AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಪ್ರಭು ಕೆಂಪೇಗೌಡರ ಜೀವನ ಆಧರಿಸಿ ಬರ್ತಿದೆ ಸಿನಿಮಾ; ನಟಿಸಲಿದ್ದಾರೆ ಕನ್ನಡದ ಜನಪ್ರಿಯ ನಟ

ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಅವರು ಬೆಂಗಳೂರು ಕಟ್ಟಿದ್ದು ಹೇಗೆ ಎಂಬ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸಲಾಗುತ್ತಿದೆ. ರಾಜ್ಯ ಪ್ರಶಸ್ತಿ ವಿಜೇತ ದಿನೇಶ್ ಬಾಬು ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ನಾಡಪ್ರಭು ಕೆಂಪೇಗೌಡರ ಜೀವನ ಆಧರಿಸಿ ಬರ್ತಿದೆ ಸಿನಿಮಾ; ನಟಿಸಲಿದ್ದಾರೆ ಕನ್ನಡದ ಜನಪ್ರಿಯ ನಟ
ಕೆಂಪೇಗೌಡ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 06, 2024 | 12:33 PM

Share

ಕನ್ನಡ ಚಿತ್ರರಂಗದಲ್ಲಿ ನಾಡಪ್ರಭು ಕೆಂಪೇಗೌಡರ (Kempegowda) ಜೀವನ ಆಧರಿಸಿ ಸಂಪೂರ್ಣ ಸಿನಿಮಾ ಬಂದಿಲ್ಲ. ಕೆಲವು ಸಿನಿಮಾಗಳಲ್ಲಿ ಇವರ ಬಗ್ಗೆ ಹೇಳಲಾಗಿದೆ. ಇನ್ನೂ ಕೆಲವು ಸಿನಿಮಾಗಳಲ್ಲಿ ಅವರ ಬಗ್ಗೆ ತೋರಿಸಲಾಗಿದೆ. ಈಗ ಕೆಂಪೇಗೌಡರ ಜೀವನ ಚರಿತ್ರೆ ಆಧರಿಸಿ ಸಿನಿಮಾ ಮಾಡಲು ತಯಾರಿ ನಡೆದಿದೆ. ಬೆಂಗಳೂರು ಕಟ್ಟಿದ ನಾಡಪ್ರಭುವಿನ‌ ಕಥೆ ಸಿನಿಮಾ ಆಗಲಿದೆ. ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.

ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಅವರು ಬೆಂಗಳೂರು ಕಟ್ಟಿದ್ದು ಹೇಗೆ ಎಂಬ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸಲಾಗುತ್ತಿದೆ. ರಾಜ್ಯ ಪ್ರಶಸ್ತಿ ವಿಜೇತ ದಿನೇಶ್ ಬಾಬು ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿದ ಅನುಭವ ದಿನೇಶ್ ಬಾಬು ಅವರಿಗೆ ಇದೆ. ಈಗ ಅವರು ಈ ಐತಿಹಾಸಿಕ ಕಥೆಯುಳ್ಳ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಕೆಂಪೇಗೌಡರ ಪಾತ್ರದಲ್ಲಿ ಯಾರು ಬಣ್ಣ ಹಚ್ಚುತ್ತಾರೆ ಎನ್ನುವ ಕುತೂಹಲ ಮೂಡೋದು ಸಹಜ. ಇದನ್ನು ಚಿತ್ರತಂಡ ರಿವೀಲ್ ಮಾಡಿಲ್ಲ. ಖ್ಯಾತ ನಟರೊಬ್ಬರು ಈ ಪಾತ್ರ ಮಾಡಲಿದ್ದಾರಂತೆ. ಮುಂದಿನ ದಿನಗಳಲ್ಲಿ ಚಿತ್ರತಂಡ ಈ ಬಗ್ಗೆ ಮಾಹಿತಿ ನೀಡಲಿದೆ.

ಕಿರಣ್ ತೋಟಂಬೈಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅವರು ವೃತ್ತಿಯಲ್ಲಿ ವೈದ್ಯರು. ಕೆಂಪೇಗೌಡ ಮೆಡಿಕಲ್ ಕಾಲೇಜ್‌ನಲ್ಲಿ ಅವರು ಶಿಕ್ಷಣ ಪಡೆದಿದ್ದಾರೆ. ಆಗಲೇ ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಬೇಕು ಅಂದುಕೊಂಡಿದ್ದರು. ಅದರಂತೆ ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ವಿದೇಶಿ ಪ್ರಜೆ ಹುಚ್ಚಾಟ; ಮಹಿಳಾ ತಪಾಸಣಾ ಕೊಠಡಿಗೆ ನುಗ್ಗಲು ಯತ್ನ

ಧರ್ಮೇಂದ್ರ ಕುಮಾರ್ ಅರೇನಹಳ್ಳಿ  ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಸಿನಿಮಾಗೆ ಕಥೆ ಬರೆದಿದ್ದಾರೆ. ಸಂಕೇತ್ ಎಂವೈಎಸ್ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಚಿತ್ರಕ್ಕಿದೆ. ಕಿರಣ್ ತೋಟಂಬೈಲ್ ಅವರೇ ಸಂಗೀತ ನೀಡುತ್ತಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಸಾಹಿತ್ಯ ಬರೆದಿದ್ದಾರೆ. ಮಾಸ್ತಿ ಹಾಗೂ ರಘು‌ ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಕನ್ನಡದ ಜೊತೆ ಇಂಗ್ಲಿಷ್​ನಲ್ಲೂ ಸಿನಿಮಾ ನಿರ್ಮಾಣವಾಗಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ‌ ಸಿನಿಮಾಗೆ ಮುಹೂರ್ತ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ