Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಲ್ಕಾ ಕೆಲಸ ಬಿಡೋಕಾಗಲ್ಲ, ಸೆಲೆಬ್ರಿಟಿ ಆದಮೇಲೆ ಬಿಡದಿದ್ರೆ ಮನುಷ್ಯರಲ್ಲ’: ಮುಖ್ಯಮಂತ್ರಿ ಚಂದ್ರು ಹೀಗೆ ಹೇಳಿದ್ದೇಕೆ?

ಮುಖ್ಯಮಂತ್ರಿ ಚಂದ್ರು ಅವರು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಇದರ ಜೊತೆಗೆ ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್​ ಆಗಿದ್ದಾರೆ. ಅವರು ಇತ್ತೀಚೆಗೆ ‘ಕಲಾ ಮಾಧ್ಯಮಕ್ಕೆ ಸಂದರ್ಶನ’ ನೀಡಿದ್ದಾರೆ. ಈ ವೇಳೆ ತಮ್ಮ ಜೀವನದ ಅನುಭವವನ್ನು ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಹೇಗೆ ಇರಬೇಕು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

‘ಹಲ್ಕಾ ಕೆಲಸ ಬಿಡೋಕಾಗಲ್ಲ, ಸೆಲೆಬ್ರಿಟಿ ಆದಮೇಲೆ ಬಿಡದಿದ್ರೆ ಮನುಷ್ಯರಲ್ಲ’: ಮುಖ್ಯಮಂತ್ರಿ ಚಂದ್ರು ಹೀಗೆ ಹೇಳಿದ್ದೇಕೆ?
ಮುಖ್ಯಮಂತ್ರಿ ಚಂದ್ರು
Follow us
ರಾಜೇಶ್ ದುಗ್ಗುಮನೆ
|

Updated on:Jul 05, 2024 | 11:37 AM

ಮುಖ್ಯಮಂತ್ರಿ ಚಂದ್ರು ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ಚಂದ್ರಶೇಖರ್ ಅನ್ನೋದು ಅವರ ಹೆಸರು. ‘ಮುಖ್ಯಮಂತ್ರಿ’ ನಾಟಕ ಮಾಡಿ ಮುಖ್ಯಮಂತ್ರಿ ಚಂದ್ರು ಎಂದೇ ಫೇಮಸ್ ಆದರು. ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಶಾಸಕನಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಇತ್ತೀಚೆಗೆ ‘ಕಲಾ ಮಾಧ್ಯಮಕ್ಕೆ ಸಂದರ್ಶನ’ ನೀಡಿದ್ದಾರೆ. ಈ ವೇಳೆ ತಮ್ಮ ಜೀವನದ ಅನುಭವವನ್ನು ಹಂಚಿಕೊಂಡಿದ್ದಾರೆ.

ಹಲವು ಸೆಲೆಬ್ರಿಟಿಗಳು ವಿವಾದದಲ್ಲಿ ಸಿಕ್ಕಿಕೊಳ್ಳುತ್ತಿದ್ದಾರೆ. ಮಾದರಿಯಾಗಿರಬೇಕಾದ ಹೀರೋಗಳು ಜೈಲು ಸೇರುತ್ತಿದ್ದಾರೆ. ಸೆಲೆಬ್ರಿಟಿ ಪಟ್ಟ ಸಿಕ್ಕಮೇಲೆ ಅವನು ತೋರಿಕೆಗಾದರೂ ಸಭ್ಯನಾಗಿರಬೇಕು ಎಂಬುದು ಮುಖ್ಯಮಂತ್ರಿ ಚಂದ್ರು ಅವರ ಅಭಿಪ್ರಾಯ. ಈ ಬಗ್ಗೆ ಅವರು ಹಳೆಯ ಘಟನೆ ಒಂದನ್ನು ಉದಾಹರಣೆ ಕೊಟ್ಟು ಹೇಳಿದ್ದಾರೆ.

‘ಮುಖ್ಯಮಂತ್ರಿ’ ನಾಟಕವನ್ನು ಲೋಹಿತಾಶ್ವ ಅವರು ಮಾಡಬೇಕಿತ್ತು. ಈ ನಾಟಕದ ಬಗ್ಗೆ ಚರ್ಚೆ ಮಾಡಲು ಹೋಟೆಲ್ ಒಂದರಲ್ಲಿ ಲೋಹಿತಾಶ್ವ ಹಾಗೂ ಚಂದ್ರು ಹೋಟೆಲ್ ಮಾಡಿಕೊಂಡಿದ್ದರು. ಈ ವೇಳೆ ರಮ್ ಕುಡಿಯುತ್ತಿದ್ದರಂತೆ. ಈ ವಿಚಾರವನ್ನು ಚಂದ್ರು ಹೇಳಿಕೊಂಡರು. ‘ರಮ್ ಕುಡಿಯೋದ್ರಲ್ಲಿ ಏನಿದೆ? ಇದೆಲ್ಲ ಓಪನ್ ಆಗಿ ಹೇಳಿಕೊಳ್ಳುತ್ತೇನೆ. ಆದರೆ, ಇದನ್ನು ಓಪನ್ ಆಗಿ ಎಲ್ಲಿಯೂ ಹೇಳಿಕೊಳ್ಳಬೇಡಿ ಎಂದು ನಾನು ನಾಯಕರಿಗೆ ಹೇಳುತ್ತಿರುತ್ತೇನೆ’ ಎಂದಿದ್ದಾರೆ ಚಂದ್ರು. ಆ ಬಳಿಕ ಅವರು ಸೆಲೆಬ್ರಿಟಿಗಳು ಪಾಲಿಸಬೇಕಾದ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಾಗಮಂಗಲದಲ್ಲಿ ದರ್ಶನ್ ಮತ್ತು ಮುಖ್ಯಮಂತ್ರಿ ಚಂದ್ರುರಿಂದ ಸ್ಟಾರ್ ಚಂದ್ರು ಪರ ರೋಡ್ ಶೋ!

‘ಹಲ್ಕಾ ಕೆಲಸ ಬಿಡೋಕೆ ಆಗಲ್ಲ. ಸೆಲೆಬ್ರಿಟಿ ಆದಮೇಲೆ ಅದನ್ನು ಬಿಡದೆ ಇದ್ರೆ ಮನುಷ್ಯರಲ್ಲ. ಬಿಡದೇ ಇದ್ದರೆ ಎಂದರೆ ಸಾರ್ವಜನಿಕ ಮಾಡದನ್ನು ಬಿಡದೇ ಇದ್ದರೆ ಅವನು ಮಾದರಿ ಆಗಲ್ಲ. ಈಗ ಎಲ್ಲವನ್ನೂ ಓಪನ್ ಆಗಿ ತೋರ್ಸಿ ಗಬ್ಬೆದ್ದು ಹೋಗುತ್ತಿದ್ದಾರೆ. ಮನುಷ್ಯನ ಚಟ ಏನು ಮಾಡೋಕಾಗಲ್ಲ. ಇದು ವೀಕ್​ನೆಸ್. ಇತಿ-ಮಿತಿಯಲ್ಲಿ ಇರಬೇಕು’ ಎಂದಿದ್ದಾರೆ ಚಂದ್ರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:35 am, Fri, 5 July 24

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್