AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಇಲ್ಲಿದೆ ಹಾರರ್ ಟ್ರೇಲರ್

1979ರಲ್ಲಿ ‘ನಾ ನಿನ್ನ ಬಿಡಲಾರೆ’ ಸಿನಿಮಾ ಬಂದಿತ್ತು. ಈಗ ಅದೇ ಶೀರ್ಷಿಕೆಯಲ್ಲಿ ಹೊಸದೊಂದು ಹಾರರ್​ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದ್ದು, ತರುಣ್ ಸುಧೀರ್​, ಚೇತನ್ ಕುಮಾರ್​ ಮುಂತಾದವರು ಶುಭ ಕೋರಿದ್ದಾರೆ. ನವೆಂಬರ್​ 29ರಂದು ‘ನಾ ನಿನ್ನ ಬಿಡಲಾರೆ’ ಚಿತ್ರ ಬಿಡುಗಡೆ ಆಗಲಿದೆ.

‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಇಲ್ಲಿದೆ ಹಾರರ್ ಟ್ರೇಲರ್
‘ನಾ ನಿನ್ನ ಬಿಡಲಾರೆ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Nov 17, 2024 | 8:10 PM

Share

ಹಾರರ್​ ಸಿನಿಮಾ ಇಷ್ಟಪಡುವ ಪ್ರೇಕ್ಷಕರಿಗೆ ‘ನಾ ನಿನ್ನ ಬಿಡಲಾರೆ’ ಚಿತ್ರದ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಅನಂತ್ ನಾಗ್, ಲಕ್ಷ್ಮಿ ಜೋಡಿಯಾಗಿ ನಟಿಸಿದ್ದ ಆ ಸಿನಿಮಾದಲ್ಲಿ ಬೆಚ್ಚಿ ಬೀಳಿಸುವ ಕಥೆ ಇತ್ತು. ಈಗ ಮತ್ತೆ ಅದೇ ಶೀರ್ಷಿಕೆಯನ್ನು ಇಟ್ಟುಕೊಂಡು ಹೊಸ ಹಾರರ್​ ಸಿನಿಮಾ ಮಾಡಲಾಗಿದೆ. ಈ ಚಿತ್ರದಲ್ಲಿ ಕೂಡ ದೆವ್ವ-ಭೂತದ ಕಹಾನಿ ಇದೆ. ಸಿನಿಮಾದ ಝಲಕ್ ತೋರಿಸಲು ಟ್ರೇಲರ್​ ಬಿಡುಗಡೆ ಆಗಿದೆ. ಭಾರತಿ ಬಾಲಿ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನವೀನ್ ಜಿ.ಎಸ್. ಅವರು ನಿರ್ದೇಶನ ಮಾಡಿದ್ದಾರೆ.

‘ನಾ ನಿನ್ನ ಬಿಡಲಾರೆ’ ಸಿನಿಮಾ ನವೆಂಬರ್​ 29ರಂದು ತೆರೆಕಾಣಲಿದೆ. ಈ ಸಿನಿಮಾದಲ್ಲಿ ಅಂಬಾಲಿ ಭಾರತಿ, ಪಂಚಿ, ಕೆ.ಎಸ್. ಶ್ರಿಧರ್, ಹರಿಣಿ ಶ್ರೀಕಾಂತ್, ಮಹಾಂತೇಶ್, ಶ್ರೀನಿವಾಸ್ ಪ್ರಭು ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ಮೂಲಕ ಸಿನಿಮಾ ಬಗ್ಗೆ ಕೌತುಕ ಮೂಡಿಸಲಾಗಿದೆ. ದೆವ್ವ, ಆತ್ಮ, ದೇವರು ಮುಂತಾದ ಕಾನ್ಸೆಪ್ಟ್​ಗಳ ಜೊತೆ ಹಾರರ್​ ಮತ್ತು ಸಸ್ಪೆನ್ಸ್-ಥ್ರಿಲ್ಲಿಂಗ್ ಅಂಶಗಳು ಈ ಸಿನಿಮಾದಲ್ಲಿ ಇವೆ ಎಂಬುದನ್ನು ಟ್ರೇಲರ್ ಮೂಲಕ ತೋರಿಸಲಾಗಿದೆ.

ನಟಿ ಅಂಬಾಲಿ ಭಾರತಿ ಅವರು ಈ ಸಿನಿಮಾದಲ್ಲಿ ಆ್ಯಕ್ಷನ್​ ಮೆರೆದಿದ್ದಾರೆ. ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಖ್ಯಾತ ನಿರ್ದೇಶಕ ಚೇತನ್ ಕುಮಾರ್​ ಅವರು ಈ ಟ್ರೇಲರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಅಂಬಾಲಿ ಭಾರತಿ ಮಾಡಿರುವ ಸಾಹಸ ದೃಶ್ಯಗಳನ್ನು ಅವರು ಹೊಗಳಿದರು.

‘ನಾ ನಿನ್ನ ಬಿಡಲಾರೆ’ ಸಿನಿಮಾ ಟೀಮ್

ಅದೇ ರೀತಿ, ನಿರ್ದೇಶಕ ತರುಣ್ ಸುಧೀರ್​ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ‘ಪಾತ್ರಕ್ಕಾಗಿ ಅಂಬಾಲಿ ಭಾರತಿ ತೆಗೆದುಕೊಂಡ ಸಾಹಸ ದೃಶ್ಯಗಳ ರಿಸ್ಕ್ ಅದ್ಭುತವಾಗಿದೆ. ಈ ಸಿನಿಮಾ ದೊಡ್ಡ ಯಶಸ್ಸು ಕಾಣಲಿ’ ಎಂದು ಅವರು ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ಘೋಷಣೆಯಾಯ್ತು ಭಾರತದ ಅತ್ಯುತ್ತಮ ಹಾರರ್ ಸಿನಿಮಾದ ಎರಡನೇ ಭಾಗ

1979ರಲ್ಲಿ ತೆರೆಕಂಡ ‘ನಾ ನಿನ್ನ ಬಿಡಲಾರೆ’ ಸಿನಿಮಾದಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಕೃಪೆಯ ಬಗ್ಗೆ ತೋರಿಸಲಾಗಿತ್ತು. ಈಗ ಹೊಸ ‘ನಾ ನಿನ್ನ ಬಿಡಲಾರೆ’ ಚಿತ್ರದ ಟ್ರೇಲರ್​ನಲ್ಲಿ ಕೂಡ ರಾಯರ ಪೂಜೆಯ ದೃಶ್ಯಗಳು ಕಾಣಿಸಿವೆ. ಆ ಕಾರಣದಿಂದಲೂ ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಯೂಟ್ಯೂಬ್​ನಲ್ಲಿ ಟ್ರೇಲರ್​ ನೋಡಿದ ಹಲವರು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ