
‘ವಿಶ್ವ ವಿಖ್ಯಾತ ಮೈಸೂರು ದಸರಾ 2026’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿಯ ಜಂಬೂಸವಾರಿ ಮೆರವಣಿಗೆಗೆ ಈ ಬಾರಿ ಕನ್ನಡ ಚಿತ್ರರಂಗದ ತಾರೆಯರು ವಿಶೇಷ ಮೆರುಗು ನೀಡಲಿದ್ದಾರೆ. ಈ ಬಾರಿಯ ಮೆರವಣಿಗೆಯಲ್ಲಿ ಸ್ಯಾಂಡಲ್ವುಡ್ನ ಪ್ರಮುಖ 30 ಖ್ಯಾತ ನಟ-ನಟಿಯರು ಭಾಗವಹಿಸಲಿದ್ದಾರೆ. ಇವರೆಲ್ಲರಿಗೂ ವಿಶೇಷ ಆಹ್ವಾನ ಹೋಗಲಿದೆ. ಅಂಬಾವಿಲಾಸ ಅರಮನೆಯಿಂದ ಕೆ.ಆರ್. ವೃತ್ತದವರೆಗೆ ತೆರೆದ ಅಂಬಾರಿ ಬಸ್ನಲ್ಲಿ ಈ ಎಲ್ಲಾ ನಟ-ನಟಿಯರು ಸಾಗಲಿದ್ದಾರೆ. ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಜನರನ್ನು ರಂಜಿಸಲಿದ್ದಾರೆ.
ಕನ್ನಡ ಚಿತ್ರರಂಗದ ಪ್ರಮುಖ ನಟರಾದ ರಾಕಿಂಗ್ ಸ್ಟಾರ್ ಯಶ್, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ನಟ ಕಿಚ್ಚ ಸುದೀಪ್ ಹಾಗೂ ಕ್ರೇಜಿ ಸ್ಟಾರ್ ರವಿಚಂದ್ರನ್ ಸೇರಿದಂತೆ ಸಾಲು ಸಾಲು ದಿಗ್ಗಜರಿಗೆ ದಸರಾ ಕಮಿಟಿಯಿಂದ ಆಹ್ವಾನ ನೀಡಲಾಗಿದೆ. ಇವರ ಪೈಕಿ ಯಾರೆಲ್ಲ ಆಗಮಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಅಷ್ಟೇ ಅಲ್ಲದೆ, ಹಿರಿಯ ನಟಿ ಉಮಾಶ್ರೀ, ರಚಿತಾ ರಾಮ್, ರುಕ್ಮಿಣಿ ವಸಂತ್ ಮತ್ತು ಸಪ್ತಮಿ ಗೌಡ ಸೇರಿದಂತೆ ಕನ್ನಡದ ಜನಪ್ರಿಯ ನಟಿಯರು ಕೂಡ ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಲಿದ್ದಾರೆ. ಸ್ಯಾಂಡಲ್ವುಡ್ ತಾರೆಯರಿಗೆ ಆಹ್ವಾನ ನೀಡುವಂತೆ ಸರ್ಕಾರದ ಕಡೆಯಿಂದ ಸೂಚನೆ ಸಿಕ್ಕಿದೆ ಎನ್ನಲಾಗಿದೆ.
ಈ ಬಾರಿಯ ದಸರಾದ ಪ್ರಮುಖ ಆಕರ್ಷಣೆಯಾಗಿ 93 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕನ್ನಡ ಚಿತ್ರರಂಗದ ವೈಭವವನ್ನು ಸಾರುವ ವಿಶೇಷ ಸ್ತಬ್ಧಚಿತ್ರ ನಿರ್ಮಾಣವಾಗಲಿದೆ. 1934ರ ಕಪ್ಪು-ಬೆಳುಪಿನ ಯುಗದಿಂದ ಆರಂಭಗೊಂಡು ಇಂದಿನ ಮಲ್ಟಿಪ್ಲೆಕ್ಸ್ ಹಾಗೂ ಪ್ಯಾನ್-ಇಂಡಿಯಾ ಯುಗದವರೆಗಿನ ಸ್ಯಾಂಡಲ್ವುಡ್ ಬೆಳೆದು ಬಂದ ಹಾದಿಯನ್ನು ಈ ಸ್ತಬ್ಧಚಿತ್ರ ಪ್ರದರ್ಶಿಸಲಿದೆ.
ಇದನ್ನೂ ಓದಿ: ಮೈಸೂರು ದಸರಾ ಗಜಪಡೆಯ ತಾಲೀಮಿನ ಆಕರ್ಷಕ ಚಿತ್ರಗಳು ಇಲ್ಲಿವೆ
ಜೊತೆಗೆ, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ವರನಟ ಡಾ. ರಾಜ್ಕುಮಾರ್, ಸಾಹಸಸಿಂಹ ಡಾ. ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ವಿಶೇಷ ವಿನ್ಯಾಸದ ಶ್ರದ್ಧಾಂಜಲಿ ಸ್ತಬ್ಧಚಿತ್ರವು ಪ್ರದರ್ಶನಗೊಳ್ಳಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.