AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಮೈ ಆಟೋಗ್ರಾಫ್​’ ಚಿತ್ರಕ್ಕೆ 17 ವರ್ಷ: ಎವರ್​ಗ್ರೀನ್​ ಸಿನಿಮಾದ ಬಗ್ಗೆ ಕಿಚ್ಚ ಸುದೀಪ್​ ವಿಶೇಷ ಮಾತು

My Autograph Movie: ‘ಮೈ ಆಟೋಗ್ರಾಫ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ಕಿಚ್ಚ ಸುದೀಪ್ ಮೊದಲ ಬಾರಿಗೆ ನಿರ್ದೇಶಕನಾದರು. ಚೊಚ್ಚಲ ಪ್ರಯತ್ನದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು.

Kichcha Sudeep: ‘ಮೈ ಆಟೋಗ್ರಾಫ್​’ ಚಿತ್ರಕ್ಕೆ 17 ವರ್ಷ: ಎವರ್​ಗ್ರೀನ್​ ಸಿನಿಮಾದ ಬಗ್ಗೆ ಕಿಚ್ಚ ಸುದೀಪ್​ ವಿಶೇಷ ಮಾತು
ಮೈ ಆಟೋಗ್ರಾಫ್
ಮದನ್​ ಕುಮಾರ್​
|

Updated on:Feb 17, 2023 | 5:07 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಈವರೆಗೂ ಅನೇಕ ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಆ ಪೈಕಿ ಕೆಲವು ಸಿನಿಮಾಗಳು ಅಭಿಮಾನಿಗಳ ಪಾಲಿಗೆ ಸಖತ್​ ಸ್ಪೆಷಲ್​. ‘ಮೈ ಆಟೋಗ್ರಾಫ್​’ (My Autograph Movie) ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ವಿಶೇಷ ಪ್ರೀತಿ. ಈ ಸಿನಿಮಾ ತೆರೆಕಂಡು ಇಂದಿಗೆ (ಫೆ.17) ಬರೋಬ್ಬರಿ 17 ವರ್ಷ ಕಳೆದಿದೆ. ಈ ಖುಷಿಯಲ್ಲಿ ಕಿಚ್ಚ ಸುದೀಪ್​ ಅವರು ಟ್ವೀಟ್​ ಮಾಡಿದ್ದಾರೆ. ಈ ಎವರ್​ಗ್ರೀನ್​ ಚಿತ್ರದ ನೆನಪುಗಳನ್ನು ಅವರು ಮೆಲುಕು ಹಾಕಿದ್ದಾರೆ. ತಮ್ಮ ಜೊತೆ ಬೆಂಬಲವಾಗಿ ನಿಂತು ಕೆಲಸ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ. ಈ ಟ್ವೀಟ್​ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​ ಅವರು ನಿರ್ದೇಶನ ಮಾಡಿದ ಮೊದಲ ಸಿನಿಮಾ ಇದು ಎಂಬುದು ವಿಶೇಷ.

2006ರಲ್ಲಿ ತೆರೆಕಂಡಿದ್ದ ‘ಮೈ ಆಟೋಗ್ರಾಫ್​’:

ಕಿಚ್ಚ ಸುದೀಪ್​, ಮೀನಾ, ಶ್ರೀದೇವಿಕಾ, ದೀಪಾ ಭಾಸ್ಕರ್​ ಮುಂತಾದವರು ನಟಿಸಿದ ‘ಮೈ ಆಟೋಗ್ರಾಫ್​’ ಸಿನಿಮಾ 2006ರಲ್ಲಿ ತೆರೆಕಂಡು ಸೂಪರ್​ ಹಿಟ್​ ಆಯಿತು. ಇದು ತಮಿಳಿನ ‘ಆಟೋಗ್ರಾಫ್​’ ಚಿತ್ರದ ರಿಮೇಕ್​ ಆಗಿದ್ದರೂ ಕೂಡ ಕನ್ನಡದ ನೇಟಿವಿಟಿಗೆ ತಕ್ಕಂತೆ ಮೂಡಿಬಂತು. ಅದು ಕನ್ನಡಿಗರಿಗೆ ಹೆಚ್ಚು ಇಷ್ಟವಾಯಿತು.

ಇದನ್ನೂ ಓದಿ
Image
Kiccha Sudeep: ಜೋಸ್ ಬಟ್ಲರ್​ನಿಂದ ಸುದೀಪ್​ಗೆ ಬಂತು ಸರ್​​ಪ್ರೈಸ್ ಗಿಫ್ಟ್: ಥ್ರಿಲ್ ಆದ ಕಿಚ್ಚ
Image
‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​
Image
ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

ಕಿಚ್ಚ ಸುದೀಪ್​ ಚೊಚ್ಚಲ ನಿರ್ದೇಶನ:

ನಟ ಸುದೀಪ್​ ಅವರಿಗೆ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಹೆಸರು ಗಳಿಸಿದ್ದಾರೆ. ‘ಮೈ ಆಟೋಗ್ರಾಫ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ಅವರು ಮೊದಲ ಬಾರಿಗೆ ನಿರ್ದೇಶಕನಾದರು. ಚೊಚ್ಚಲ ಪ್ರಯತ್ನದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ಅಲ್ಲದೇ ಆ ಸಿನಿಮಾದ ಗೆಲುವಿನಿಂದ ಅವರ ವೃತ್ತಿಬದುಕಿನ ಚಾರ್ಮ್​ ಹೆಚ್ಚಿತು.

ಹಾಡುಗಳಿಂದ ಗಮನ ಸೆಳೆದ ‘ಮೈ ಆಟೋಗ್ರಾಫ್​’:

ಭಾರದ್ವಜ್​ ಸಂಗೀತ ನಿರ್ದೇಶನದಲ್ಲಿ ಬಂದ ‘ಮೈ ಆಟೋಗ್ರಾಫ್​’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆದವು. ‘ಅರಳುವ ಹೂವುಗಳೇ ಆಲಿಸಿರಿ..’, ‘ಸವಿ ಸವಿ ನೆನಪು..’ ಹಾಡುಗಳು ಇಂದಿಗೂ ಕೇಳುಗರ ಫೇವರಿಟ್​ ಆಗಿ ಉಳಿದುಕೊಂಡಿವೆ. ಚಿತ್ರದ ಗೆಲುವಿನಲ್ಲಿ ಈ ಗೀತೆಗಳ ಕೊಡುಗೆ ಕೂಡ ದೊಡ್ಡದಿದೆ.

‘ಮೈ ಆಟೋಗ್ರಾಫ್​’ ಬಗ್ಗೆ ಸುದೀಪ್​ ಟ್ವೀಟ್​:

‘ನಾನು ನಿರ್ದೇಶನಕ್ಕೆ ಹೈಹಾಕಿ 17 ವರ್ಷ ಆಯಿತು. ನಿರ್ದೇಶಕರ ಕುರ್ಚಿಯಲ್ಲಿ ಕುಳಿತುಕೊಳ್ಳುವ ಅನುಭವ ಯಾವಾಗಲೂ ವಿಶೇಷವಾದದ್ದು. ಈ ಸಿನಿಮಾದ ಸೆಟ್​ನಲ್ಲಿ ನನಗೆ ಬೆಂಬಲ ನೀಡಿದ ನಟರು, ತಂತ್ರಜ್ಞರು, ಪ್ರೊಡಕ್ಷನ್​ ಟೀಮ್​ ಮತ್ತು ಎಲ್ಲ ಸಿಬ್ಬಂದಿಗೆ ಧನ್ಯವಾದಗಳು’ ಎಂದು ಕಿಚ್ಚ ಸುದೀಪ್​ ಅವರು ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:07 pm, Fri, 17 February 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!