AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮನ ಕೊನೆ ಆಸೆ ಈಡೇರಿಸಲಾಗಲಿಲ್ಲ’; ‘ಮ್ಯಾಕ್ಸ್’ ವೇದಿಕೆ ಮೇಲೆ ಸುದೀಪ್ ಭಾವುಕ

‘ಮ್ಯಾಕ್ಸ್’ ಸಿನಿಮಾದ ಶೂಟ್ ಮುಗಿದು ಬಹಳ ಸಮಯ ಕಳೆದಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ರಿಲೀಸ್ ಆಗಿರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾದ ರಿಲೀಸ್ ವಿಳಂಬ ಆಗಿತ್ತು. ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

‘ಅಮ್ಮನ ಕೊನೆ ಆಸೆ ಈಡೇರಿಸಲಾಗಲಿಲ್ಲ’; ‘ಮ್ಯಾಕ್ಸ್’ ವೇದಿಕೆ ಮೇಲೆ ಸುದೀಪ್ ಭಾವುಕ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Dec 02, 2024 | 2:54 PM

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಡಿಸೆಂಬರ್ 25ರಂದು ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ರಿಲಿಸ್​ಗೂ ಮೊದಲು ಸುದೀಪ್ ಹಾಗೂ ತಂಡ ಸುದ್ದಿಗೋಷ್ಠಿ ನಡೆಸಿದೆ. ಈ ಸುದ್ದಿಗೋಷ್ಠಿ ವೇಳೆ ಸುದೀಪ್ ಅವರು ಅಮ್ಮನ ನೆನಪಿಸಿಕೊಂಡಿದ್ದಾರೆ. ಅಮ್ಮನ ಕೊನೆಯ ಆಸೆ ಈಡೇರಿಸಲಾಗಲಿಲ್ಲ ಎಂಬ ಕೊರಗಿನ ಬಗ್ಗೆ ಹೇಳಿಕೊಂಡಿದ್ದಾರೆ.

‘ಮ್ಯಾಕ್ಸ್’ ಸಿನಿಮಾದ ಶೂಟ್ ಮುಗಿದು ಬಹಳ ಸಮಯ ಕಳೆದಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ರಿಲೀಸ್ ಆಗಿರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾದ ರಿಲೀಸ್ ವಿಳಂಬ ಆಗಿತ್ತು. ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ. ತಾಯಿಗೆ ಮ್ಯಾಕ್ಸ್ ನೋಡುವ ಆಸೆ ಇತ್ತು ಎಂದಿದ್ದಾರೆ ಸುದೀಪ್.

‘ನನ್ನ ತಾಯಿಗೆ ಮ್ಯಾಕ್ಸ್ ನೋಡಬೇಕು ಎನ್ನುವ ಆಸೆ ಇತ್ತು. ಸಿನಿಮಾ ಮುಗ್ದಿದೆ ಹಾಕೋ ಎಂದು ಕೇಳಿದ್ದರು. ನನಗೆ ಆ ಕೊರಗು ಈಗಲೂ ಇದೆ’ ಎಂದಿದ್ದಾರೆ ಸುದೀಪ್. ಈ ಚಿತ್ರದ ಸುದ್ದಿಗೋಷ್ಠಿಯನ್ನು ಅದ್ದೂರಿಯಾಗಿ ಮಾಡುವ ಆಲೋಚನೆ ನಿರ್ಮಾಪಕರಿಗೆ ಇತ್ತು. ಆದರೆ, ಸುದೀಪ್ ಅವರು ಇದಕ್ಕೆ ಸಮ್ಮತಿ ಕೊಡಲಿಲ್ಲ. ‘ನಿರ್ಮಾಪಕರು ದೊಡ್ಡದಾಗಿ ಸುದ್ದಿಗೋಷ್ಠಿ ಮಾಡೋಣ ಎಂದರು. ಆದರೆ ನಾನೇ ಬೇಡ ಎಂದೆ. ಮುಂದಿನ ಬಾರಿ ದೊಡ್ಡದಾಗಿ ಮಾಡಿ ಎಂದೆ. ಸಿನಿಮಾದಲ್ಲಿ ನನ್ನ ತಾಯಿ ಅವರದ್ದೇ ಫಸ್ಟ್ ಕಾರ್ಡ್ ಆಗಿರುತ್ತದೆ. ನಾನು ಹೀಗಾಗುತ್ತದೆ ಎಂದು ಅಂದುಕೊಂಡಿರಲಿಲ್ಲ’ ಎಂದಿದ್ದಾರೆ ಸುದೀಪ್.

ತಾಯಿ ಬದುಕಿದ್ದಾಗ ‘ಮ್ಯಾಕ್ಸ್’ ಚಿತ್ರದ ಕೆಲವು ಚಿಕ್ಕ ಕ್ಲಿಪ್​ಗಳನ್ನು ತೋರಿಸಿದ್ದೇನೆ’ ಎಂದು ಸುದೀಪ್ ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಅಕ್ಟೋಬರ್ 20ರಂದು ಸುದೀಪ್ ತಾಯಿ ಸರೋಜಾ ನಿಧನರಾಗಿದ್ದರು. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು.

ಇದನ್ನೂ ಓದಿ: ಶೋಭಾ ಕಣ್ಣಿಗೆ ಬಟ್ಟೆ; ಹನುಮಂತ ಫಸ್ಟ್​ ನೈಟ್ ಬೆಡ್​ನ ವಿವರಣೆ ಕೊಟ್ಟ ಪರಿಗೆ ಸುದೀಪ್ ಸುಸ್ತು

ತಾಯಿ ನಿಧನದ ಬಳಿಕ ಸುದೀಪ್ ಅವರು ಡಲ್ ಆಗಿದ್ದರು. ಅವರು ಒಂದು ವಾರ ಬಿಗ್ ಬಾಸ್ ನಿರೂಪಣೆಗೂ ಬ್ರೇಕ್ ಕೊಟ್ಟಿದ್ದರು. ಆ ಬಳಿಕ ಮರಳಿ ಅವರು ಕೆಲಸಕ್ಕೆ ಮರಳಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ವೇದಿಕೆ ಮೇಲೂ ತಾಯಿ ಬಗ್ಗೆ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್