AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಜಾಹುಲಿ’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿದ ವೀರೇಂದ್ರ ಹೆಗ್ಗಡೆ

ವೀರೇಂದ್ರ ಹೆಗ್ಗಡೆ ಅವರು ‘ಮಿಸ್ಟರ್ ಅಂಡ್ ಮಿಸೆಸ್ ರಾಜಾಹುಲಿ’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹೊನ್ನರಾಜ್ ಹಾಗೂ ಶ್ರುತಿ ಬಬಿತಾ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಮದ್ದೂರು, ಚಿಕ್ಕನಾಯಕನಾಹಳ್ಳಿ, ಹುಳಿಯಾರು, ಶ್ರೀರಂಗಪಟ್ಟಣ ಸುತ್ತಮುತ್ತ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ.

‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಜಾಹುಲಿ’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿದ ವೀರೇಂದ್ರ ಹೆಗ್ಗಡೆ
ಪೋಸ್ಟರ್​ ಬಿಡುಗಡೆ ಮಾಡಿದ ವೀರೇಂದ್ರ ಹೆಗ್ಗಡೆ
ಮದನ್​ ಕುಮಾರ್​
|

Updated on: Aug 15, 2024 | 3:00 PM

Share

ಯಶ್​ ನಟನೆಯ ‘ರಾಜಾಹುಲಿ’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಚೆನ್ನಾಗಿ ಗೊತ್ತು. ಈಗ ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಜಾಹುಲಿ’ ಸಿನಿಮಾ ಸಿದ್ಧವಾಗುತ್ತಿದೆ. ಆದರೆ ಇದು ಯಶ್​ ಅಭಿನಯದ ಸಿನಿಮಾ ಅಲ್ಲ. ಈ ಚಿತ್ರದ ಕಥೆಯಲ್ಲಿ ಕಥಾನಾಯಕ ಯಶ್​ ಅವರ ಅಭಿಮಾನಿ ಆಗಿರುತ್ತಾನೆ. ಹೊನ್ನರಾಜ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಿಲೀಸ್​ಗೆ ಸಜ್ಜಾಗುತ್ತಿರುವ ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಜಾಹುಲಿ’ ಸಿನಿಮಾ ತಂಡದವರು ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ.

ನಿರ್ದೇಶಕ ಹೊನ್ನರಾಜ್ ಅವರಿಗೆ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಮೊದಲ ಸಿನಿಮಾ. ನಿರ್ದೇಶನ ಮಾಡುವುದು ಮಾತ್ರವಲ್ಲದೇ, ಈ ಸಿನಿಮಾದಲ್ಲಿ ಅವರು ಹೀರೋ ಆಗಿ ಕೂಡ ನಟಿಸಿದ್ದಾರೆ. ಅಷ್ಟೇ ಅಲ್ಲ, ನಿರ್ಮಾಣ ಕೂಡ ಅವರದ್ದೇ. ಈಗ ಈ ಸಿನಿಮಾದ ಹೊಸ ಪೋಸ್ಟರ್​ ಅನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಲ್ಲೇ ಅನಾವರಣ ಮಾಡಿರುವುದು ವಿಶೇಷ.

ಪೋಸ್ಟರ್​ ಬಿಡುಗಡೆ ವೇಳೆ ಚಿತ್ರತಂಡದವರಾದ ನಾಯಕ ಕಮ್​ ನಿರ್ದೇಶಕ ಹೊನ್ನರಾಜ್, ನಂದಿಹಳ್ಳಿ ಶಿವಣ್ಣ, ರಾಜೇಂದ್ರ, ಜಗದೀಶ್, ಸಹ-ನಿರ್ದೇಶಕ ಪ್ರಕಾಶ್ ವೆಂಕಟರಮಣ, ಮೋಹನ್, ಸ್ಟಿಲ್ ವೆಂಕಟೇಶ್, ಜಗನ್ನಾಥ್ ಮುಂತಾದವರು ಹಾಜರಿದ್ದರು. ಸಂಜಯ್ ಶ್ರೀನಿವಾಸ್ ಅವರು ಈ ಸಿನಿಮಾದ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ವಿನು ಮನಸು ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಶಿವಪುತ್ರ ಅವರು ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಅವರು ನೃತ್ಯ ನಿರ್ದೇಶನ‌ದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಮೈಸೂರು ಮಂಜುಳಾ, ರೇಖಾ ದಾಸ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಹೀರೋಯಿನ್ ಶ್ರುತಿ ಬಬಿತಾ ಅವರಿಗೆ ಬಜಾರಿ ಹುಡುಗಿಯ ಪಾತ್ರವಿದೆ.

ಇದನ್ನೂ ಓದಿ: ಕಲಾವಿದರ ಸಂಘದಲ್ಲಿ ಪೂಜೆ, ಹೋಮ: ಪ್ರಮುಖ ನಟರೇ ಬಂದಿಲ್ಲ ಎಂದಿದ್ದಕೆ ಸುಮಲತಾ ಏನಂದ್ರು?

ಚಿತ್ರತಂಡದವರು ನೀಡಿರುವ ಮಾಹಿತಿ ಪ್ರಕಾರ, ಇದು ನೈಜ ಘಟನೆಯನ್ನು ಆಧರಿಸಿ ನಿರ್ಮಾಣ ಆಗಿರುವ ಸಿನಿಮಾ. ಇದರಲ್ಲಿ ಫ್ಯಾಮಿಲಿ ಎಂಟರ್​ಟೇನ್ಮೆಂಟ್​ ಇರಲಿದೆ. ಯಶ್ ಅಭಿಮಾನಿಯಾಗಿ ಕಾಣಿಸಿಕೊಳ್ಳುವ ನಾಯಕನು ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುತ್ತಾನೆ.‌ ಯಾವಾಗಲೂ ಸಮಾಜಸೇವೆಯಲ್ಲಿ ಇರುತ್ತಾನೆ. ಅಂಥವನಿಗೆ ಕಂಕಣ ಭಾಗ್ಯ ಕೂಡಿಬರುತ್ತೋ ಇಲ್ಲವೋ ಎಂಬುದು ಸಿನಿಮಾ ಕಹಾನಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್