AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಅಕ್ಷರ್​ಗೆ ‘ಛೀ ಕಳ್ಳ..’ ಎಂದ ‘ಏಕ್​ ಲವ್​ ಯಾ’ ಬೆಡಗಿ ರೀಷ್ಮಾ ನಾಣಯ್ಯ

ಎಂ.ಎಸ್​. ಅಕ್ಷರ್​ ಮತ್ತು ರೀಷ್ಮಾ ನಾಣಯ್ಯ ಅವರು ‘ಛೀ ಕಳ್ಳ’ ಹಾಡಿನಲ್ಲಿ ಜೊತೆಯಾಗಿ ನಟಿಸಿದ್ದಾರೆ. ಈ ಹಾಡಿಗೆ ಖ್ಯಾತ ಗಾಯಕ ನವೀನ್​ ಸಜ್ಜು ಧ್ವನಿ ನೀಡಿದ್ದಾರೆ.

ನಟ ಅಕ್ಷರ್​ಗೆ ‘ಛೀ ಕಳ್ಳ..’ ಎಂದ ‘ಏಕ್​ ಲವ್​ ಯಾ’ ಬೆಡಗಿ ರೀಷ್ಮಾ ನಾಣಯ್ಯ
ರೀಷ್ಮಾ ನಾಣಯ್ಯ, ಎಂ.ಎಸ್. ಅಕ್ಷರ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 10, 2022 | 7:00 AM

ನಟಿ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೂ, ಹಿಟ್​ ಹಾಡುಗಳಿಗೂ ಏನೋ ಒಂಥರ ನಂಟು. ಅವರು ಅಭಿನಯಿಸಿದ ‘ಏಕ್​ ಲವ್​ ಯಾ’ ಚಿತ್ರದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು. ಈಗ ಅವರು ಒಂದು ಮ್ಯೂಸಿಕ್​ ವಿಡಿಯೋ (ಆಲ್ಬಂ ಸಾಂಗ್​) ಮೂಲಕ ಮತ್ತೆ ಮೋಡಿ ಮಾಡುತ್ತಿದ್ದಾರೆ. ಅವರ ಜೊತೆ ಖ್ಯಾತ ನಿರ್ಮಾಪಕ ಬೆಂ.ಕೋ.ಶ್ರೀ. ಪುತ್ರ ಎಂ.ಎಸ್​. ಅಕ್ಷರ್​ (MS Akshar) ಅವರು ನಟಿಸಿದ್ದಾರೆ. ‘ಛೀ ಕಳ್ಳ’ ಎಂಬ ಈ ಹಾಡನ್ನು ವಿಶೇಷ ಕಾನ್ಸೆಪ್ಟ್​ನೊಂದಿಗೆ ಚಿತ್ರಿಸಲಾಗಿದೆ. ಇತ್ತೀಚೆಗೆ ಅದ್ದೂರಿಯಾಗಿ ಈ ಗೀತೆಯನ್ನು ರಿಲೀಸ್​ ಮಾಡಲಾಯಿತು. ‘ಲೂಸಿಯಾ’ ಸಿನಿಮಾ ಖ್ಯಾತಿಯ ಗಾಯಕ ನವೀನ್ ಸಜ್ಜು ಅವರ ಧ್ವನಿಯಲ್ಲಿ ‘ಛೀ ಕಳ್ಳ’ ಹಾಡು (Chi Kalla Song) ಮೂಡಿಬಂದಿದೆ. ಎ2 ಮ್ಯೂಸಿಕ್​ ಸಂಸ್ಥೆ ಮೂಲಕ ಸಾಂಗ್​ ರಿಲೀಸ್​ ಮಾಡಲಾಗಿದೆ.

ಹಳ್ಳಿ ಪರಿಸರದಲ್ಲಿ ‘ಛೀ ಕಳ್ಳ’ ಹಾಡನ್ನು ಚಿತ್ರೀಕರಿಸಲಾಗಿದೆ. ಇದಕ್ಕೆ ಪುನರ್ವ್ ಆಕರ್ಷ್ ನಿರ್ದೇಶನವಿದೆ. ವಿಸ್ಮಯ ಜಗ ಸಾಹಿತ್ಯ ಬರೆದಿದ್ದು, ಅವರೇ ರಾಗ ಸಂಯೋಜನೆ ಕೂಡ ಮಾಡಿದ್ದಾರೆ. ನಿರ್ಮಾಪಕ ಬೆಂ.ಕೋ.ಶ್ರೀ ಅವರು ಇಡೀ ತಂಡಕ್ಕೆ ವಿಶ್​ ಮಾಡಿದ್ದಾರೆ.

(ಛೀ ಕಳ್ಳ ಸಾಂಗ್ ಬಿಡುಗಡೆ ಸಮಾರಂಭ)

ಏಳು ಚಿತ್ರಗಳನ್ನು ನಿರ್ಮಿಸಿದ ಅನುಭವ ಬೆಂ.ಕೋ.ಶ್ರೀ. ಅವರಿಗೆ ಇದೆ. ಈಗ ಅವರು ಮಗನ ವೃತ್ತಿ ಜೀವನಕ್ಕಾಗಿ ಎಲ್ಲರ ಪ್ರೋತ್ಸಾಹ ಬಯಸುತ್ತಿದ್ದಾರೆ. ಸಿನಿಮಾದಲ್ಲಿ ನಟಿಸಬೇಕು ಎಂಬ ಹಂಬಲ ಎಂ.ಎಸ್​. ಅಕ್ಷರ್​ ಅವರಲ್ಲಿದೆ. ಅದರ ಪೂರ್ವಭಾವಿಯಾಗಿ ಅವರು ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಒಂದೊಳ್ಳೆಯ ತಂಡದ ಜೊತೆ ಕೆಲಸ ಮಾಡಿದ ಖುಷಿ ಅವರಿಗೆ ಇದೆ.

ಇದನ್ನೂ ಓದಿ
Image
ಸೀರಿಯಲ್​, ಸಿನಿಮಾ ಬಳಿಕ ಶ್ರೀಮಹದೇವ್ ಇನ್ನೊಂದು ಪ್ರಯತ್ನ; ಹೊಸಬರ ಜತೆ ‘Saturday ನೈಟಲಿ’​ ಸಾಂಗ್​
Image
ಚಂದನ್​ ಶೆಟ್ಟಿ ಹೊಸ ಸಾಂಗ್​ ‘ಲಕ ಲಕ ಲ್ಯಾಂಬೋರ್ಗಿನಿ’ ಹೇಗಿದೆ? ಒಂದೇ ದಿನಕ್ಕೆ ಮಿಲಿಯನ್​ ವೀಕ್ಷಣೆ
Image
ವಿಜಯ್​ ಪ್ರಕಾಶ್ ಕಂಠದಲ್ಲಿ ಮೂಡಿಬಂತು ‘ಆರಾಮ್ಸೆ’ ಮ್ಯೂಸಿಕ್​ ವಿಡಿಯೋ; ಏನಿದರ ವಿಶೇಷ?
Image
Ananya Bhat: ‘ಪ್ರೀತಿ ಎಂದರೇನು’ ಮ್ಯೂಸಿಕ್​ ವಿಡಿಯೋ ಮೂಲಕ ಗಮನ ಸೆಳೆದ ಅನನ್ಯಾ ಭಟ್​, ಹೃದಯ ಶಿವ

‘ರೀಷ್ಮಾ ನಾಣಯ್ಯ ಅವರ ಅಭಿನಯ ಈ ಹಾಡನ್ನು ಮತ್ತಷ್ಟು ಸುಂದರವಾಗಿಸಿದೆ. ವಿಸ್ಮಯ ಜಗ ಅವರು ಒಳ್ಳೆಯ ಸಂಗೀತ, ಸಾಹಿತ್ಯ ನೀಡಿದ್ದಾರೆ. ಅದನ್ನು ಅಷ್ಟೇ ಚೆನ್ನಾಗಿ ಚಿತ್ರಿಸಿದ್ದಾರೆ ನಿರ್ದೇಶಕ ಪುನರ್ವ್ ಆಕರ್ಷ್​’ ಎಂದು ಹೇಳಿರುವ ಅಕ್ಷರ್​ ಅವರು ತಮ್ಮ ಇಡೀ ತಂಡದವರಿಗೆ ಧನ್ಯವಾದ ಅರ್ಪಿಸಿದ್ದಾರೆ. ನವೀನ್ ಕುಮಾರ್ ಹಾಗೂ ಎ.ಜೆ. ಶೆಟ್ಟಿ ಛಾಯಾಗ್ರಹಣ, ನಾಗೇಂದ್ರ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದೆ.

ನಟಿ ರೀಷ್ಮಾ ನಾಣಯ್ಯ ಅವರ ಪಾಲಿಗೆ ಇದು ಮೊದಲ ಮ್ಯೂಸಿಕ್​ ವಿಡಿಯೋ. ಯೂಟ್ಯೂಬ್​ನಲ್ಲಿ ಈ ಹಾಡು ಜನಮನ ಗೆಲ್ಲುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ