AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಆರ್’ ಟೈಟಲ್​ನಲ್ಲಿ ತೆರೆ ಮೇಲೆ ಬರಲಿದೆ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾ..

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾವೊಂದು ತೆರೆಗೆ ಅಪ್ಪಳಿಸಲು ಸಿದ್ಧವಾಗುತ್ತಿದೆ. ಮುತ್ತಪ್ಪ ರೈ ಕುರಿತು ಚಿತ್ರವೊಂದನ್ನ ಮಾಡಲು ನಿರ್ದೇಶಕ ರವಿ ಶ್ರೀವತ್ಸ ಮುಂದಾಗಿದ್ದಾರೆ.

‘ಎಂಆರ್’ ಟೈಟಲ್​ನಲ್ಲಿ ತೆರೆ ಮೇಲೆ ಬರಲಿದೆ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪರೈ ಜೀವನಾಧಾರಿತ ಸಿನಿಮಾ..
ಆಯೇಷಾ ಬಾನು
|

Updated on: Nov 27, 2020 | 6:49 AM

Share

ರಾಮನಗರ: ಮಾಜಿ ಡಾನ್, ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಜೀವನಾಧಾರಿತ ಚಿತ್ರವೊಂದು ತೆರೆಮೆಲೆ ಬರೋಕೆ ಸಿದ್ಧವಾಗ್ತಿದೆ. ಒಂದಾನೊಂದು ಕಾಲದ ಭೂಗತ ಲೋಕದ ಡಾನ್ ಮುತ್ತಪ್ಪರೈ ಬೆಂಗಳೂರು, ಮಂಗಳೂರು, ಮುಂಬೈನಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಇದೀಗ ಮುತ್ತಪ್ಪ ಜೀವನಾಧಾರಿತ ಸಿನಿಮಾ ಮಾಡಲು ನಿರ್ದೇಶಕ ರವಿ ಶ್ರೀವತ್ಸ ಮುಂದಾಗಿದ್ದಾರೆ. ‘ಎಂಆರ್’ ಟೈಟಲ್​ನಲ್ಲಿ 3 ಭಾಗವಾಗಿ ಚಿತ್ರ ನಿರ್ಮಿಸಲು ರವಿ ಹೊರಟಿದ್ದಾರೆ.

ಚಿತ್ರಕ್ಕೆ ಶೋಭಾ ರಾಜಣ್ಣ ನಿರ್ಮಾಪಕರಾಗಿದ್ದು, ಪುತ್ರ ದೀಕ್ಷಿತ್ ನಾಯಕನಾಗಿ ಅಭಿನಯಿಸಲಿದ್ದಾರೆ. ಚಿತ್ರದಲ್ಲಿ ಸಾಕಷ್ಟು ಹೊಸಮುಖಗಳು ಇರಲಿವೆಯಂತೆ. ಗುರುಕಿರಣ್ ಅವರ ಮ್ಯೂಸಿಕ್, ಜೊತೆಗೆ ವಿಕ್ರಮ್​ರ ಸಾಹಸ ಚಿತ್ರಕ್ಕೆ ಇರಲಿದೆ. ಈಗಾಗಲೇ ರಾಮನಗರ ತಾಲೂಕಿನ ಶಿಲ್ದಾಂದರ್​ನಲ್ಲಿ ಚಿತ್ರದ ಫೋಟೊ ಶೂಟ್ ನಡೆಸಲಾಗಿದೆ.

ಇನ್ನು ಚಿತ್ರಕ್ಕಾಗಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಈ ಚಿತ್ರದಲ್ಲಿ ಸಾಮಾನ್ಯರಿಗೆ ತಿಳಿದಿರದ ಹಲವಾರು ಸಂಗತಿಗಳನ್ನ ತೆರೆಮೇಲೆ ತರಲು ನಿರ್ದೇಶಕ ರವಿ ಶ್ರೀವತ್ಸ ಕತೆ ಸಿದ್ಧಪಡಿಸಿದ್ದಾರೆ. ಹೀಗಾಗಿ ಚಿತ್ರ ಚಿತ್ರೀಕರಣಕ್ಕೂ ಮೊದಲೇ ಸಾಕಷ್ಟು ಕುತೂಹಲ ಮೂಡಿಸಿದೆ.

ಒಟ್ನಲ್ಲಿ ಮತ್ತೊಂದು ಭೂಗತ ಲೋಕದ ಸಿನಿಮಾಗೆ ಸ್ಯಾಂಡಲ್​ವುಡ್ ಸಜ್ಜಾಗಿದೆ. ಈಬಾರಿ ಭೂಗತ ಲೋಕದ ದೊರೆ ಮುತ್ತಪ್ಪ ರೈ ಸಿನಿಮಾ ತೆರೆಗೆ ಅಪ್ಪಳಿಸಲು ಸಜ್ಜಾಗಿದ್ದು, ಸಿನಿ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?