AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ‘ನಾ ನಿನ್ನ ಬಿಡಲಾರೆ’: ‘ಮೇಘ’, ‘ಜಲಂಧರ’ ಚಿತ್ರಗಳ ಜತೆ ಪೈಪೋಟಿ

ಪ್ರತಿ ಶುಕ್ರವಾರ ಬಂದರೆ ಹೊಸ ಸಿನಿಮಾಗಳ ಎಂಟ್ರಿ ಆಗುತ್ತದೆ. ಮನರಂಜನೆ ಬಯಸುವ ಪ್ರೇಕ್ಷಕರಿಗೆ ಬೇರೆ ಬೇರೆ ಕಥಾಹಂದರದ ಸಿನಿಮಾಗಳು ಎದುರಾಗುತ್ತವೆ. ಈ ವಾರ (ನವೆಂಬರ್​ 29) ಕೂಡ ಹೊಸ ಚಿತ್ರಗಳು ತೆರೆಕಾಣುತ್ತಿವೆ. ಹಾರರ್, ಲವ್​ಸ್ಟೋರಿ, ಸಸ್ಪೆನ್ಸ್ ಹೀಗೆ ಹಲವು ಪ್ರಕಾರದ ಸಿನಿಮಾಗಳು ಪ್ರೇಕ್ಷಕರನ್ನು ರಂಜಿಸಲು ಬಂದಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮತ್ತೆ ‘ನಾ ನಿನ್ನ ಬಿಡಲಾರೆ’: ‘ಮೇಘ’, ‘ಜಲಂಧರ’ ಚಿತ್ರಗಳ ಜತೆ ಪೈಪೋಟಿ
‘ನಾ ನಿನ್ನ ಬಿಡಲಾರೆ’, ‘ಮೇಘ’, ‘ಜಲಂಧರ’
ಮದನ್​ ಕುಮಾರ್​
|

Updated on: Nov 28, 2024 | 9:53 PM

Share

ವರ್ಷಾಂತ್ಯ ಸಮೀಪಿಸುತ್ತಿದೆ. ಈ ವರ್ಷವೇ ತೆರೆಕಾಣಬೇಕು ಎಂಬ ಗುರಿ ಇಟ್ಟುಕೊಂಡಿರುವ ಸಿನಿಮಾಗಳು ಒಂದರ ಹಿಂದೊಂದು ಬಿಡುಗಡೆ ಆಗುತ್ತಿವೆ. ಡಿಸೆಂಬರ್​ನಲ್ಲಿ ಬಿಗ್ ಬಜೆಟ್​ ಸಿನಿಮಾಗಳು ಸಾಲು ಸಾಲಾಗಿ ರಿಲೀಸ್ ಆಗಲಿವೆ. ಅದಕ್ಕೂ ಒಂದು ವಾರ ಮುನ್ನ, ಅಂದರೆ, ನ.29ರಂದು ಕೆಲವು ಮಧ್ಯಮ ಬಜೆಟ್​ನ ಸಿನಿಮಾಗಳ ಬಿಡುಗಡೆಗೆ ಅವಕಾಶ ಸಿಕ್ಕಿದೆ. ಆ ಸಮಯವನ್ನು ಉಪಯೋಗಿಸಿಕೊಂಡು ಕನ್ನಡದಲ್ಲೂ ಹೊಸ ಸಿನಿಮಾಗಳು ಬಂದಿವೆ. ‘ನಾ ನಿನ್ನ ಬಿಡಲಾರೆ’, ‘ಮೇಘ’, ‘ಜಲಂಧರ’ ಮುಂತಾದ ಸಿನಿಮಾಗಳು ಈ ವಾರ ಬಿಡುಗಡೆ ಆಗುತ್ತಿವೆ.

ಹಾರರ್​ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕರಿಗೆ ‘ನಾ ನಿನ್ನ ಬಿಡಲಾರೆ’ ಸಿನಿಮಾ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಆ ಟೈಟಲ್​ ಕೇಳಿದರೆ ಪ್ರೇಕ್ಷಕರಿಗೆ ಒಂದು ಬಗೆಯ ಥ್ರಿಲ್ ಆಗುತ್ತದೆ. ಹಾಗಾಗಿ ಅದೇ ಹೆಸರಿನಲ್ಲಿ ಹೊಸ ಸಿನಿಮಾ ಬಿಡುಗಡೆ ಆಗುತ್ತಿದೆ. ನ.29ಕ್ಕೆ ಹೊಸಬರ ‘ನಾ ನಿನ್ನ ಬಿಡಲಾರೆ’ ಸಿನಿಮಾ ರಿಲೀಸ್​ ಆಗುತ್ತಿದೆ. ಈ ಸಿನಿಮಾದಲ್ಲಿ ಅಂಬಾಲಿ ಭಾರತಿ, ಕೆ.ಎಸ್​. ಶ್ರೀಧರ್, ಶ್ರೀನಿವಾಸ್​ ಪ್ರಭು, ಹರಿಣಿ ಶ್ರೀಕಾಂತ್ ಮುಂತಾದವರು ನಟಿಸಿದ್ದಾರೆ.

ಕನ್ನಡದ ಕಿರುತೆರೆಯಿಂದ ಖ್ಯಾತಿ ಪಡೆದಿರುವ ನಟ ಕಿರಣ್ ರಾಜ್ ಅವರು ಹಿರಿತೆರೆಯಲ್ಲೀಗ ಬ್ಯುಸಿಯಾಗಿದ್ದಾರೆ. ಅವರು ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿರಿತೆರೆಯಲ್ಲಿ ಹಲವು ಬಗೆಯ ಪಾತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ. ಕಿರಣ್ ರಾಜ್ ನಟಿಸಿರುವ ರೊಮ್ಯಾಂಟಿಕ್​ ಕಾಮಿಡಿ ಪ್ರಕಾರದ ‘ಮೇಘಾ’ ಸಿನಿಮಾ ಕೂಡ ಈ ವಾರ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಕಾಜಲ್ ಕುಂದರ್​ ಅಭಿನಯಿಸಿದ್ದಾರೆ. ಚರಣ್​ ಹೆಚ್​.ಆರ್​. ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಎಸ್​ಪಿಬಿ ಸ್ಮಾರಕ ನಿರ್ಮಾಣಕ್ಕೆ ತಯಾರಿ; ಬೆಂಗಳೂರಲ್ಲಿ ಡಿ.8ಕ್ಕೆ ಸಂಗೀತ ಕಾರ್ಯಕ್ರಮ

ನಟ ಪ್ರಮೋದ್​ ಶೆಟ್ಟಿ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಳ್ಳುತ್ತಿದ್ದಾರೆ. ಈಗ ಅವರು ‘ಜಲಂಧರ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಕ್ರೈಂ, ಸಸ್ಪೆನ್ಸ್ ಥ್ರಿಲ್ಲರ್​ ಪ್ರಕಾರದ ಈ ಸಿನಿಮಾಗೆ ವಿಷ್ಣು ಪ್ರಸನ್ನ ಅವರು ನಿರ್ದೇಶನ ಮಾಡಿದ್ದಾರೆ. ಋಷಿಕಾ ರಾಜ್, ಬಲರಾಜ್ ವಾಡಿ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಇದರ ಜೊತೆಗೆ ‘ಲಕ್​’, ‘ಇದು ನಮ್ ಶಾಲೆ’, ‘ಅನಾಥ’ ಸೇರಿದಂತೆ ಪರಭಾಷೆಯ ಕೆಲವು ಸಿನಿಮಾಗಳು ಕೂಡ ಬಿಡುಗಡೆ ಆಗುತ್ತಿವೆ. ಪ್ರೇಕ್ಷಕರು ಯಾವ ಸಿನಿಮಾಗೆ ಹೆಚ್ಚು ಮೆಚ್ಚುಗೆ ನೀಡುತ್ತಾರೆ ಎಂಬ ಕೌತುಕ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ