ಮಿಲಿಯನ್ ಮುಟ್ಟಿದ ‘ಮಿಸ್ಟರ್ ರಾಣಿ’ ಟೀಸರ್; ಹುಡುಗನೇ ಈ ಸಿನಿಮಾದ ಹೀರೋಯಿನ್

ಡಿಫರೆಂಟ್ ಕಥಾಹಂದರ ಹೊಂದಿರುವ ‘ಮಿಸ್ಟರ್​ ರಾಣಿ’ ಟೀಸರ್​ ಗಮನ ಸೆಳೆಯುತ್ತಿದೆ. ಕನ್ನಡದಲ್ಲಿ ಈ ರೀತಿ ಕಾನ್ಸೆಪ್ಟ್​ ಸಿನಿಮಾಗಳು ತೀರ ವಿರಳ. ಹಾಗಾಗಿ ‘ಮಿಸ್ಟರ್ ರಾಣಿ’ ಮೇಲೆ ನಿರೀಕ್ಷೆ ಮೂಡಿದೆ. ಕಾಮಿಡಿ ಕಥಾಹಂದರದ ಈ ಚಿತ್ರಕ್ಕೆ ಮಧುಚಂದ್ರ ಅವರು ನಿರ್ದೇಶನ ಮಾಡಿದ್ದಾರೆ. ದೀಪಕ್ ಸುಬ್ರಹ್ಮಣ್ಯ ಅವರು ಈ ಸಿನಿಮಾದಲ್ಲಿ ಹೀರೋ.. ಅಲ್ಲಲ್ಲ, ಹೀರೋಯಿನ್ ಆಗಿ ನಟಿಸಿದ್ದಾರೆ.

ಮಿಲಿಯನ್ ಮುಟ್ಟಿದ ‘ಮಿಸ್ಟರ್ ರಾಣಿ’ ಟೀಸರ್; ಹುಡುಗನೇ ಈ ಸಿನಿಮಾದ ಹೀರೋಯಿನ್
ದೀಪಕ್ ಸುಬ್ರಹ್ಮಣ್ಯ
Follow us
|

Updated on: Oct 23, 2024 | 5:54 PM

ಕನ್ನಡದ ‘ಮಿಸ್ಟರ್ ರಾಣಿ’ ಸಿನಿಮಾದ ಟೀಸರ್​ ಇತ್ತೀಚೆಗೆ ಬಿಡುಗಡೆಯಾಗಿ ಯೂಟ್ಯೂಬ್​ನಲ್ಲಿ 1 ಮಿಲಿಯನ್ ವೀಕ್ಷಣೆ ಕಂಡಿದೆ. ಈ ಮೊದಲು ಪೋಸ್ಟರ್​ ಮೂಲಕ ಈ ಚಿತ್ರ ಕೌತುಕ ಮೂಡಿಸಿತ್ತು. ಈಗ ಟೀಸರ್​ ಮೂಲಕ ಗಮನ ಸೆಳೆಯುತ್ತಿದೆ. ಇದು ಪಕ್ಕಾ ಕಾಮಿಡಿ ಸಿನಿಮಾ ಎಂಬುದನ್ನು ಟೀಸರ್​ ಒತ್ತಿ ಹೇಳುತ್ತಿದೆ. ಈ ಹಿಂದೆ ಕಾಮಿಡಿ ಕಥಾಹಂದರದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದ ಮಧುಚಂದ್ರ ಅವರು ಈಗ ‘ಮಿಸ್ಟರ್​ ರಾಣಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

‘ಮಿಸ್ಟರ್ ರಾಣಿ’ ಚಿತ್ರದಲ್ಲಿ ಇಂಟರೆಸ್ಟಿಂಗ್ ಕಹಾನಿ ಇದೆ. ಹೀರೋ ಆಗುವ ಆಸೆಯಿಂದ ಚಿತ್ರರಂಗಕ್ಕೆ ಬಂದ ಯುವಕ ನಂತರ ಆಕಸ್ಮಿಕವಾಗಿ ಹೀರೋಯಿನ್ ಆಗುತ್ತಾನೆ. ಈ ರೀತಿ ಡಿಫರೆಂಟ್​ ಕಹಾನಿ ಈ ಸಿನಿಮಾದಲ್ಲಿ ಇದೆ ಎಂಬುದು ಟೀಸರ್​ ಮೂಲಕ ಗೊತ್ತಾಗಿದೆ. ಟೀಸರ್ ರೀತಿಯೇ ಇಡೀ ಸಿನಿಮಾದಲ್ಲಿ ತರಲೆ, ತಮಾಷೆ ಜೋರಾಗಿ ಇರಲಿದೆ ಎಂದು ಸಿನಿಪ್ರಿಯರು ನಿರೀಕ್ಷಿಸಿದ್ದಾರೆ. ಸದ್ಯ ಟೀಸರ್​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಇದನ್ನೂ ಓದಿ: ‘ಕಾಮಿಡಿ ಕಿಲಾಡಿಗಳು’ ಹಾಸ್ಯ ಕಲಾವಿದ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’

ಅಂದಹಾಗೆ, ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ಮಾಡಿರುವುದು ‘ಲಕ್ಷ್ಮಿ ನಿವಾಸ’ ಸೀರಿಯಲ್ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ. ‘ಲಕ್ಷ್ಮಿ ನಿವಾಸ’ ಧಾರಾವಾಹಿಯಲ್ಲಿ ಅವರು ಜಯಂತ್ ಎಂಬ ಪಾತ್ರ ಮಾಡಿ ಗಮನ ಸೆಳೆದರು. ಈಗ ‘ಮಿಸ್ಟರ್​ ರಾಣಿ’ ಸಿನಿಮಾದಲ್ಲಿ ಹುಡುಗಿಯ ಪಾತ್ರ ಮಾಡುವ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಅವರ ಬದಲಾವಣೆ ಕಂಡು ಚಿತ್ರರಂಗದ ಹಲವರಿಗೂ ಅಚ್ಚರಿ ಆಗಿದೆ.

‘ಮಿಸ್ಟರ್​ ರಾಣಿ’ ಟೀಸರ್​:

‘ಮಿಸ್ಟರ್​ ರಾಣಿ’ ಸಿನಿಮಾದಲ್ಲಿ ಹುಡುಗಿಯ ಪಾತ್ರ ಮಾಡಿರುವುದು ದೀಪಕ್ ಸುಬ್ರಹ್ಮಣ್ಯ ಎಂಬುದು ತಿಳಿದು ಸ್ವತಃ ಅವರ ಅಭಿಮಾನಿಗಳಿಗೆ ಶಾಕ್ ಆಗಿದೆ. ಒಟ್ಟಿನಲ್ಲಿ ಈ ಟೀಸರ್​ ಮೂಲಕ ಚಿತ್ರತಂಡದ ಪರಿಶ್ರಮ ಕಾಣಿಸಿದೆ. ತಾಂತ್ರಿಕ ಗುಣಮಟ್ಟ ಕೂಡ ಟೀಸರ್​ನಲ್ಲಿ ಕಾಣಿಸುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಯೂಟ್ಯೂಬ್​ನಲ್ಲಿ ಮಿಲಿಯನ್​ಗಟ್ಟಲೆ ವೀಕ್ಷಣೆ ಕಂಡಿದೆ. ಬಹುತೇಕ ಎಲ್ಲರೂ ಪಾಸಿಟವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ನಾನು ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವಂತೆ ಹೈಕಮಾಂಡ್ ಹೇಳಿದೆ: ಸುರೇಶ್
ನಾನು ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವಂತೆ ಹೈಕಮಾಂಡ್ ಹೇಳಿದೆ: ಸುರೇಶ್
ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್
ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?