ಜನ್ಯಗೆ ಹೃದಯಾಘಾತ, ಗೋಲ್ಡನ್​ ಅವರ್​​ನಲ್ಲಿ ಚಿಕಿತ್ಸೆ, ಬಚಾವ್

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜುನ್ ಜನ್ಯ ಮೈಸೂರಿನ ಬೋಗಾದಿ ಬಳಿ ಇರುವ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈಗಾಗಲೇ ಚಿಕಿತ್ಸೆ ಆರಂಭಿಸಿದ್ದು, ಐಸಿಯೂ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. 39 ವರ್ಷದ ಅರ್ಜುನ್ ಜನ್ಯ ಕಡಿಮೆ ವಯಸ್ಸಿಗೆ ಹೃದಯಾಘಾತಕ್ಕೊಳಗಾಗಿರುವುದು ಮಾತ್ರ ವಿಪರ್ಯಾಸ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಬೋಗಾದಿಯ ರಸ್ತೆಯ ಬಳಿ […]

ಜನ್ಯಗೆ ಹೃದಯಾಘಾತ, ಗೋಲ್ಡನ್​ ಅವರ್​​ನಲ್ಲಿ ಚಿಕಿತ್ಸೆ, ಬಚಾವ್
ಸಾಧು ಶ್ರೀನಾಥ್​

Updated on: Feb 27, 2020 | 10:58 AM

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜುನ್ ಜನ್ಯ ಮೈಸೂರಿನ ಬೋಗಾದಿ ಬಳಿ ಇರುವ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈಗಾಗಲೇ ಚಿಕಿತ್ಸೆ ಆರಂಭಿಸಿದ್ದು, ಐಸಿಯೂ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.

39 ವರ್ಷದ ಅರ್ಜುನ್ ಜನ್ಯ ಕಡಿಮೆ ವಯಸ್ಸಿಗೆ ಹೃದಯಾಘಾತಕ್ಕೊಳಗಾಗಿರುವುದು ಮಾತ್ರ ವಿಪರ್ಯಾಸ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಬೋಗಾದಿಯ ರಸ್ತೆಯ ಬಳಿ ಐಷಾರಾಮಿ ವಿಲ್ಲ ಖರೀದಿಸಿದ್ದರು. ಬಿಡುವಿನ ಸಮಯದಲ್ಲಿ ವಿಶ್ರಾಂತಿ ಪಡೆಯಲು ಇಲ್ಲಿಗೆ ಬರುತ್ತಿದ್ದರು.

Published On - 7:56 am, Thu, 27 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us