆಂಕಟ್ ಭಾರದ್ವಾಜ್ ಮಾತನಾಡಿದರು. ‘ಇದು ರಾಷ್ಟ್ರಭಕ್ತಿಯ ಕಥೆ ಇರುವ ಸಿನಿಮಾ. ಈ ರೀತಿಯ ಸಿನಿಮಾ ನಿರ್ದೇಶನ ಮಾಡಲು ತುಂಬ ಖುಷಿ ಆಗುತ್ತದೆ. ಗುಪ್ತಚರ ಇಲಾಖೆ, ರಕ್ಷಣಾ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿ ಹೇಗಿರಲಿದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸುತ್ತಿದ್ದೇವೆ. ಟ್ರೇಲರ್ ಬಿಡುಗಡೆ ಮಾಡಿದ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದಗಳು. ಈ ಸಿನಿಮಾದಲ್ಲಿ ಕೆಲವು ದೇಶಗಳ ಹೆಸರನ್ನು ಬಳಸಿದ್ದೆವು. ಆದರೆ ಆ ಹೆಸರುಗಳನ್ನು ಬಳಸದಂತೆ ಸೆನ್ಸಾರ್ ಮಂಡಳಿ ಹೇಳಿದೆ‌. ಅದು ಸ್ವಲ್ಪ ಬೇಸರವಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ; ಮೋದಿ ಮೆಚ್ಚಿದ ಧ್ವನಿ ಇದು

ಈ ಸಿನಿಮಾಗೆ ನಿಶಾಂತ್ ನಾಣಿ ಛಾಯಾಗ್ರಹಣ ಮಾಡಿದ್ದಾರೆ. ಶಮೀಕ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ‘ಅಕ್ರಮ‌ ವಲಸಿಗರು ನಮ್ಮ ದೇಶದ ಒಳಗೆ ನುಸುಳಿ ಹೇಗೆ ಉಪಯೋಗಿಸುತ್ತಿದ್ದಾರೆ . ರಾಷ್ಟ್ರದ ಆಂತರಿಕ ಭದ್ರತೆ ಕೆಡುತ್ತಿದೆ. ಭಯೋತ್ಪಾದಕರಿಗೆ ಹಣ ಹೇಗೆ ಬರುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ’ ಎಂದು ಕಥೆ ಬರೆದಿರುವ ಲಕ್ಷ್ಮಣ್ ಶಿವಶಂಕರ್ ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ