AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅರಮನೆ ವೇದಿಕೆಯಲ್ಲಿ ಸಂಗೀತ ದರ್ಬಾರ್​; ಇಂದು ‘ನಾಲ್ವಡಿ ನಾಲ್ನುಡಿ’ ಕಾರ್ಯಕ್ರಮ ನಡೆಸಿಕೊಡಲಿರುವ ಹಂಸಲೇಖ

Mysore Dasara 2021: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆಯ ಅಂಗಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಮೈಸೂರು: ಅರಮನೆ ವೇದಿಕೆಯಲ್ಲಿ ಸಂಗೀತ ದರ್ಬಾರ್​; ಇಂದು ‘ನಾಲ್ವಡಿ ನಾಲ್ನುಡಿ’ ಕಾರ್ಯಕ್ರಮ ನಡೆಸಿಕೊಡಲಿರುವ ಹಂಸಲೇಖ
ಸಾಂಕೇತಿಕ ಚಿತ್ರ
Follow us
TV9 Web
| Updated By: shivaprasad.hs

Updated on: Oct 09, 2021 | 10:23 AM

ಮೈಸೂರು: ದಸರಾ 2021ರ ಅಂಗವಾಗಿ ಅರಮನೆ ಅಂಗಳದಲ್ಲಿ ನಡೆಯುವ ಸಂಗೀತ ದರ್ಬಾರ್​ನಲ್ಲಿ ಇಂದು (ಶನಿವಾರ) ಕನ್ನಡದ ಖ್ಯಾತ ಗಾಯಕರ ಸಂಗೀತ ವೈಭವ ನಡೆಯಲಿದೆ. ಅರಮನೆ ವೇದಿಕೆಯಲ್ಲಿ ಮೂರನೇ ದಿನದ ಸಂಗೀತ ವೈಭವದಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಂಜೆ 6 ಗಂಟೆಯಿಂದ 9.30 ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ರಿಂದ 7 ವರೆಗೆ ಖ್ಯಾತ ಕಲಾವಿದ ಎಚ್.ಎನ್.ಭಾಸ್ಕರ್ ಮತ್ತು ತಂಡದಿಂದ‌ ಸಂಗೀತ ದರ್ಬಾರ್ ನಡೆಯಲಿದೆ. ನಂತರ ಸಂಜೆ 7 ರಿಂದ ಹಂಸಲೇಖ ಮತ್ತು ಅವರ ತಂಡದಿಂದ ‘ನಾಲ್ವಡಿ ನಾಲ್ನುಡಿ’ ಕಾರ್ಯಕ್ರಮ ನಡೆಯಲಿದೆ.

‘ಅಭಿಮನ್ಯು’ಗೆ ಮರದ ಅಂಬಾರಿ ಹೊರಿಸಿ ತಾಲೀಮು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅಕ್ಟೋಬರ್ 15ರಂದು ನಡೆಯುವ ಜಂಬೂ ಸವಾರಿ ಮೆರವಣಿಗೆಗೆ ತಾಲೀಮು ನಡೆಯುತ್ತಿದೆ. ಅಕ್ಟೋಬರ್ 12, 13ರಂದು ಜಂಬೂಸವಾರಿ ರಿಹರ್ಸಲ್ ನಡೆಯಲಿದ್ದು, ಅ.15ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ‘ಅಭಿಮನ್ಯು’ಗೆ ಮರದ ಅಂಬಾರಿ ಹೊರಿಸಿ ರಿಹರ್ಸಲ್ ನಡೆಸಲಾಗುತ್ತಿದೆ. ಇಂದು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತರಿಂದ ಪುಷ್ಪಾರ್ಚನೆ ನಡೆಸಿ ತಾಲೀಮು ನಡೆಸಲಾಯಿತು. ರಿಹರ್ಸಲ್​​ನಲ್ಲಿ ಗಜಪಡೆ ಜೊತೆ ಅಶ್ವದಳವೂ ಭಾಗಿಯಾಗಿದೆ.

‘ಧನಂಜಯ’, ‘ಅಶ್ವತ್ಥಾಮ’ ಅರಮನೆಯ ಪೂಜಾ ವಿಧಿವಿಧಾನಗಳಲ್ಲಿ ಭಾಗಿಯಾಗಿದ್ದು, ಈ ಬಾರಿ ಅಶ್ವತ್ಥಾಮನಿಗೆ ಪಟ್ಟದ ಆನೆಯ ಜವಾಬ್ದಾರಿ ನೀಡಲಾಗಿದೆ. ಗೋಪಾಲಸ್ವಾಮಿ ಆನೆಯ ಗೈರಿನಲ್ಲಿ ಅಶ್ವತ್ಥಾಮನಿಗೆ ಜವಾಬ್ದಾರಿ ನೀಡಲಾಗಿದೆ. ಶ್ರೀರಂಗಪಟ್ಟಣಕ್ಕೆ ತೆರಳಲಿರುವ ಗೋಪಾಲಸ್ವಾಮಿ ಹಾಗೂ ಕಾವೇರಿ ಆನೆಗಳು ಶ್ರೀರಂಗಪಟ್ಟಣ ದಸರಾದಲ್ಲಿ ಭಾಗಿಯಾಗಲು ಅಲ್ಲಿಗೆ ಪ್ರಯಾಣ ಬೆಳೆಸಿವೆ. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮ ಮುಗಿಸಿ ನಂತರ ಅವು ಮರಳಲಿವೆ.

ನವರಾತ್ರಿಯ ಮೂರನೇ ದಿನ ಚಂದ್ರಘಂಟಾಪೂಜೆ: ಮೈಸೂರು ಅರಮನೆಯಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ನವರಾತ್ರಿಯ 3ನೇ ದಿನವಾದ ಇಂದು ಚಂದ್ರಘಂಟಾ ಪೂಜೆ ನಡೆಯಲಿದೆ. ಅಡೆತಡೆ, ಚಿಂತೆ, ನೋವು ಇತ್ಯಾದಿ ನಿವಾರಣೆಗಾಗಿ ಪೂಜೆ ನಡೆಯಲಿದ್ದು, ಕೋಡಿ ಸೋಮೇಶ್ವರ ದೇವಾಲಯದಿಂದ ಕಳಸ ತಂದು ಪಟ್ಟದ ಆನೆ, ಕುದುರೆ, ಒಂಟೆ, ಹಸುಗೆ ಪೂಜೆ ಸಲ್ಲಿಕೆಯಾಗಲಿದೆ. ಬಳಿಕ ಯದುವೀರ್ ಅವರು ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಇದನ್ನೂ ಓದಿ:

KSRTC Dasara Tour: ದಸರಾದಲ್ಲಿ ಮೈಸೂರು ಸುತ್ತಬೇಕಾ?; ಕೆಎಸ್​ಆರ್​ಟಿಸಿಯಿಂದ ಪ್ರವಾಸದ ಪ್ಯಾಕೇಜ್ ಘೋಷಣೆ

Viral Video: ಪುಟ್ಟ ಗಿಳಿಯೊಂದು ಬೆಕ್ಕನ್ನು ಹೆದರಿಸಿದ ಪರಿ ಹೇಗಿತ್ತು ಗೊತ್ತಾ? ವಿಡಿಯೋ ವೈರಲ್

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!