AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ ತಿಂಗಳು ಪೂರ್ತಿ ಕನ್ನಡ ಸಿನಿಮಾಗಳ ಉತ್ಸವ; ರಿಲೀಸ್​ ಆಗುತ್ತಿವೆ ಮಸ್ತ್​ ಚಿತ್ರಗಳು

ನವೆಂಬರ್​ ತಿಂಗಳಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಮುಗಿಲ್​ ಪೇಟೆ, 100, ಸಖತ್​, ಗರುಡ ಗಮನ ವೃಷಭ ವಾಹನ ಮುಂತಾದ ಚಿತ್ರಗಳು ನಿರೀಕ್ಷೆ ಮೂಡಿಸಿವೆ.

ನವೆಂಬರ್​ ತಿಂಗಳು ಪೂರ್ತಿ ಕನ್ನಡ ಸಿನಿಮಾಗಳ ಉತ್ಸವ; ರಿಲೀಸ್​ ಆಗುತ್ತಿವೆ ಮಸ್ತ್​ ಚಿತ್ರಗಳು
ನವೆಂಬರ್​ ತಿಂಗಳಲ್ಲಿ ರಿಲೀಸ್​ ಆಗಲಿವೆ ಬಹುನಿರೀಕ್ಷಿತ ಸಿನಿಮಾಗಳು
TV9 Web
| Edited By: |

Updated on: Nov 06, 2021 | 4:03 PM

Share

ಕೊರೊನಾ ಎರಡಲೇ ಅಲೆ ಕಾರಣದಿಂದ ಚಿತ್ರರಂಗಕ್ಕೆ ಮಂಕು ಕವಿದಿತ್ತು. ಅನೇಕ ಸಿನಿಮಾಗಳ ಕೆಲಸಗಳು ನಿಂತಲ್ಲೇ ನಿಂತಿದ್ದವು. ಹಲವು ಸ್ಟಾರ್​ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಆದರೆ ಈಗ ವಾತಾವರಣ ತಿಳಿ ಆಗಿದೆ. ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಹಳೇ ಚಾರ್ಮ್​ ಮರಳುತ್ತಿದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಅದರಲ್ಲೂ ನವೆಂಬರ್​ ತಿಂಗಳಲ್ಲಿ ಕನ್ನಡ ಸಿನಿಪ್ರಿಯರಿಗೆ ವಿಶೇಷ ಸಿನಿಮಾಗಳು ಸಿಗುತ್ತಿವೆ. ಯಾವ ಚಿತ್ರಕ್ಕೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಲಿದ್ದಾರೆ? ಬಾಕ್ಸ್​ ಆಫೀಸ್​ನಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ. ನವೆಂಬರ್​ನಲ್ಲಿ ಬಿಡುಗಡೆ ಆಗಲಿರುವ ಪ್ರಮುಖ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ..

ನಟ ‘ನೆನಪಿರಲಿ ಪ್ರೇಮ್​’ ಅಭಿನಯದ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ನ.12ರಂದು ತೆರೆ ಕಾಣುತ್ತಿದೆ. ರಿಷಬ್​ ಶೆಟ್ಟಿ, ರಾಜ್​ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ನ.19ರಂದು ಬಿಡುಗಡೆ ಆಗುತ್ತಿದೆ. ‘ಒಂದು ಮೊಟ್ಟೆಯ ಕಥೆ’ ಬಳಿಕ ರಾಜ್​ ಬಿ. ಶೆಟ್ಟಿ ನಿರ್ದೇಶನದ ಸಿನಿಮಾ ಇದಾಗಿರುವುದರಿಂದ ನಿರೀಕ್ಷೆ ಮೂಡಿದೆ.

ರವಿಚಂದ್ರನ್​ ಪುತ್ರ ಮನುರಂಜನ್​ ರವಿಚಂದ್ರನ್​ ನಟನೆಯ ‘ಮುಗಿಲ್​ಪೇಟ್​’ ಸಿನಿಮಾ ಕೂಡ ನ.19ರಂದು ರಿಲೀಸ್​ ಆಗುತ್ತಿದೆ. ಈ ಚಿತ್ರಕ್ಕೆ ಭರತ್​ ನಾವುಂದ ನಿರ್ದೇಶನ ಮಾಡಿದ್ದಾರೆ. ಸಾಧುಕೋಕಿಲ, ತಾರಾ, ರಂಗಾಯಣ ರಘು ಮುಂತಾದ ಅನುಭವಿ ಕಲಾವಿದರು ಬಣ್ಣ ಹಚ್ಚಿದ್ದಾರೆ.

ರಮೇಶ್​ ಅರವಿಂದ್​ ನಿರ್ದೇಶನ ಮತ್ತು ನಟನೆಯ ‘100’ ಚಿತ್ರ ಬಹಳ ನಿರೀಕ್ಷೆ ಮೂಡಿಸಿದೆ. ಸೈಬರ್​ ಕ್ರೈಂ ಹಿನ್ನೆಲೆಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ರಮೇಶ್​ ಅರವಿಂದ್​ ನಟಿಸಿದ್ದಾರೆ. ನ.19ರಂದು ‘100’ ಚಿತ್ರ ಬಿಡುಗಡೆ ಆಗುತ್ತಿದೆ.

ನಿರ್ದೇಶಕ ಸಿಂಪಲ್​ ಸುನಿ ಮತ್ತು ‘ಗೋಲ್ಡನ್​ ಸ್ಟಾರ್’ ಗಣೇಶ್​ ಕಾಂಬಿನೇಷನ್​ನ ‘ಸಖತ್​’ ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ನ.26ರಂದು ಈ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಟೀಸರ್​ ಮೂಲಕ ಈ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಬಿಡುಗಡೆ ಆಗಿರುವ ‘ಭಜರಂಗಿ 2, ‘ಸಲಗ’, ‘ಕೋಟಿಗೊಬ್ಬ 3’ ಚಿತ್ರಗಳು ಕೂಡ ಹಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿವೆ.

ಇದನ್ನೂ ಓದಿ:

ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

ಪುನೀತ್​ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?