AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ 100 ಸ್ಮರಣೀಯ ಸಿನಿಮಾಗಳು ಯಾವವು ಗೊತ್ತಾ? ಶರಣು ಹುಲ್ಲೂರು ಬರೆದ ಪುಸ್ತಕದಲ್ಲಿದೆ ಉತ್ತರ

ಮೂಕಿ ಸಿನಿಮಾಗಳ ಯುಗದಿಂದ 2022ರ ತನಕ ರಿಲೀಸ್​ ಆದ ಕನ್ನಡದ ಸಿನಿಮಾಗಳಲ್ಲಿ ನೂರು ಸಿನಿಮಾಗಳನ್ನು ಆಯ್ಕೆ ಮಾಡುವ ಮೂಲಕ ಸಿನಿಮಾಸಕ್ತರಿಗಾಗಿ ಶರಣು ಹುಲ್ಲೂರು ಅವರು ಈ ಪುಸ್ತಕ ರಚಿಸಿದ್ದಾರೆ. ಅತಿ ಅಪರೂಪದ ಫೋಟೋಗಳು ಕೂಡ ಈ ಪುಸ್ತಕದಲ್ಲಿವೆ. ಇದರ ಬಗ್ಗೆ ರಮೇಶ್ ಅರವಿಂದ್, ಜೋಗಿ ಮೆಚ್ಚುಗೆ ಸೂಚಿಸಿದ್ದಾರೆ.

ಕನ್ನಡದ 100 ಸ್ಮರಣೀಯ ಸಿನಿಮಾಗಳು ಯಾವವು ಗೊತ್ತಾ? ಶರಣು ಹುಲ್ಲೂರು ಬರೆದ ಪುಸ್ತಕದಲ್ಲಿದೆ ಉತ್ತರ
‘ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Oct 10, 2023 | 7:08 PM

Share

ಕನ್ನಡದಲ್ಲಿ ಈವರೆಗೂ 4800ಕ್ಕೂ ಅಧಿಕ ಸಿನಿಮಾಗಳು (Kannada Movies) ಬಂದಿವೆ. ಇಷ್ಟು ದೊಡ್ಡ ಸಮುದ್ರದಲ್ಲಿ ಸ್ಮರಣೀಯವಾದ 100 ಸಿನಿಮಾಗಳನ್ನು ಪಟ್ಟಿ ಮಾಡುವುದು ಎಂದರೆ ನಿಜಕ್ಕೂ ಸವಾಲಿನ ಕೆಲಸ. ಆ ಕೆಲಸವನ್ನು ಮಾಡಿದ್ದಾರೆ ಪತ್ರಕರ್ತ ಶರಣು ಹುಲ್ಲೂರು (Sharanu Hullur). ಹಲವು ವರ್ಷಗಳಿಂದ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿರುವ ಅವರು ‘ಕನ್ನಡದ 100 ಸ್ಮರಣೀಯ ಸಿನಿಮಾಗಳು: ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ’ ಕೃತಿಯನ್ನು ಬರೆದಿದ್ದಾರೆ. ಭಾನುವಾರ (ಅಕ್ಟೋಬರ್​ 8) ಬೆಂಗಳೂರಿನಲ್ಲಿ ಈ ಪುಸ್ತಕ ಬಿಡುಗಡೆ ಆಯಿತು. ಸ್ಯಾಂಡಲ್​ವುಡ್​ನ ಖ್ಯಾತ ನಟ, ನಿರ್ದೇಶಕ, ನಿರೂಪಕ ರಮೇಶ್​ ಅರವಿಂದ್​ (Ramesh Aravind) ಹಾಗೂ ಹಿರಿಯ ಪತ್ರಕರ್ತ, ಲೇಖಕ ಜೋಗಿ ಅವರು ಈ ಕೃತಿಯನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ‘ಕನ್ನಡದ 100 ಸ್ಮರಣೀಯ ಸಿನಿಮಾಗಳು: ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ’ ಪುಸ್ತಕದಲ್ಲಿ ಒಟ್ಟು 100 ಸಿನಿಮಾಗಳ ಬಗ್ಗೆ ಮಾಹಿತಿ ಇದೆ. ಅವುಗಳ ಕುರಿತ ವಿಶ್ಲೇಷಣೆ ಇದೆ. ಈ ಚಿತ್ರಗಳನ್ನು ಯಾಕೆ ನೋಡಬೇಕು ಎಂಬ ಪ್ರಶ್ನೆಗೆ ಉತ್ತರ ಇದೆ. ಆ ಸಿನಿಮಾಗಳಲ್ಲಿ ಕೆಲಸ ಮಾಡಿದ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಮಾಹಿತಿ ಇದೆ. ಅನೇಕ ಅಪರೂಪದ ಸಂಗತಿಗಳ ಬಗ್ಗೆ ಮಾಹಿತಿ ಈ ಪುಸ್ತಕದಲ್ಲಿ ಸಿಗುತ್ತದೆ.

ಇದನ್ನೂ ಓದಿ: ಪುನೀತ್​​ ಬಯೋಗ್ರಫಿ ‘ನೀನೆ ರಾಜಕುಮಾರ’ ರಿಲೀಸ್ ಮಾಡಿದ ಕಿಚ್ಚ ಸುದೀಪ್​ ಹೇಳಿದ್ದೇನು?

ಮೂಕಿ ಸಿನಿಮಾಗಳ ಯುಗದಿಂದ 2022ರ ತನಕ ರಿಲೀಸ್​ ಆದ ಸಿನಿಮಾಗಳಲ್ಲಿ ನೂರು ಸಿನಿಮಾಗಳನ್ನು ಆಯ್ಕೆ ಮಾಡುವ ಮೂಲಕ ಸಿನಿಮಾಸಕ್ತರಿಗಾಗಿ ಶರಣು ಹುಲ್ಲೂರು ಅವರು ಈ ಪುಸ್ತಕ ರಚಿಸಿದ್ದಾರೆ. ಅತಿ ಅಪರೂಪದ ಫೋಟೋಗಳು ಕೂಡ ಈ ಪುಸ್ತಕದಲ್ಲಿವೆ. ಇದರ ಬಗ್ಗೆ ರಮೇಶ್ ಅರವಿಂದ್ ಮಾತನಾಡಿದ್ದಾರೆ. ‘ಅನೇಕ ವರ್ಷಗಳಿಂದ ಶರಣು ಹುಲ್ಲೂರು ಅವರು ನನಗೆ ಗೊತ್ತು. ಸಿನಿಮಾಗಳನ್ನು ಅವರು ಗ್ರಹಿಸುವ ರೀತಿ ವಿಶೇಷವಾಗಿದೆ. ಸಿನಿಮಾಗಳ ವಿಶ್ಲೇಷಣೆ ಬಗ್ಗೆ ಅವರಿಗೆ ಇರುವ ಆಸಕ್ತಿಯಿಂದಲೇ ಈ ರೀತಿಯ ಪುಸ್ತಕ ಬರೆಯಲು ಸಾಧ್ಯವಾಗಿದೆ. ಈ ಪುಸ್ತಕವನ್ನು ಓದಲು ಮರೆಯದಿರಿ ಮರೆತು ನಿರಾಶಾರಾಗದಿರಿ’ ಎನ್ನುವ ಮೂಲಕ ರಮೇಶ್​ ಅವರು ಈ ಪುಸ್ತಕಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Puneeth Rajkumar Biography: ‘ನೀನೇ ರಾಜಕುಮಾರ’; ಅಪ್ಪು ಬಯೋಗ್ರಫಿಯ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಸಾವಣ್ಣ ಪ್ರಕಾಶನದ ಮೂಲಕ ಈ ಪುಸ್ತಕ ಹೊರಬಂದಿದೆ. ಈ ಮೊದಲು ಶರಣು ಹುಲ್ಲೂರ ಬರೆದ ‘ಅಂಬರೀಶ್’, ‘ನೀನೇ ರಾಜಕುಮಾರ’ ಪುಸ್ತಕಗಳನ್ನು ಕೂಡ ಇದೇ ಪ್ರಕಾಶನ ಸಂಸ್ಥೆ ಪ್ರಕಟಿಸಿದೆ. ‘ಕನ್ನಡದ 100 ಸ್ಮರಣೀಯ ಸಿನಿಮಾಗಳು: ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ’ ಪುಸ್ತಕಕ್ಕೆ ಜೋಗಿ ಅವರು ಹಿನ್ನುಡಿ ಬರೆದಿದ್ದಾರೆ. ‘ಶರಣು ಹುಲ್ಲೂರು ಅಸಾಧ್ಯ ಜೀವಂತಿಕೆಯ, ಹೊಸತನಗಳ ಹುಡುಕಾಟದ, ಬರೆಯುವ ಹುರುಪು ಉಳಿಸಿಕೊಂಡ ಲವಲವಿಕೆಯ ಗೆಳೆಯ. ಸಿನಿಮಾ ಮೇಲೆ ಅವರಿಗೆ ಇರುವ ಪ್ರೀತಿಗೆ ಈ ಪುಸ್ತಕವೇ ಸಾಕ್ಷಿ. ಈ ಕೃತಿ ಚಿಗುರಿಸಿರುವ ನೆನಪುಗಳಲ್ಲಿ ನಾನು ನನ್ನ ತಾರುಣ್ಯಕ್ಕೆ ಮರಳಿದ್ದೇನೆ’ ಎಂದು ಅವರು ಹಿನ್ನುಡಿಯಲ್ಲಿ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ