AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಟಿಕೆಟ್ ಬೆಲೆ ಏಕಾಏಕಿ ಏರಿಕೆ ಆರೋಪ, ಮಲ್ಟಿಪ್ಲೆಕ್ಸ್​ನಲ್ಲಿ ವಾಗ್ವಾದ

Multiplex: ಮೈಸೂರಿನ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಪ್ಲೆಕ್ಸ್​ನಲ್ಲಿ ಹಠಾತ್ತನೆ ಸಿನಿಮಾ ಟಿಕೆಟ್ ಬೆಲೆ ಏರಿಕೆ ಮಾಡಿದ್ದರಿಂದ ಪ್ರೇಕ್ಷಕರು ಸಿಬ್ಬಂದಿಯೊಡನೆ ಜಗಳ ಮಾಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮೈಸೂರು: ಟಿಕೆಟ್ ಬೆಲೆ ಏಕಾಏಕಿ ಏರಿಕೆ ಆರೋಪ, ಮಲ್ಟಿಪ್ಲೆಕ್ಸ್​ನಲ್ಲಿ ವಾಗ್ವಾದ
ಐನಾಕ್ಸ್
ಮಂಜುನಾಥ ಸಿ.
|

Updated on: Aug 01, 2023 | 11:35 PM

Share

ಸಿನಿಮಾ (Cinema) ಟಿಕೆಟ್ ದರಗಳು ಈಗಾಗಲೇ ಗಗನಕ್ಕೇರಿ ಕುಳಿತಿವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಕಡಿಮೆ ಆಗಿರುವ ಈ ಸಮಯದಲ್ಲಿ ಸಿನಿಮಾ ಪ್ರೇಮಿಗಳು ವಿಧಿಯಿಲ್ಲದೆ ಮಲ್ಟಿಪ್ಲೆಕ್ಸ್​ಗಳನ್ನು  (Multiplex) ನೆಚ್ಚಿಕೊಳ್ಳಬೇಕಾಗಿದೆ. ಮಲ್ಟಿಪ್ಲೆಕ್ಸ್​ಗಳು ಹೆಚ್ಚು ಮೊತ್ತಕ್ಕೆ ಟಿಕೆಟ್​ಗಳನ್ನು ಮಾರಾಟ ಮಾಡುತ್ತಿವೆ. ಅಲ್ಲಿನ ಪಾಪ್​ಕಾರ್ನ್, ಕೂಲ್ ಡ್ರಿಂಕ್ಸ್​ ಬೆಲೆಗಳಂತೂ ಗಗನದಲ್ಲಿವೆ. ಹೀಗಿರುವಾಗ, ಮೈಸೂರಿನ ಮಲ್ಟಿಪ್ಲೆಕ್ಸ್ ಒಂದರಲ್ಲಿ ಹಠಾತ್ತನೆ ಟಿಕೆಟ್ ಬೆಲೆ ಏರಿಸಿದ್ದಕ್ಕೆ ಪ್ರೇಕ್ಷಕರು ಮಲ್ಟಿಪ್ಲೆಕ್ಸ್ ಸಿಬ್ಬಂದಿ ಜೊತೆ ಜಗಳ ಮಾಡಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಮಾಲ್ ಆಫ್ ಮೈಸೂರು ಶಾಪಿಂಗ್​ ಮಾಲ್​ನಲ್ಲಿರುವ ಐನಾಕ್ಸ್ ಮಲ್ಟಿಪ್ಲೆಕ್ಸ್​ ನಲ್ಲಿ ಇಂದು (ಆಗಸ್ಟ್ 01) ರಾತ್ರಿ ಸಿನಿಮಾ ನೋಡಲು ಹೋದವರಿಗೆ ಶಾಕ್ ನೀಡಿದ್ದಾರೆ ಮಲ್ಟಿಪ್ಲೆಕ್ಸ್ ಸಿಬ್ಬಂದಿ. ರಾತ್ರಿಯ ಶೋನ ಟಿಕೆಟ್ ದರ 160 ಇತ್ತು. ಆದರೆ ಏಕಾ-ಏಕಿ ಟಿಕೆಟ್ ಬೆಲೆ ಏರಿಸಿ 200 ರೂಪಾಯಿ ಮಾಡಲಾಗಿದೆ. ಪ್ರೇಕ್ಷಕರಿಂದ ಟಿಕೆಟ್​ ಬೆಲೆಗಿಂತಲೂ 40 ರೂಪಾಯಿ ಹೆಚ್ಚಿನ ಮೊತ್ತ ವಸೂಲಾತಿ ಮಾಡುವ ಪ್ರಯತ್ನವನ್ನು ಮಲ್ಟಿಪ್ಲೆಕ್ಸ್ ಸಿಬ್ಬಂದಿ ಮಾಡಿದ್ದಾರೆ.

ಇದರಿಂದ ಸಿಟ್ಟಾದ ಕೆಲವು ಪ್ರೇಕ್ಷಕರು ಮಲ್ಟಿಪ್ಲೆಕ್ಸ್ ಸಿಬ್ಬಂದಿ ಜೊತೆ ಜಗಳಕ್ಕಿಳಿದಿದ್ದಾರೆ. ಪಟ್ಟು ಬಿಡದ ಮಲ್ಟಿಪ್ಲೆಕ್ಸ್ ಸಿಬ್ಬಂದಿ ಪ್ರೇಕ್ಷಕರೊಟ್ಟಿಗೆ ಏರಿದ ದನಿಯಲ್ಲಿ ವಾಗ್ವಾದ ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಕೊನೆಗೆ ನಜಾರ್​ಬಾದ್ ಪೊಲೀಸರು ಮಾಲ್​ಗೆ ಆಗಮಿನಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲ್ಟಿಪ್ಲೆಕ್ಸ್​ಗಳಲ್ಲಿ ಮಾರಾಟವಾಗುವ ಪಾಪ್​ಕಾರ್ನ್ ಇನ್ನಿತರೆ ತಿಂಡಿ ತಿನಿಸು ಹಾಗೂ ಪಾನೀಯಗಳ ಮೇಲಿನ ತೆರಿಗೆಯನ್ನು ಇಳಿಸಲಾಗಿತ್ತು. ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾ ವೀಕ್ಷಣೆಯನ್ನು ತುಸು ಅಗ್ಗ ಮಾಡುವ ನಿರ್ಧಾರವನ್ನು ಸರ್ಕಾರ ತಳೆದಿತ್ತು, ಅದರ ಬೆನ್ನಲ್ಲೆ ಇದೀಗ ಮಲ್ಟಿಪ್ಲೆಕ್ಸ್​ಗಳು ಹಠಾತ್ತನೆ ಟಿಕೆಟ್ ಬೆಲೆ ಏರಿಕೆ ಮಾಡಿ, ಸಾಮಾನ್ಯನ ಜೇಬಿಗೆ ಕತ್ತರಿ ಹಾಕುವ ಯತ್ನ ಮಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ