AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2026 ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಮೆರುಗು; ಮೆರವಣಿಗೆಯಲ್ಲಿ 30 ತಾರೆಗಳು ಭಾಗಿ

ವಿಶ್ವ ವಿಖ್ಯಾತ ಮೈಸೂರು ದಸರಾ 2026ರ ಜಂಬೂಸವಾರಿಗೆ ಸ್ಯಾಂಡಲ್‌ವುಡ್‌ನ 30 ಪ್ರಮುಖ ನಟ-ನಟಿಯರು ಆಕರ್ಷಣೆ ನೀಡಲಿದ್ದಾರೆ. ಅಂಬಾವಿಲಾಸ ಅರಮನೆಯಿಂದ ಕೆ.ಆರ್. ವೃತ್ತದವರೆಗೆ ತೆರೆದ ಅಂಬಾರಿ ಬಸ್‌ನಲ್ಲಿ ತಾರೆಯರ ಮೆರವಣಿಗೆ ನಡೆಯಲಿದ್ದು, ಕನ್ನಡ ಚಿತ್ರರಂಗದ 93 ವರ್ಷಗಳ ಸುದೀರ್ಘ ಇತಿಹಾಸ ಸಾರುವ ವಿಶೇಷ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ.

ಮೈಸೂರು ದಸರಾ 2026 ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಮೆರುಗು; ಮೆರವಣಿಗೆಯಲ್ಲಿ 30 ತಾರೆಗಳು ಭಾಗಿ
ಯಶ್, ಸುದೀಪ್, ರಿಷಬ್
ರಾಮ್​, ಮೈಸೂರು
| Edited By: |

Updated on: Sep 10, 2026 | 9:50 AM

Share

ಮುಖ್ಯಾಂಶಗಳು

  • ಅಂಬಾರಿ ಬಸ್‌ನಲ್ಲಿ ತಾರೆಗಳ ಮೆರವಣಿಗೆ
  • ಅರಮನೆಯಿಂದ ಕೆ.ಆರ್. ವೃತ್ತದವರೆಗೆ ಸ್ಯಾಂಡಲ್‌ವುಡ್ ಮೆರುಗು
  • ಶಿವಣ್ಣ, ಯಶ್, ಸುದೀಪ್‌ಗೆ ಆಹ್ವಾನ 

‘ವಿಶ್ವ ವಿಖ್ಯಾತ ಮೈಸೂರು ದಸರಾ 2026’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿಯ ಜಂಬೂಸವಾರಿ ಮೆರವಣಿಗೆಗೆ ಈ ಬಾರಿ ಕನ್ನಡ ಚಿತ್ರರಂಗದ ತಾರೆಯರು ವಿಶೇಷ ಮೆರುಗು ನೀಡಲಿದ್ದಾರೆ. ಈ ಬಾರಿಯ ಮೆರವಣಿಗೆಯಲ್ಲಿ ಸ್ಯಾಂಡಲ್‌ವುಡ್‌ನ ಪ್ರಮುಖ 30 ಖ್ಯಾತ ನಟ-ನಟಿಯರು ಭಾಗವಹಿಸಲಿದ್ದಾರೆ. ಇವರೆಲ್ಲರಿಗೂ ವಿಶೇಷ ಆಹ್ವಾನ ಹೋಗಲಿದೆ. ಅಂಬಾವಿಲಾಸ ಅರಮನೆಯಿಂದ ಕೆ.ಆರ್. ವೃತ್ತದವರೆಗೆ ತೆರೆದ ಅಂಬಾರಿ ಬಸ್‌ನಲ್ಲಿ ಈ ಎಲ್ಲಾ ನಟ-ನಟಿಯರು ಸಾಗಲಿದ್ದಾರೆ. ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಜನರನ್ನು ರಂಜಿಸಲಿದ್ದಾರೆ.

ದಿಗ್ಗಜರಿಗೆ ಆಹ್ವಾನ ಹಾಗೂ ನಟಿಯರ ಹಾಜರಿ

ಕನ್ನಡ ಚಿತ್ರರಂಗದ ಪ್ರಮುಖ ನಟರಾದ ರಾಕಿಂಗ್ ಸ್ಟಾರ್ ಯಶ್, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ನಟ ಕಿಚ್ಚ ಸುದೀಪ್ ಹಾಗೂ ಕ್ರೇಜಿ ಸ್ಟಾರ್ ರವಿಚಂದ್ರನ್ ಸೇರಿದಂತೆ ಸಾಲು ಸಾಲು ದಿಗ್ಗಜರಿಗೆ ದಸರಾ ಕಮಿಟಿಯಿಂದ ಆಹ್ವಾನ ನೀಡಲಾಗಿದೆ. ಇವರ ಪೈಕಿ ಯಾರೆಲ್ಲ ಆಗಮಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಷ್ಟೇ ಅಲ್ಲದೆ, ಹಿರಿಯ ನಟಿ ಉಮಾಶ್ರೀ, ರಚಿತಾ ರಾಮ್, ರುಕ್ಮಿಣಿ ವಸಂತ್ ಮತ್ತು ಸಪ್ತಮಿ ಗೌಡ ಸೇರಿದಂತೆ ಕನ್ನಡದ ಜನಪ್ರಿಯ ನಟಿಯರು ಕೂಡ ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಲಿದ್ದಾರೆ. ಸ್ಯಾಂಡಲ್‌ವುಡ್ ತಾರೆಯರಿಗೆ ಆಹ್ವಾನ ನೀಡುವಂತೆ ಸರ್ಕಾರದ ಕಡೆಯಿಂದ ಸೂಚನೆ ಸಿಕ್ಕಿದೆ ಎನ್ನಲಾಗಿದೆ.

93 ವರ್ಷಗಳ ಸ್ಯಾಂಡಲ್‌ವುಡ್ ಇತಿಹಾಸದ ವಿಶೇಷ ಸ್ತಬ್ಧಚಿತ್ರ

ಈ ಬಾರಿಯ ದಸರಾದ ಪ್ರಮುಖ ಆಕರ್ಷಣೆಯಾಗಿ 93 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕನ್ನಡ ಚಿತ್ರರಂಗದ ವೈಭವವನ್ನು ಸಾರುವ ವಿಶೇಷ ಸ್ತಬ್ಧಚಿತ್ರ ನಿರ್ಮಾಣವಾಗಲಿದೆ. 1934ರ ಕಪ್ಪು-ಬೆಳುಪಿನ ಯುಗದಿಂದ ಆರಂಭಗೊಂಡು ಇಂದಿನ ಮಲ್ಟಿಪ್ಲೆಕ್ಸ್ ಹಾಗೂ ಪ್ಯಾನ್-ಇಂಡಿಯಾ ಯುಗದವರೆಗಿನ ಸ್ಯಾಂಡಲ್‌ವುಡ್ ಬೆಳೆದು ಬಂದ ಹಾದಿಯನ್ನು ಈ ಸ್ತಬ್ಧಚಿತ್ರ ಪ್ರದರ್ಶಿಸಲಿದೆ.

ಇದನ್ನೂ ಓದಿ: ಮೈಸೂರು ದಸರಾ ಗಜಪಡೆಯ ತಾಲೀಮಿನ ಆಕರ್ಷಕ ಚಿತ್ರಗಳು ಇಲ್ಲಿವೆ

ಜೊತೆಗೆ, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ವರನಟ ಡಾ. ರಾಜ್‌ಕುಮಾರ್, ಸಾಹಸಸಿಂಹ ಡಾ. ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ವಿಶೇಷ ವಿನ್ಯಾಸದ ಶ್ರದ್ಧಾಂಜಲಿ ಸ್ತಬ್ಧಚಿತ್ರವು ಪ್ರದರ್ಶನಗೊಳ್ಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!