AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಇಲ್ಲಿದೆ ಹಾರರ್ ಟ್ರೇಲರ್

1979ರಲ್ಲಿ ‘ನಾ ನಿನ್ನ ಬಿಡಲಾರೆ’ ಸಿನಿಮಾ ಬಂದಿತ್ತು. ಈಗ ಅದೇ ಶೀರ್ಷಿಕೆಯಲ್ಲಿ ಹೊಸದೊಂದು ಹಾರರ್​ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದ್ದು, ತರುಣ್ ಸುಧೀರ್​, ಚೇತನ್ ಕುಮಾರ್​ ಮುಂತಾದವರು ಶುಭ ಕೋರಿದ್ದಾರೆ. ನವೆಂಬರ್​ 29ರಂದು ‘ನಾ ನಿನ್ನ ಬಿಡಲಾರೆ’ ಚಿತ್ರ ಬಿಡುಗಡೆ ಆಗಲಿದೆ.

‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಇಲ್ಲಿದೆ ಹಾರರ್ ಟ್ರೇಲರ್
‘ನಾ ನಿನ್ನ ಬಿಡಲಾರೆ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Nov 17, 2024 | 8:10 PM

Share

ಹಾರರ್​ ಸಿನಿಮಾ ಇಷ್ಟಪಡುವ ಪ್ರೇಕ್ಷಕರಿಗೆ ‘ನಾ ನಿನ್ನ ಬಿಡಲಾರೆ’ ಚಿತ್ರದ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಅನಂತ್ ನಾಗ್, ಲಕ್ಷ್ಮಿ ಜೋಡಿಯಾಗಿ ನಟಿಸಿದ್ದ ಆ ಸಿನಿಮಾದಲ್ಲಿ ಬೆಚ್ಚಿ ಬೀಳಿಸುವ ಕಥೆ ಇತ್ತು. ಈಗ ಮತ್ತೆ ಅದೇ ಶೀರ್ಷಿಕೆಯನ್ನು ಇಟ್ಟುಕೊಂಡು ಹೊಸ ಹಾರರ್​ ಸಿನಿಮಾ ಮಾಡಲಾಗಿದೆ. ಈ ಚಿತ್ರದಲ್ಲಿ ಕೂಡ ದೆವ್ವ-ಭೂತದ ಕಹಾನಿ ಇದೆ. ಸಿನಿಮಾದ ಝಲಕ್ ತೋರಿಸಲು ಟ್ರೇಲರ್​ ಬಿಡುಗಡೆ ಆಗಿದೆ. ಭಾರತಿ ಬಾಲಿ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನವೀನ್ ಜಿ.ಎಸ್. ಅವರು ನಿರ್ದೇಶನ ಮಾಡಿದ್ದಾರೆ.

‘ನಾ ನಿನ್ನ ಬಿಡಲಾರೆ’ ಸಿನಿಮಾ ನವೆಂಬರ್​ 29ರಂದು ತೆರೆಕಾಣಲಿದೆ. ಈ ಸಿನಿಮಾದಲ್ಲಿ ಅಂಬಾಲಿ ಭಾರತಿ, ಪಂಚಿ, ಕೆ.ಎಸ್. ಶ್ರಿಧರ್, ಹರಿಣಿ ಶ್ರೀಕಾಂತ್, ಮಹಾಂತೇಶ್, ಶ್ರೀನಿವಾಸ್ ಪ್ರಭು ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ಮೂಲಕ ಸಿನಿಮಾ ಬಗ್ಗೆ ಕೌತುಕ ಮೂಡಿಸಲಾಗಿದೆ. ದೆವ್ವ, ಆತ್ಮ, ದೇವರು ಮುಂತಾದ ಕಾನ್ಸೆಪ್ಟ್​ಗಳ ಜೊತೆ ಹಾರರ್​ ಮತ್ತು ಸಸ್ಪೆನ್ಸ್-ಥ್ರಿಲ್ಲಿಂಗ್ ಅಂಶಗಳು ಈ ಸಿನಿಮಾದಲ್ಲಿ ಇವೆ ಎಂಬುದನ್ನು ಟ್ರೇಲರ್ ಮೂಲಕ ತೋರಿಸಲಾಗಿದೆ.

ನಟಿ ಅಂಬಾಲಿ ಭಾರತಿ ಅವರು ಈ ಸಿನಿಮಾದಲ್ಲಿ ಆ್ಯಕ್ಷನ್​ ಮೆರೆದಿದ್ದಾರೆ. ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಖ್ಯಾತ ನಿರ್ದೇಶಕ ಚೇತನ್ ಕುಮಾರ್​ ಅವರು ಈ ಟ್ರೇಲರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಅಂಬಾಲಿ ಭಾರತಿ ಮಾಡಿರುವ ಸಾಹಸ ದೃಶ್ಯಗಳನ್ನು ಅವರು ಹೊಗಳಿದರು.

‘ನಾ ನಿನ್ನ ಬಿಡಲಾರೆ’ ಸಿನಿಮಾ ಟೀಮ್

ಅದೇ ರೀತಿ, ನಿರ್ದೇಶಕ ತರುಣ್ ಸುಧೀರ್​ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ‘ಪಾತ್ರಕ್ಕಾಗಿ ಅಂಬಾಲಿ ಭಾರತಿ ತೆಗೆದುಕೊಂಡ ಸಾಹಸ ದೃಶ್ಯಗಳ ರಿಸ್ಕ್ ಅದ್ಭುತವಾಗಿದೆ. ಈ ಸಿನಿಮಾ ದೊಡ್ಡ ಯಶಸ್ಸು ಕಾಣಲಿ’ ಎಂದು ಅವರು ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ಘೋಷಣೆಯಾಯ್ತು ಭಾರತದ ಅತ್ಯುತ್ತಮ ಹಾರರ್ ಸಿನಿಮಾದ ಎರಡನೇ ಭಾಗ

1979ರಲ್ಲಿ ತೆರೆಕಂಡ ‘ನಾ ನಿನ್ನ ಬಿಡಲಾರೆ’ ಸಿನಿಮಾದಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಕೃಪೆಯ ಬಗ್ಗೆ ತೋರಿಸಲಾಗಿತ್ತು. ಈಗ ಹೊಸ ‘ನಾ ನಿನ್ನ ಬಿಡಲಾರೆ’ ಚಿತ್ರದ ಟ್ರೇಲರ್​ನಲ್ಲಿ ಕೂಡ ರಾಯರ ಪೂಜೆಯ ದೃಶ್ಯಗಳು ಕಾಣಿಸಿವೆ. ಆ ಕಾರಣದಿಂದಲೂ ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಯೂಟ್ಯೂಬ್​ನಲ್ಲಿ ಟ್ರೇಲರ್​ ನೋಡಿದ ಹಲವರು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ