AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಭೂಷಣ್ ಕಾರು ಅಪಘಾತ, ಪ್ರಕರಣದ ಬಗ್ಗೆ ವಿವರ ನೀಡಿದ ಡಿಸಿಪಿ

Nagabhushan: ನಟ ನಾಗಭೂಷಣ್ ಕಾರು ಅಪಘಾತಕ್ಕೆ ಈಡಾಗಿದ್ದು, ಈ ಅಪಘಾತದಲ್ಲಿ ಪಾದಾಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಕರಣದ ಬಗ್ಗೆ ಡಿಸಿಪಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದ್ದಾರೆ.

ನಾಗಭೂಷಣ್ ಕಾರು ಅಪಘಾತ, ಪ್ರಕರಣದ ಬಗ್ಗೆ ವಿವರ ನೀಡಿದ ಡಿಸಿಪಿ
ನಾಗಭೂಷಣ್
ಮಂಜುನಾಥ ಸಿ.
|

Updated on: Oct 01, 2023 | 3:52 PM

Share

ನಟ ನಾಗಭೂಷಣ್ (Nagabhushan) ಕಾರು ನಿನ್ನೆ (ಸೆಪ್ಟೆಂಬರ್ 30) ರಾತ್ರಿ ಅಪಘಾತಕ್ಕೆ ಈಡಾಗಿದ್ದು ಮಹಿಳೆಯೋರ್ವರು ಸಾವಿಗೀಡಾಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೆಪ್ಟೆಂಬರ್ 30ರಂದು ರಾತ್ರಿ 9-30 ಕ್ಕೆ ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆಯಲ್ಲಿ ನಾಗಭೂಷಣ್ ಕಾರು ಇಬ್ಬರು ಪಾದಾಚಾರಿಗಳಾದ ಕೃಷ್ಣ ಮತ್ತು ಪ್ರೇಮಾ ಎಂಬುವರಿಗೆ ಗುದ್ದಿತ್ತು. ಇವರಲ್ಲಿ ಪ್ರೇಮಾ ನಿಧನ ಹೊಂದಿದ್ದಾರೆ.

ಅತಿವೇಗ ಮತ್ತು ನಿರ್ಲಕ್ಷ್ಯತೆಯಿಂದ ಕಾರು ಚಾಲಕ ವಾಹನ ಓಡಿಸಿದ್ದು ಅಪಘಾತಕ್ಕೆ ಕಾರಣವಾಗಿದೆ ಎಂದಿರುವ ಡಿಸಿಪಿ ಶಿವಪಕ್ರಾಶ್ ದೇವರಾಜ್ ಕಾರು ಚಾಲಕ ಫಿಲಂ ಆ್ಯಕ್ಟರ್ ನಾಗಭೂಷಣ್ ರನ್ನ ಅರೆಸ್ಟ್ ಮಾಡಿ ಸ್ಟೇಷನ್ ಬೇಲ್​ ಮೇಲೆ ಬಿಡುಗಡೆ ಮಾಡಲಾಗಿದೆ. ಮುಂದಿನ ವಿಚಾರಣೆಗೆ ಮತ್ತೆ ಕರೆಯಲಾಗುತ್ತದೆ. ಅತಿ ವೇಗದಿಂದ ಕಾರು ಚಲಾವಣೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ರಾತ್ರಿಯೇ ಆಲ್ಕೊ ಹಾಲ್ ಟೆಸ್ಟಿಂಗ್ ಮೀಟರ್ ನಲ್ಲಿ ನಾಗಭೂಷಣ್ ಮದ್ಯ ಸೇವಿಸಿಲ್ಲ ಎಂಬ ಅಂಶ ಪತ್ತೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ನಟ ನಾಗಭೂಷಣ್​ ಕಾರು ಅಪಘಾತ; ಪಾದಚಾರಿ ಸಾವು; ಇನ್ನೊಬ್ಬರ ಸ್ಥಿತಿ ಗಂಭೀರ

ನಾಗಭೂಷಣ್​ರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಅಲ್ಲಿಯೂ ಸಹ ನಾಗಭೂಷಣ್ ಮದ್ಯ ಸೇವನೆ ಮಾಡಿಲ್ಲ ಎಂದೇ ವರದಿ ಬಂದಿದೆ. ಪ್ರಸ್ತುತ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಗಭೂಷಣ್ ವಿರುದ್ಧ ಐಪಿಸಿ ಸೆಕ್ಷನ್ 279 , 337, 304A ಅಡಿ ಕೇಸ್, IPC 279 ನಿರ್ಲಕ್ಷ್ಯತೆ, ರ್ಯಾಷ್ ಡ್ರೈವಿಂಗ್, ಫುಟ್ಪಾತ್ ಮೇಲೆ ಚಾಲನೆ, ಐಪಿಸಿ ಸೆಕ್ಷನ್ 337-ಜೀವಕ್ಕೆ ಹಾನಿ ಮಾಡುವುದು, ಐಪಿಸಿ ಸೆಕ್ಷನ್ 304A ಪ್ರಕರಣಗಣನ್ನು ನಾಗಭೂಷಣ್ ವಿರುದ್ಧ ದಾಖಲಿಸಲಾಗಿದೆ. ಪ್ರಸ್ತುತ ಸ್ಪೇಷನ್ ಬೇಲ್ ಮೇಲೆ ನಾಗಭೂಷಣ್ ಬಿಟ್ಟು ಪೊಲೀಸರು ಕಳಿಸಿದ್ದು, ಮಂಗಳವಾರ ಮಂಗಳವಾರ ಠಾಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ