AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಆರ್’ ಟೈಟಲ್​ನಲ್ಲಿ ತೆರೆ ಮೇಲೆ ಬರಲಿದೆ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾ..

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾವೊಂದು ತೆರೆಗೆ ಅಪ್ಪಳಿಸಲು ಸಿದ್ಧವಾಗುತ್ತಿದೆ. ಮುತ್ತಪ್ಪ ರೈ ಕುರಿತು ಚಿತ್ರವೊಂದನ್ನ ಮಾಡಲು ನಿರ್ದೇಶಕ ರವಿ ಶ್ರೀವತ್ಸ ಮುಂದಾಗಿದ್ದಾರೆ.

‘ಎಂಆರ್’ ಟೈಟಲ್​ನಲ್ಲಿ ತೆರೆ ಮೇಲೆ ಬರಲಿದೆ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾ..
ಆಯೇಷಾ ಬಾನು
|

Updated on: Nov 27, 2020 | 6:49 AM

Share

ರಾಮನಗರ: ಮಾಜಿ ಡಾನ್, ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಜೀವನಾಧಾರಿತ ಚಿತ್ರವೊಂದು ತೆರೆಮೆಲೆ ಬರೋಕೆ ಸಿದ್ಧವಾಗ್ತಿದೆ. ಒಂದಾನೊಂದು ಕಾಲದ ಭೂಗತ ಲೋಕದ ಡಾನ್ ಮುತ್ತಪ್ಪರೈ ಬೆಂಗಳೂರು, ಮಂಗಳೂರು, ಮುಂಬೈನಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಇದೀಗ ಮುತ್ತಪ್ಪ ಜೀವನಾಧಾರಿತ ಸಿನಿಮಾ ಮಾಡಲು ನಿರ್ದೇಶಕ ರವಿ ಶ್ರೀವತ್ಸ ಮುಂದಾಗಿದ್ದಾರೆ. ‘ಎಂಆರ್’ ಟೈಟಲ್​ನಲ್ಲಿ 3 ಭಾಗವಾಗಿ ಚಿತ್ರ ನಿರ್ಮಿಸಲು ರವಿ ಹೊರಟಿದ್ದಾರೆ.

ಚಿತ್ರಕ್ಕೆ ಶೋಭಾ ರಾಜಣ್ಣ ನಿರ್ಮಾಪಕರಾಗಿದ್ದು, ಪುತ್ರ ದೀಕ್ಷಿತ್ ನಾಯಕನಾಗಿ ಅಭಿನಯಿಸಲಿದ್ದಾರೆ. ಚಿತ್ರದಲ್ಲಿ ಸಾಕಷ್ಟು ಹೊಸಮುಖಗಳು ಇರಲಿವೆಯಂತೆ. ಗುರುಕಿರಣ್ ಅವರ ಮ್ಯೂಸಿಕ್, ಜೊತೆಗೆ ವಿಕ್ರಮ್​ರ ಸಾಹಸ ಚಿತ್ರಕ್ಕೆ ಇರಲಿದೆ. ಈಗಾಗಲೇ ರಾಮನಗರ ತಾಲೂಕಿನ ಶಿಲ್ದಾಂದರ್​ನಲ್ಲಿ ಚಿತ್ರದ ಫೋಟೊ ಶೂಟ್ ನಡೆಸಲಾಗಿದೆ.

ಇನ್ನು ಚಿತ್ರಕ್ಕಾಗಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಈ ಚಿತ್ರದಲ್ಲಿ ಸಾಮಾನ್ಯರಿಗೆ ತಿಳಿದಿರದ ಹಲವಾರು ಸಂಗತಿಗಳನ್ನ ತೆರೆಮೇಲೆ ತರಲು ನಿರ್ದೇಶಕ ರವಿ ಶ್ರೀವತ್ಸ ಕತೆ ಸಿದ್ಧಪಡಿಸಿದ್ದಾರೆ. ಹೀಗಾಗಿ ಚಿತ್ರ ಚಿತ್ರೀಕರಣಕ್ಕೂ ಮೊದಲೇ ಸಾಕಷ್ಟು ಕುತೂಹಲ ಮೂಡಿಸಿದೆ.

ಒಟ್ನಲ್ಲಿ ಮತ್ತೊಂದು ಭೂಗತ ಲೋಕದ ಸಿನಿಮಾಗೆ ಸ್ಯಾಂಡಲ್​ವುಡ್ ಸಜ್ಜಾಗಿದೆ. ಈಬಾರಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಸಿನಿಮಾ ತೆರೆಗೆ ಅಪ್ಪಳಿಸಲು ಸಜ್ಜಾಗಿದ್ದು, ಸಿನಿ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ