AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಆರ್’ ಟೈಟಲ್​ನಲ್ಲಿ ತೆರೆ ಮೇಲೆ ಬರಲಿದೆ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾ..

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾವೊಂದು ತೆರೆಗೆ ಅಪ್ಪಳಿಸಲು ಸಿದ್ಧವಾಗುತ್ತಿದೆ. ಮುತ್ತಪ್ಪ ರೈ ಕುರಿತು ಚಿತ್ರವೊಂದನ್ನ ಮಾಡಲು ನಿರ್ದೇಶಕ ರವಿ ಶ್ರೀವತ್ಸ ಮುಂದಾಗಿದ್ದಾರೆ.

‘ಎಂಆರ್’ ಟೈಟಲ್​ನಲ್ಲಿ ತೆರೆ ಮೇಲೆ ಬರಲಿದೆ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾ..
ಆಯೇಷಾ ಬಾನು
|

Updated on: Nov 27, 2020 | 6:49 AM

Share

ರಾಮನಗರ: ಮಾಜಿ ಡಾನ್, ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಜೀವನಾಧಾರಿತ ಚಿತ್ರವೊಂದು ತೆರೆಮೆಲೆ ಬರೋಕೆ ಸಿದ್ಧವಾಗ್ತಿದೆ. ಒಂದಾನೊಂದು ಕಾಲದ ಭೂಗತ ಲೋಕದ ಡಾನ್ ಮುತ್ತಪ್ಪರೈ ಬೆಂಗಳೂರು, ಮಂಗಳೂರು, ಮುಂಬೈನಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಇದೀಗ ಮುತ್ತಪ್ಪ ಜೀವನಾಧಾರಿತ ಸಿನಿಮಾ ಮಾಡಲು ನಿರ್ದೇಶಕ ರವಿ ಶ್ರೀವತ್ಸ ಮುಂದಾಗಿದ್ದಾರೆ. ‘ಎಂಆರ್’ ಟೈಟಲ್​ನಲ್ಲಿ 3 ಭಾಗವಾಗಿ ಚಿತ್ರ ನಿರ್ಮಿಸಲು ರವಿ ಹೊರಟಿದ್ದಾರೆ.

ಚಿತ್ರಕ್ಕೆ ಶೋಭಾ ರಾಜಣ್ಣ ನಿರ್ಮಾಪಕರಾಗಿದ್ದು, ಪುತ್ರ ದೀಕ್ಷಿತ್ ನಾಯಕನಾಗಿ ಅಭಿನಯಿಸಲಿದ್ದಾರೆ. ಚಿತ್ರದಲ್ಲಿ ಸಾಕಷ್ಟು ಹೊಸಮುಖಗಳು ಇರಲಿವೆಯಂತೆ. ಗುರುಕಿರಣ್ ಅವರ ಮ್ಯೂಸಿಕ್, ಜೊತೆಗೆ ವಿಕ್ರಮ್​ರ ಸಾಹಸ ಚಿತ್ರಕ್ಕೆ ಇರಲಿದೆ. ಈಗಾಗಲೇ ರಾಮನಗರ ತಾಲೂಕಿನ ಶಿಲ್ದಾಂದರ್​ನಲ್ಲಿ ಚಿತ್ರದ ಫೋಟೊ ಶೂಟ್ ನಡೆಸಲಾಗಿದೆ.

ಇನ್ನು ಚಿತ್ರಕ್ಕಾಗಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಈ ಚಿತ್ರದಲ್ಲಿ ಸಾಮಾನ್ಯರಿಗೆ ತಿಳಿದಿರದ ಹಲವಾರು ಸಂಗತಿಗಳನ್ನ ತೆರೆಮೇಲೆ ತರಲು ನಿರ್ದೇಶಕ ರವಿ ಶ್ರೀವತ್ಸ ಕತೆ ಸಿದ್ಧಪಡಿಸಿದ್ದಾರೆ. ಹೀಗಾಗಿ ಚಿತ್ರ ಚಿತ್ರೀಕರಣಕ್ಕೂ ಮೊದಲೇ ಸಾಕಷ್ಟು ಕುತೂಹಲ ಮೂಡಿಸಿದೆ.

ಒಟ್ನಲ್ಲಿ ಮತ್ತೊಂದು ಭೂಗತ ಲೋಕದ ಸಿನಿಮಾಗೆ ಸ್ಯಾಂಡಲ್​ವುಡ್ ಸಜ್ಜಾಗಿದೆ. ಈಬಾರಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಸಿನಿಮಾ ತೆರೆಗೆ ಅಪ್ಪಳಿಸಲು ಸಜ್ಜಾಗಿದ್ದು, ಸಿನಿ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ