AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಚಂದ್ರುಗೆ ಕಾರನ್ನು ಉಡುಗೊರೆ ನೀಡಿದ್ದ ರವಿಚಂದ್ರನ್ ತಂದೆ ವೀರಸ್ವಾಮಿ

ಮುಖ್ಯಮಂತ್ರಿ ಚಂದ್ರು ಅವರು ಸೂಪರ್​ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ವಿಲನ್ ಮಾಡಿ ಹೆಚ್ಚು ಗಮನ ಸೆಳೆದಿದ್ದಾರೆ. 1983ರಲ್ಲಿ ಅವರು ‘ಚಕ್ರವ್ಯೂಹ’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಅಂಬರೀಷ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ನಟಿಸಿದ್ದರು. ಈ ಸಿನಿಮಾ ಹಿಟ್ ಆದ ಬಳಿಕ ವೀರಸ್ವಾಮಿ ಅವರು ಮುಖ್ಯಮಂತ್ರಿ ಚಂದ್ರುಗೆ ದೊಡ್ಡ ಗಿಫ್ಟ್ ಕೊಟ್ಟಿದ್ದರು.

ಮುಖ್ಯಮಂತ್ರಿ ಚಂದ್ರುಗೆ ಕಾರನ್ನು ಉಡುಗೊರೆ ನೀಡಿದ್ದ ರವಿಚಂದ್ರನ್ ತಂದೆ ವೀರಸ್ವಾಮಿ
ಮುಖ್ಯಮಂತ್ರಿ ಚಂದ್ರುಗೆ ಕಾರನ್ನು ಉಡುಗೊರೆ ನೀಡಿದ್ದ ರವಿಚಂದ್ರನ್ ತಂದೆ ವೀರಸ್ವಾಮಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 28, 2024 | 7:42 AM

Share

ಮುಖ್ಯಮಂತ್ರಿ ಚಂದ್ರು ಅವರು ಕಾಲೇಜ್​ನಲ್ಲಿ ಕ್ಲರ್ಕ್​ ಆಗಿ ಕೆಲಸಕ್ಕೆ ಸೇರಿದವರು. ಆ ಬಳಿಕ ಅವರ ಆಸಕ್ತಿ ನಟನೆಯತ್ತ ಮೂಡಿತು. ಎಲ್ಲರ ಬೆಂಬಲದಿಂದ ಅವರು ಚಿತ್ರರಂಗದಲ್ಲಿ ಮುಂದುವರಿದರು. ಅವರು ಮಾಡಿದ ‘ಮುಖ್ಯಮಂತ್ರಿ’ ನಾಟಕದಿಂದ ಮುಖ್ಯಮಂತ್ರಿ ಚಂದ್ರು ಎಂದೇ ಫೇಮಸ್ ಆದರು. ಈಗ ಅವರು ಕಿರುತೆರೆಯಲ್ಲಿ ತೊಡಗಿಕೊಂಡಿದ್ದಾರೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರು ಅವರು ‘ಕಲಾಮಾಧ್ಯಮ’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರವಿಚಂದ್ರನ್ ತಂದೆಯ ಬಗ್ಗೆಯೂ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.

ರವಿಚಂದ್ರನ್ ತಂದೆಯ ಹೆಸರು ಎನ್​. ವೀರಸ್ವಾಮಿ. ಅವರು ಖ್ಯಾತ ನಿರ್ಮಾಪಕರು, ನಿರ್ದೇಶಕರು ಕೂಡ ಹೌದು. ಅವರು ಹಲವು ಸೂಪರ್​ ಹಿಟ್ ಚಿತ್ರಗಳನ್ನು ನೀಡಿದ್ದಾರೆ. 1983ರಲ್ಲಿ ಅವರು ‘ಚಕ್ರವ್ಯೂಹ’ ಸಿನಿಮಾ ನಿರ್ಮಾಣ ಮಾಡಿದ್ದರು. ಈ ಚಿತ್ರದಲ್ಲಿ ಅಂಬರೀಷ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ನಟಿಸಿದ್ದರು. ಈ ಸಿನಿಮಾ ಹಿಟ್ ಆದ ಬಳಿಕ ವೀರಸ್ವಾಮಿ ಅವರು ಮುಖ್ಯಮಂತ್ರಿ ಚಂದ್ರುಗೆ ದೊಡ್ಡ ಗಿಫ್ಟ್ ಕೊಟ್ಟಿದ್ದರು.

‘ಚಕ್ರವ್ಯೂಹ ಚಿತ್ರದಲ್ಲಿ ಅಂಬರೀಷ್, ಅಂಬಿಕಾ, ತೂಗುದೀಪ ಶ್ರೀನಿವಾಸ್ ಎಲ್ಲಾ ನಟಿಸುತ್ತಿದ್ದರು. ವೀರಸ್ವಾಮಿ ಮುಖ್ಯ ನಿರ್ಮಾಪಕರು, ರವಿಚಂದ್ರನ್ ಸಹ ನಿರ್ಮಾಪಕರು. ಸಿನಿಮಾ ಗೆದ್ದ ಖುಷಿಯಲ್ಲಿ ದೊಡ್ಡ ಪಾರ್ಟಿ ಇಡಲಾಗಿತ್ತು. ನಾನು ಪತ್ನಿ ಜೊತೆಗೆ ಪಾರ್ಟಿಗೆ ಹೋದೆ. ನಾನು ಎಲ್ಲಾ ಕಡೆ ಸುತ್ತು ಹಾಕಿ ಬಂದೆ. ವೀರಸ್ವಾಮಿ ನನ್ನನ್ನು ಕರೆದರು. ನಾನು ಹೋದೆ. ಮದ್ಯ ಸೇವನೆ, ಸಿಗರೇಟ್ ಅಲ ಬಿಟ್ಟುಬಿಡು ಎಂದರು. ಹೆಂಡತಿಯನ್ನು ಕರೆದು ತಿದ್ದಿ ಹೇಳುವಂತೆ ಹೇಳಿದರು’ ಎಂದಿದ್ದಾರೆ ಚಂದ್ರು.

ಇದನ್ನೂ ಓದಿ: ‘ನಾನು ಲೀಡರ್ ಆಗೋಕೆ ಲಾಯಕ್ ಇಲ್ಲ’; ನೇರ ಮಾತಲ್ಲಿ ಹೇಳಿದ ರವಿಚಂದ್ರನ್

‘ಮನೆಗೆ ಬರುವಂತೆ ವೀರಸ್ವಾಮಿ ಹೇಳಿದರು. ನಾನು ಪತ್ನಿ ಜೊತೆ ಹೋದೆ. ನಿನ್ನ ಕಾಲ್ಗುಣ ಚೆನ್ನಾಗಿದೆ. ಅವನಿಗೆ ಸಾಕಷ್ಟು ಸಿನಿಮಾ ಬರುತ್ತದೆ ಎಂದು ವೀರಸ್ವಾಮಿ ನನ್ನ ಪತ್ನಿ ಹೇಳಿದರು. ನನಗೆ ಒಂದು ಕೀ ಕೊಟ್ಟರು. ಇದು ನಾನು ಉಪಯೋಗಿಸುತ್ತಿರುವ ಅಂಬಾಸಿಡರ್ ಕಾರಿನ ಕೀ. ನಾನು ಹೊಸ ಕಾರು ತೆಗೆದುಕೊಳ್ಳಬೇಕು ಎಂದುಕೊಂಡಿದ್ದೇನೆ. ಈ ಕಾರು ಯೋಗ್ಯರಿಗೆ ಕೊಡಬೇಕು ಎಂದುಕೊಂಡಿದ್ದೆ. ನೀನು ಸಿಕ್ಕಿದೀಯಾ. ಕಾರಿನಲ್ಲಿ ಓಡಾಬೇಕು ಎಂದರು’ ಎಂಬುದಾಗಿ ಮುಖ್ಯಮಂತ್ರಿ ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ. ಆಗ ಅವರಿಗೆ ಕಾರು ಓಡಿಸೋಕೂ ಬರುತ್ತಿರಲಿಲ್ಲವಂತೆ. ನಂತರ ಕಾರು ಕಲಿತು ಅದನ್ನು ಓಡಿಸೋಕೆ ಕಲಿತರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ