AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hamsalekha: ‘ಧರ್ಮೋಕ್ರಸಿ ತೊಲಗಲಿ, ಡೆಮಾಕ್ರಸಿ ಜಯಿಸಲಿ, ಸಿದ್ದರಾಮಯ್ಯ ಸಿಎಂ ಆಗಲಿ’: ಸಂಗೀತ ನಿರ್ದೇಶಕ ಹಂಸಲೇಖ ಆಶಯ

ಸ್ಯಾಂಡಲ್​ವುಡ್ ಸಂಗೀತ ನಿರ್ದೇಶಕ ಹಂಸಲೇಖ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ತಾವು ಭಯಸ್ತನಲ್ಲ ಎಂದೂ ಅವರು ಹೇಳಿಕೊಂಡಿದ್ದಾರೆ. ಹಂಸಲೇಖ ಅವರು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಸಿದ್ದರಾಮಯ್ಯ ಸಮರ್ಥಿಸಿದ್ದಾರೆ.

Hamsalekha: ‘ಧರ್ಮೋಕ್ರಸಿ ತೊಲಗಲಿ, ಡೆಮಾಕ್ರಸಿ ಜಯಿಸಲಿ, ಸಿದ್ದರಾಮಯ್ಯ ಸಿಎಂ ಆಗಲಿ’: ಸಂಗೀತ ನಿರ್ದೇಶಕ ಹಂಸಲೇಖ ಆಶಯ
ಹಂಸಲೇಖ, ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)
TV9 Web
| Updated By: shivaprasad.hs|

Updated on:Dec 26, 2021 | 3:53 PM

Share

ರಾಜ್ಯದ ಮಕ್ಕಳಿಗೆ ಹಾಲು ಕೊಟ್ಟ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರ ‘ಯರೆಬೇವು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ. ಅವರು ಧರ್ಮೋಕ್ರಸಿ ಬದಿಗೆ ಸರಿಸಿ ಡೆಮೋಕ್ರಸಿ ಉಳಿಸಲಿ ಎಂದು ಹಂಸಲೇಖ ನುಡಿದಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಿನ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಬಸವಜಯಂತಿ ದಿನ ಅಧಿಕಾರ ಸ್ವೀಕರಿಸುವ ಅವಕಾಶ ಸಿದ್ದರಾಮಯ್ಯನವರಿಗೆ ಸಿಕ್ಕಿತ್ತು. ಅಧಿಕಾರ ವಹಿಸಿಕೊಂಡ ತಕ್ಷಣವೇ ಅನ್ನಭಾಗ್ಯ ಘೋಷಿಸಿದರು. ಇದರಿಂದ ಸೋಮಾರಿಗಳಿಗೆ ಪ್ರೋತ್ಸಾಹ ಕೊಟ್ಟಂತಾಗಲಿದೆ ಎಂದು ಹಲವರು ಟೀಕಿಸಿದ್ದರು. ದಾಸೋಹ ಪರಂಪರೆ ಗೊತ್ತಿದ್ದರೆ ಹೀಗೆ ಟೀಕೆ ಮಾಡುತ್ತಿರಲಿಲ್ಲ. ಸಿದ್ದರಾಮಯ್ಯಗೆ ಶರಣ ಪರಂಪರೆ ಬಗ್ಗೆ ದೊಡ್ಡ ಅರಿವು ಇದೆ ಎಂದು ಹಂಸಲೇಖ ಹೇಳಿದ್ದಾರೆ. ಹಾಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶಿ ಶಾಲೆಗೂ ನೆರವು ನೀಡಿದ್ದನ್ನು ಇದೇ ವೇಳೆ ಹಂಸಲೇಖ ಸ್ಮರಿಸಿಕೊಂಡಿದ್ದಾರೆ.

ಇತ್ತೀಚಿನ ಹೇಳಿಕೆಯೊಂದು ವಿವಾದ ಪಡೆದುಕೊಂಡ ಕುರಿತಂತೆ ಹಂಸಲೇಖ ಪ್ರತಿಕ್ರಿಯಿಸಿದರು. ನಾನು ಭಯಸ್ತನಲ್ಲ, ಮಾಗಡಿ ರೋಡ್​ನಲ್ಲಿ ಆಟವಾಡಿ ಬಂದವನು. ‘ಯರೆಬೇವು’ ಪುಸ್ತಕ ದೇಸಿ ಸಮುದಾಯದ ಕರುಳಿನ ಕಥೆಯಾಗಿರುವಂತೆಯೇ, ನಮ್ಮದೂ ಕೂಡ ಅದೇ ರೀತಿಯ ಕರುಳಿನ ಕಥೆ. ಇತ್ತೀಚೆಗೆ ಒಂದು ವಿಚಾರದಲ್ಲಿ ಗೊತ್ತಿಲ್ಲದ ಸಮುದಾಯಗಳೆಲ್ಲ ಬೆಂಬಲ ನೀಡಿವೆ. ಹೀಗೆಲ್ಲ ಆಗುತ್ತೆ ಎಂದು ನನಗೆ ಗೊತ್ತಿರಲಿಲ್ಲ. ಆಗ ನನ್ನ ಬೆಂಬಲಕ್ಕೆ ನಿಂತವರು ಎಸ್.ಜಿ.ಸಿದ್ದರಾಮಯ್ಯ’’ ಎಂದು ಹಂಸಲೇಖ ನುಡಿದಿದ್ದಾರೆ. ಅಲ್ಲದೇ ಕಾರ್ಯಕ್ರಮಕ್ಕೆ ಆಹ್ವಾನಿಸಿ ಬೆನ್ನೆಲುಬಾಗಿ ನಿಂತ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದರು.

ಹಂಸಲೇಖ ಏನಾದರೂ ಅಪರಾಧದ ಹೇಳಿಕೆ ಕೊಟ್ಟಿದ್ದರಾ?; ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಎಸ್.ಜಿ ಸಿದ್ದರಾಮಯ್ಯ ಅವರ ‘ಯರೆಬೇವು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅವರು ಮಾತನಾಡುತ್ತಾ ಹಂಸಲೇಖ ಅವರ ಹೇಳಿಕೆನ್ನು ಸಮರ್ಥಿಸಿಕೊಂಡರು. ‘‘ಹಂಸಲೇಖ ಏನಾದರೂ ದೊಡ್ಡ ಅಪರಾಧದ ಹೇಳಿಕೆ ಕೊಟ್ಟಿದ್ರಾ?’’ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಸಂಗೀತ ನಿರ್ದೇಶಕ ವಾಸ್ತವಾಂಶವನ್ನು ತೆರೆದಿಟ್ಟಿದ್ದರು ಅಷ್ಟೇ. ಅವರ ಹೇಳಿಕೆಯ ಬಗ್ಗೆ ದೊಡ್ಡ ರಂಪ ಮಾಡಿಬಿಟ್ಟರು ಎಂದರು.

ಶರಣ ಧರ್ಮವನ್ನು ವೈದಿಕ ಧರ್ಮದ ಬಾಲಂಗೋಚಿ ಮಾಡಲು ಹೊರಟಿದ್ದಾರೆ: ಚಿಂತಕ ಡಾ.ಕೆ ಮರುಳಸಿದ್ದಪ್ಪ ಪ್ರಗತಿಪರ ಚಿಂತಕ ಡಾ.ಕೆ ಮರುಳಸಿದ್ದಪ್ಪ ಮಾತನಾಡಿ, ‘‘ಹುಟ್ಟಿನಿಂದ ಲಿಂಗಾಯತರಾಗಿರುವವರೆಲ್ಲ ಬಸವಣ್ಣನ ವಾರಸುದಾರರಲ್ಲ. ಇಲ್ಲಿರುವುದು ಶರಣ ಧರ್ಮ. ಆದರೆ, ಇದನ್ನು ವೈದಿಕ ಧರ್ಮದ ಬಾಲಂಗೋಚಿ ಮಾಡಲು ಹೊರಟಿದ್ದಾರೆ. ದೇವಸ್ಥಾನ ಸಂಸ್ಕೃತಿಯನ್ನ ಬಸವಣ್ಣ ವಿರೋಧಿಸಿದ್ದರು. ಸ್ಥಾವರಕ್ಕೆ ಅಳಿವುಂಟು ಜಂಗಮಕ್ಕೆ ಆಳಿವಿಲ್ಲ ಎಂದು ಸಾರಿದ್ದರು. ದೇವಸ್ಥಾನ ಕೇಂದ್ರಿತವಾಗಿದ್ದ ಧರ್ಮವನ್ನ ವಿಕೇಂದ್ರಕರಣಗೊಳಿಸಿದ್ದರು. ನಾನು ಒರಟಾಗಿ ಹೇಳಿದರೆ ಅದು ಬೇರೆ ರೂಪ ಪಡೆದುಕೊಳ್ಳುತ್ತದೆ. ಅದು ರವೀಂದ್ರ ಕಲಾಕ್ಷೇತ್ರ, ಸಾಣೆಹಳ್ಳಿಯಲ್ಲಿ ಅನುಭವಕ್ಕೆ ಬಂದಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಬೌದ್ಧ, ಲಿಂಗಾಯತ, ಸಿಖ್, ಜೈನ ಇವೆಲ್ಲವೂ ಹಿಂದೂ ಧರ್ಮದ ಭಾಗವೆಂದು ಬಿಂಬಿಸಲಾಗುತ್ತಿದೆ: ಸಿದ್ದರಾಮಯ್ಯ

ಏರಲೇ ಇಲ್ಲ ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ಕಲೆಕ್ಷನ್​; ಇದಕ್ಕೆ ಕಾರಣಗಳೇನು?

Published On - 3:50 pm, Sun, 26 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ