AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಚಿತ್ರೀಕರಣ ಮುಗಿಸಿದ “ಮೈ ಹೀರೋ”ನ ಮುಂದಿನ ನಿಲ್ದಾಣ ಅಮೆರಿಕ

My Hero: ಹಿರಿಯ ನಟ ದತ್ತಣ್ಣ, ಪ್ರಕಾಶ್ ಬೆಳವಾಡಿ, ಹಾಲಿವುಡ್ ನಟ ಜಿಲ್ಲಾಲಿ ರೆಜ್ ಕಲ್ಲಾಹ್, ನಿರಂಜನ್ ದೇಶಪಾಂಡೆ ಅವರುಗಳು ನಟಿಸಿರುವ ಮೈ ಹೀರೊ ಕನ್ನಡ ಸಿನಿಮಾ ಮಧ್ಯಪ್ರದೇಶದಲ್ಲಿ ಚಿತ್ರೀಕರಣ ಮುಗಿಸಿದ್ದು, ಮುಂದಿನ ಚಿತ್ರೀಕರಣ ಅಮೆರಿಕದಲ್ಲಿ ನಡೆಯಲಿದೆ.

ಮಧ್ಯಪ್ರದೇಶದಲ್ಲಿ ಚಿತ್ರೀಕರಣ ಮುಗಿಸಿದ ಮೈ ಹೀರೋನ ಮುಂದಿನ ನಿಲ್ದಾಣ ಅಮೆರಿಕ
ಮೈ ಹೀರೋ
ಮಂಜುನಾಥ ಸಿ.
|

Updated on: Apr 22, 2023 | 8:46 PM

Share

ಸಾಮಾಜಿಕ ಸಮಸ್ಯೆಯೊಂದರ (Social Issue) ಕುರಿತಾದ ವಿಷಯ ಆಧರಿಸಿದ ಸಿನಿಮಾ ಮೈ ಹೀರೋ (My Hero) ಇದೇ ತಿಂಗಳ ಫೆಬ್ರವರಿಯಲ್ಲಿ ಸೆಟ್ಟೇರಿತ್ತು. ಸಿನಿಮಾದಲ್ಲಿ ಕನ್ನಡದ ಜನಪ್ರಿಯ ಹಿರಿಯ ನಟರೊಟ್ಟಿಗೆ ವಿದೇಶಿ ನಟರೊಬ್ಬರು ನಟಿಸುತ್ತಿರುವ ಈ ಸಿನಿಮಾವು ಇದೀಗ ಎರಡನೇ ಹಂತದ ಚಿತ್ರೀಕರಣ ಮುಗಿಸಿ ಮುಂದಿನ ಹಂತದ ಚಿತ್ರೀಕರಣಕ್ಕೆ ತಯಾರಾಗಿದೆ.

ಎ.ವಿ ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಮೈ ಹೀರೊ” ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಯು ಎಸ್ ಎ ನಲ್ಲಿ ನಡೆಯಲಿದೆ.

ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು. ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.

ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕರೂ ಆಗಿರುವ ಅವಿನಾಶ್ ವಿಜಯ್​ಕುಮಾರ್, ಸ್ಯಾನ್‌ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್‌ನಲ್ಲಿ ನಿರ್ದೇಶನ ಹಾಗೂ ಮುಂಬೈನ ಅನುಪಮ್‌ ಖೇರ್‌ ಫಿಲಂ ಇನ್‌ಸ್ಟಿಟ್ಯೂಟ್‌ನಲ್ಲಿ ಅಭಿನಯ ತರಬೇತಿ ಪಡೆದು ಕೊಂಡಿದ್ದಾರೆ. ಇದು ಇವರ ಮೊದಲ ನಿರ್ದೇಶನದ ಚಿತ್ರ. ಇಡೀ ಪ್ರಪಂಚದಲ್ಲಿರುವ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಕಥೆ ಹೆಣೆದಿದ್ದಾರೆ ಅವಿನಾಶ್. ಅಮೆರಿಕದ ಅಧಿಕಾರಿಯೊಬ್ಬರು ಭಾರತಕ್ಕೆ ಬಂದಾಗ ಹುಡುಗನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಕೆಲವು ಸಿನಿಮಾಗಳಲ್ಲಿ ಭಾರತವನ್ನು ಬಡ ರಾಷ್ಟ್ರ ಎಂದು ಬಿಂಬಿಸಿ ತೋರಿಸಲಾಗುತ್ತದೆ. ಆದರೆ ನಮ್ಮ ಚಿತ್ರದಲ್ಲಿ ಭಾರತವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಿದ್ದೇವೆ. ನಮ್ಮ ಸಿನಿಮಾವನ್ನು ನೋಡಿದ ಮೇಲೆ ಭಾರತವನ್ನು ನೋಡುವ ರೀತಿ ಬದಲಾಗಬಹುದು ಎಂದು ಸಿನಿಮಾ ಸೆಟ್ಟೇರಿದ ಸಂದರ್ಭದಲ್ಲಿ ಅವಿನಾಶ್ ಹೇಳಿದ್ದರು.

ಸಿನಿಮಾದಲ್ಲಿ ದತ್ತಣ್ಣ ಪುರೋಹಿತನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆರಿಕದ ಅಧಿಕಾರಿಯ ಪಾತ್ರದಲ್ಲಿ ಹಾಲಿವುಡ್ ನಟ ಜಿಲ್ಲಾಲಿ ರೆಜ್ ಕಲ್ಲಾಹ್ ನಟಿಸಿದ್ದಾರೆ. ಸಿನಿಮಾದ ಮೊದಲ ಹಂತದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಎರಡನೇ ಹಂತದ ಚಿತ್ರೀಕರಣ ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದೀಗ ಅಮೆರಿಕದಲ್ಲಿ ಮೂರನೇ ಹಂತದ ಚಿತ್ರೀಕರಣ ನಡೆಯಲಿದೆ. ಸಿನಿಮಾವು ಕನ್ನಡ, ಹಿಂದಿ ಹಾಗೂ ಇಂಗ್ಲೀಷ್​ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್