AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ ಸಿದ್ಧವಾಯ್ತು ‘ಮೃತ್ಯುದೇವತೆ’ ಸಿನಿಮಾ: ಏನು ಈ ಚಿತ್ರದ ಥೀಮ್?

‘ಮೃತ್ಯುದೇವತೆ’ ಸಿನಿಮಾದ ಎಲ್ಲ ಕೆಲಸಗಳು ಪೂರ್ಣಗೊಂಡಿದ್ದು ಸೆನ್ಸಾರ್ ಪ್ರಕ್ರಿಯೆ ಬಾಕಿ ಇದೆ. ನವೀನ್ ಮಹದೇವ ಅವರು ಈ ಸಿನಿಮಾಗೆ ನಿರ್​ದೇಶನ ಮಾಡಿದ್ದಾರೆ. ಸರಸ್ವತಿ ಅವರು ಬಂಡವಾಳ ಹೂಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡು ಮತ್ತು ಟ್ರೇಲರ್ ಬಿಡುಗಡೆ ಮಾಡಲಾಯಿತು. ಬಳಿಕ ಚಿತ್ರತಂಡದವರು ಮಾತನಾಡಿದರು.

ಬಿಡುಗಡೆಗೆ ಸಿದ್ಧವಾಯ್ತು ‘ಮೃತ್ಯುದೇವತೆ’ ಸಿನಿಮಾ: ಏನು ಈ ಚಿತ್ರದ ಥೀಮ್?
Mruthyu Devathe Team
ಮದನ್​ ಕುಮಾರ್​
|

Updated on: Apr 03, 2026 | 8:20 PM

Share

ಶೀಘ್ರದಲ್ಲೇ ಬಿಡುಗಡೆ ಆಗಲಿರುವ ‘ಮೃತ್ಯದೇವತೆ’ (Mruthyu Devathe) ಸಿನಿಮಾದಲ್ಲಿ ಸಾರಿಕಾ, ವಿನಯಾ ಪ್ರಸಾದ್‍, ನವೀನ್‍ ಮಹದೇವ, ಹಿಮಶ್ರೀ, ಡಯಾನಾ, ಸೂರ್ಯ, ಪವನ್‍, ವರ್ಷಿತಾ, ಮಾಹಿನ್‍ ಕುಬೇರ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ಛಾಯಾಗ್ರಹಣ, ಶಿವಪ್ರಸಾದ್‍ ಸಂಗೀತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ‘ಮೃತ್ಯದೇವತೆ’ ಚಿತ್ರಕ್ಕೆ ನವೀನ್‍ ಮಹದೇವ ಅವರು ನಿರ್ದೇಶನ ಮಾಡಿದ್ದಾರೆ. ಅವರೇ ಕಥೆ-ಚಿತ್ರಕಥೆ ಬರೆದು ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ.

ರಘು ಅವರ ನೃತ್ಯ ನಿರ್ದೇಶನ, ಅಲ್ಟಿಮೇಟ್‍ ಶಿವು ಮತ್ತು ಚಿಟ್ಟ ಜಾಧವ್‍ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ವಿಕ್ರಮಾದಿತ್ಯ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ಸಿನಿಮಾವನ್ನು ನವೀನ್‍ ಮಹದೇವ್‍ ಅವರ ಪತ್ನಿ ಸರಸ್ವತಿ ಅವರು ‘ವರ್ಷಿತಾ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಿದ್ದಾರೆ. ಚಿತ್ರದ ಕೆಲಸಗಳು ಪೂರ್ಣವಾಗಿ ಮುಗಿದಿದೆ. ಸೆನ್ಸಾರ್ ಪ್ರಕ್ರಿಯೆ ಬಾಕಿ ಇದೆ.

‘ಮೃತ್ಯದೇವತೆ’ ಸಿನಿಮಾದ ‘ಕಾಳಿ’ ಮತ್ತು ‘ಮಹದೇವ’ ಹಾಡುಗಳ ಜೊತೆ ಟ್ರೇಲರ್ ಸಹ ಬಿಡುಗಡೆ ಆಗಿದೆ. ಕೆ. ರಮೇಶ್‍ ಅವರು ಟ್ರೇಲರ್ ಬಿಡುಗಡೆ ಮಾಡಿದರೆ, ಶ್ರೀನಿವಾಸ್‍ ಅವರು ‘ಮಹಾದೇವ’ ಹಾಡನ್ನು ರಿಲೀಸ್ ಮಾಡಿದರು. ಹಿರಿಯ ನಟಿ ವಿನಯಾ ಪ್ರಸಾದ್‍ ಅವರು ‘ಕಾಳಿ’ ಹಾಡಿನ ಮೇಕಿಂಗ್‍ ವೀಡಿಯೋ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ವೇಳೆ ನಿರ್ದೇಶಕ ನವೀನ್‍ ಮಹಾದೇವ್‍ ಅವರು ಮಾತನಾಡಿದರು. ‘ಹೆಣ್ಮಕ್ಕಳು ಬುದ್ಧಿವಂತರಾದರೂ, ಓದಿಕೊಂಡಿದ್ದರೂ ಕೆಲವೊಮ್ಮೆ ಗೊತ್ತಿಲ್ಲದೆ ಯಾವುದೋ ಬಲೆಗೆ ಬೀಳುತ್ತಾರೆ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇನೆ. ತೊಂದರೆ ಅತಿರೇಕಕ್ಕೆ ಹೋದಾಗ ಹುಡುಗಿ ಮೃತ್ಯದೇವತೆ ಅವತಾರ ತಾಳುತ್ತಾಳೆ. ಅದೇ ಈ ಚಿತ್ರದ ಕಥಾವಸ್ತು. ಡಾ. ರಾಜ್​ಕುಮಾರ್‍ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡುವ ಯೋಚನೆ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ:

ನಟಿ ಸಾರಿಕಾ ಅವರು ಈ ಚಿತ್ರದಲ್ಲಿ ಆರತಿ ಎಂಬ ಪಾತ್ರ ಮಾಡಿದ್ದಾರೆ. ಮೊದಲ ಬಾರಿಗೆ ಫೈಟಿಂಗ್‍ ಮಾಡಿರುವ ಖುಷಿ ಅವರಿಗೆ ಇದೆ. ವಿನಯಾ ಪ್ರಸಾದ್‍ ಜೊತೆ ಕೆಲಸ ಮಾಡಿ ಬಹಳಷ್ಟು ಕಲಿತಿರುವುದಾಗಿ ಅವರು ಹೇಳಿದ್ದಾರೆ. ಚಿತ್ರತಂಡದ ಶ್ರಮ ಮತ್ತು ಒಗ್ಗಟ್ಟನ್ನು ವಿನಯಾ ಪ್ರಸಾದ್ ಅವರು ಹೊಗಳಿದರು. ಈ ಸಿನಿಮಾದಲ್ಲಿ ನಟಿ ಹಿಮಶ್ರೀ ಅವರು ಮೇಕಪ್ ಇಲ್ಲದೇ ಅಭಿನಯಿಸಿದ್ದಾರೆ. ಹಳ್ಳಿ ಹುಡುಗಿಯ ಪಾತ್ರವನ್ನು ಅವರು ನಿಭಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ