AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುನಿರೀಕ್ಷಿತ 3 ಕನ್ನಡ ಸಿನಿಮಾಗಳು ರಿಲೀಸ್​; ಈ ಚಿತ್ರಗಳ ವಿಶೇಷತೆ ಏನು?

ರಮೇಶ್​ ಅರವಿಂದ್​ ನಟನೆಯ ‘100’, ಮನುರಂಜನ್​ ರವಿಚಂದ್ರನ್​ ಅಭಿನಯದ ‘ಮುಗಿಲ್​ ಪೇಟೆ’ ಹಾಗೂ ರಾಜ್​ ಬಿ. ಶೆಟ್ಟಿ ನಟನೆಯ ‘ಗರುಡ ಗಮನ ವೃಷಭ ವಾಹನ’ ಚಿತ್ರಗಳು ಇಂದು (ನ.19) ಪ್ರೇಕ್ಷಕರ ಎದುರು ಬರುತ್ತಿವೆ. ಸಿನಿಪ್ರಿಯರ ಮನದಲ್ಲಿ ನಿರೀಕ್ಷೆ ಹುಟ್ಟುಹಾಕಿವೆ.

ಬಹುನಿರೀಕ್ಷಿತ 3 ಕನ್ನಡ ಸಿನಿಮಾಗಳು ರಿಲೀಸ್​; ಈ ಚಿತ್ರಗಳ ವಿಶೇಷತೆ ಏನು?
ಮುಗಿಲ್​ ಪೇಟೆ, 100, ಗರುಡ ಗಮನ ವೃಷಭ ವಾಹನ
TV9 Web
| Edited By: |

Updated on: Nov 19, 2021 | 7:54 AM

Share

ಎರಡನೇ ಲಾಕ್​ಡೌನ್​ನಿಂದ ಮಂಕಾಗಿದ್ದ ಸಿನಿಮಾ ಕ್ಷೇತ್ರಕ್ಕೆ ಈಗ ಹಳೇ ಚಾರ್ಮ್​ ಸಿಕ್ಕಿದೆ. ಕನ್ನಡ ಚಿತ್ರರಂಗದ ಬ್ಯುಸಿನೆಸ್​ ನಿಧಾನಕ್ಕೆ ಚೇತರಿಸಿಕೊಂಡಿದೆ. ಈಗಾಗಲೇ ‘ಸಲಗ’, ‘ಕೋಟಿಗೊಬ್ಬ 3’, ‘ಭಜರಂಗಿ 2’ ಮುಂತಾದ ಸಿನಿಮಾಗಳು ತೆರೆಕಂಡು ಸ್ಯಾಂಡಲ್​ವುಡ್​ ವಹಿವಾಟಿಗೆ ಮರುಜೀವ ನೀಡಿವೆ. ಹೀಗೆ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರೋದ್ಯಮಿಗಳಿಗೆ ಮತ್ತು ಪ್ರೇಕ್ಷಕರಿಗೆ ಖುಷಿ ನೀಡಿದೆ. ಈ ವಾರ ಕನ್ನಡದ ಬಹುನಿರೀಕ್ಷಿತ ಮೂರು ಸಿನಿಮಾಗಳು ರಿಲೀಸ್​ ಆಗುತ್ತಿವೆ. ರಮೇಶ್​ ಅರವಿಂದ್​ ನಟನೆಯ ‘100’, ಮನುರಂಜನ್​ ರವಿಚಂದ್ರನ್​ ಅಭಿನಯದ ‘ಮುಗಿಲ್​ ಪೇಟೆ’ ಹಾಗೂ ರಾಜ್​ ಬಿ. ಶೆಟ್ಟಿ ನಟನೆಯ ‘ಗರುಡ ಗಮನ ವೃಷಭ ವಾಹನ’ ಚಿತ್ರ ಇಂದು (ನ.19) ಪ್ರೇಕ್ಷಕರ ಎದುರು ಬರುತ್ತಿದೆ. ಬೇರೆ ಬೇರೆ ಕಾರಣಗಳಿಗಾಗಿ ಈ ಮೂರು ಸಿನಿಮಾಗಳು ಸಿನಿಪ್ರಿಯರ ಮನದಲ್ಲಿ ನಿರೀಕ್ಷೆ ಹುಟ್ಟುಹಾಕಿವೆ. ಹಾಗಾದ್ರೆ ಈ ಸಿನಿಮಾಗಳ ವಿಶೇಷತೆ ಏನು? ಇಲ್ಲಿದೆ ವಿವರ..

ಸೈಬರ್​ ಕ್ರೈಂ ಕಥೆಯುಳ್ಳ ‘100’:

‘100’ ಚಿತ್ರಕ್ಕೆ ರಮೇಶ್​ ಅರವಿಂದ್​ ನಿರ್ದೇಶನ ಮಾಡಿದ್ದಾರೆ. ಜೊತೆಗೆ ಅವರು ಹೀರೋ ಆಗಿಯೂ ನಟಿಸಿದ್ದಾರೆ. ಪೂರ್ಣಾ, ರಚಿತಾ ರಾಮ್​, ವಿಶ್ವ ಕರ್ಣ, ಪ್ರಕಾಶ್​ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಸೋಶಿಯಲ್​ ಮೀಡಿಯಾದ ಬಲೆಗೆ ಬಿದ್ದರೆ ಎಷ್ಟೆಲ್ಲ ಅಪಾಯ ಇದೆ ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ. ಈಗಾಗಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡ ಅಧಿಕಾರಿಗಳ ಜೊತೆ ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

‘ಗರುಡ ಗಮನ ವೃಷಭ ವಾಹನ’:

ಕನ್ನಡ ಚಿತ್ರರಂಗದ ಭರವಸೆಯ ನಿರ್ದೇಶಕ ರಾಜ್​ ಬಿ. ಶೆಟ್ಟಿ ಅವರು ‘ಗರುಡ ಗಮನ ವೃಷಭ ವಾಹನ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆಯಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ಅವರಿಗೆ ರಿಷಬ್​ ಶೆಟ್ಟಿ ಸಾಥ್​ ನೀಡಿದ್ದಾರೆ. ಮಿಥುನ್​ ಮುಕುಂದನ್​ ಸಂಗೀತ ನೀಡಿದ್ದಾರೆ. ‘ಒಂದು ಮೊಟ್ಟೆಯ ಕಥೆ’ ಚಿತ್ರದ ಬಳಿಕ ‘ಗರುಡ ಗಮನ ವೃಷಭ ವಾಹನ’ ಸಿನಿಮಾಗೆ ರಾಜ್​ ಬಿ. ಶೆಟ್ಟಿ ನಿರ್ದೇಶನ ಮಾಡಿರುವುದರಿಂದ ಜನರಲ್ಲಿ ನಿರೀಕ್ಷೆ ಹೆಚ್ಚಿದೆ.

ರವಿಚಂದ್ರನ್​ ಪುತ್ರನ ‘ಮುಗಿಲ್​ ಪೇಟೆ’:

ಮನುರಂಜನ್​ ರವಿಚಂದ್ರನ್​ ನಟನೆಯ ‘ಮುಗಿಲ್​ ಪೇಟೆ’ ಸಿನಿಮಾ ಈಗಾಗಲೇ ಟ್ರೇಲರ್​ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿದೆ. ಭರತ್​ ನಾವುಂದ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ತಾರಾ ಅನುರಾಧಾ ಮುಂತಾದ ಅನುಭವಿ ಕಲಾವಿದರ ಜೊತೆಗೆ ಮನುರಂಜನ್​ ತೆರೆಹಂಚಿಕೊಂಡಿದ್ದಾರೆ. ಹಲವು ಗೆಟಪ್​ಗಳಲ್ಲಿ ಸಾಧುಕೋಕಿಲ ಕಾಣಿಸಿಕೊಂಡಿದ್ದಾರೆ. ಮನುರಂಜನ್​ ಅವರಿಗೆ ಜೋಡಿಯಾಗಿ ಖಯಾದು ಲೋಹರ್​ ನಟಿಸಿದ್ದಾರೆ.

ಇದನ್ನೂ ಓದಿ:

ಅಧಿಕಾರಿಗಳ ಜತೆ ‘100’ ಸಿನಿಮಾ ನೋಡಿದ ಗೃಹ ಸಚಿವ ಆರಗ ಜ್ಞಾನೇಂದ್ರ; ಈ ಚಿತ್ರದಲ್ಲಿ ಏನಿದೆ ವಿಶೇಷ?

ರವಿಚಂದ್ರನ್​ ಪುತ್ರರ ಬಗ್ಗೆ ಕಾಕ್ರೋಚ್​ ಸುಧಿ ವಿಶೇಷ ಮಾತು; ‘ಕನಸುಗಾರ’ ನೆನಪಿಸಿದ ಮನು-ವಿಕ್ರಮ್​

Follow Us
Web contact
Web contact

TV9 Kannada

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್